ಕರ್ನಾಟಕಕ್ಕೆ ಪ್ರತಿ ನಿತ್ಯ 325 ಟನ್ ಆಕ್ಸಿಜನ್ ಪೂರೈಕೆ : ಜಿಂದಾಲ್ ಸ್ಪಷ್ಟನೆ
ಬೆಂಗಳೂರು, ಏಪ್ರಿಲ್ 27: ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಬಳಿಯಿರುವ ಜಿಂದಾಲ್ ಸ್ಟೀಲ್ ಸಂಸ್ಥೆ ರಾಜ್ಯಕ್ಕೆ ಪ್ರತಿದಿನ ವೈದ್ಯಕೀಯ ಸೇವೆಗಾಗಿ ಲಿಕ್ವಿಡ್ ಆಕ್ಸಿಜನ್ ಪೂರೈಕೆ ಮಾಡುತ್ತಿದೆ ಎಂದು ಜಿಂದಾಲ್ ಸಂಸ್ಥೆ ಸ್ಪಷ್ಟೀಕರಣ ನೀಡಿದೆ. ಕೊರೋನಾ ಎರಡನೇ ಅಲೆ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಎದುರಾಗಿತ್ತು. ರೋಗಿಗಳ ಜೀವ ಉಳಿಸಲು ಆಕ್ಸಿಜನ್ ಇಲ್ಲದೇ ಆಸ್ಪತ್ರೆಗಳೇ ಬೀಗ ಹಾಕಲು ಮುಂದಾಗಿದ್ದವು. ಈ ಕುರಿತು ವಿಶೇಷ ವರದಿ ಪ್ರಕಟಿಸಿದ್ದ ಒನ್ಇಂಡಿಯಾ ಕನ್ನಡ, ಜಿಂದಾಲ್ ಹೊರ ರಾಜ್ಯಗಳಿಗೆ ಆಕ್ಸಿಜನ್ ಪೂರೈಕೆ ಮಾಡುವುದನ್ನು ಪ್ರಶ್ನಿಸಿತ್ತು.
ಅಲ್ಲದೇ ಕರ್ನಾಟಕಕ್ಕೆ ಪೂರ್ಣ ಪ್ರಮಾಣದ ಆಕ್ಸಿಜನ್ ಜಿಂದಾಲ್ ಪೂರೈಕೆ ಮಾಡಬೇಕಿತ್ತು ಎಂಬುದನ್ನು ಉಲ್ಲೇಖಿಸಿ ವರದಿ ಪ್ರಕಟಿಸಿತ್ತು. ಸ್ಟೀಲ್ಪ್ಲಾಂಟ್ಗಳಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ವೈದ್ಯಕೀಯ ಕ್ಷೇತ್ರಕ್ಕೆ ಪೂರೈಕೆ ಮಾಡುವ ಸಂಬಂಧ ಕೇಂದ್ರ ಸರ್ಕಾರ ನೀಡಿದ್ದ ವಿನಾಯ್ತಿ ಬಗ್ಗೆಯೂ ವರದಿ ಧ್ವನಿಯೆತ್ತಿತ್ತು.
ಈ ಕುರಿತು ಸ್ಪಷ್ಟನೆ ನೀಡಿರುವ ಜೆಎಸ್ಡಬ್ಲೂ ಸ್ಟೀಲ್ ಲಿಮಿಟೆಡ್, ತೋರಣಗಲ್ಲು ಘಟಕದಲ್ಲಿ ಜಿಂದಾಲ್ ಸ್ಟೀಲ್ ಒಟ್ಟು ನಾಲ್ಕು ಆಕ್ಸಿಜನ್ ಉತ್ಪಾದನಾ ಘಟಕ ಹೊಂದಿದೆ. ಪ್ರತಿದಿನ ಜೆಎಸ್ಡಬ್ಲೂ ಇಂಡಸ್ಟ್ರಿಯಲ್ ಗ್ಯಾಸ್ ಪ್ರೆ. ಲಿ, ಮೆ. ಬಳ್ಳಾರಿ ಆಕ್ಸಿಜನ್ ಕಂಪನಿ ಪ್ರೆ. ಲಿ, ಮೆ. ಏರ್ ವಾಟರ್ ಇಂಡಿಯಾ ಪ್ರೆ. ಲಿ, ಮೆ. ಪ್ರಾಕ್ವೈರ್ ಇಂಡಿಯಾ ಪ್ರೆ. ಲಿ ವತಿಯಿಂದ ಪ್ರಸ್ತುತ ದಿನಕ್ಕೆ ಅಂದಾಜು 650 ಟನ್ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯ ಇದೆ. ಇದರಲ್ಲಿಕರ್ನಾಟಕಕ್ಕೆ ಪ್ರತಿ ನಿತ್ಯ ಸರಾಸರಿ 350 ಟನ್ ಸರಬರಾಜು ಮಾಡುತ್ತಿದೆ. ಇತ್ತೀಚೆಗೆ 425 ಟನ್ ಸರಬರಾಜು ಮಾಡುತ್ತಿದ್ದು, ಉಳಿದ 225 ಮೆಟ್ರಿಕ್ ಟನ್ ಇತರೆ ರಾಜ್ಯಗಳಿಗೆ ಸರಬರಾಜು ಮಾಡುತ್ತಿದೆ ಎಂದು ಜಿಂದಾಲ್ ಸಂಸ್ಥೆ ತಿಳಿಸಿದೆ.

ವಿಶೇಷ ಎಂದರೆ, ಒನ್ಇಂಡಿಯಾ ಕನ್ನಡ ವರದಿ ಬೆನ್ನನ್ನೇ ಕೇಂದ್ರ ಸರ್ಕಾರ ಲಿಕ್ವಿಡ್ ಆಕ್ಸಿಜನ್ ಉತ್ಪಾದನೆ ಮಾಡುವ ಎಲ್ಲಾ ಸ್ಟೀಲ್ ಪ್ಲಾಂಟ್ಗಳಿಗೆ ನೀಡಿದ್ದ ವಿನಾಯಿತಿಯನ್ನು ರದ್ದು ಪಡಿಸಿತ್ತು. ಸ್ಟೀಲ್ ಪ್ಲಾಂಟ್ಗಳಲ್ಲಿ ಉತ್ಪಾದನೆಯಾಗುವ ಲಿಕ್ವಿಡ್ ಆಕ್ಸಿಜನ್ ಕೇವಲ ವೈದ್ಯಕೀಯ ಬಳಕೆಗಾಗಿ ಪೂರೈಕೆ ಮಾಡಬೇಕು ಎಂದು ಕೇಂದ್ರ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದು, ಇದೀಗ ವೈದ್ಯಕೀಯ ರಂಗದಲ್ಲಿ ಆಕ್ಸಿಜನ್ ಕೊರತೆಗೆ ಎದುರಾಗಿದ್ದ ಕೊರತೆಯನ್ನು ನೀಗಿಸಲು ನೆರವಾಗಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications