ಉದ್ಯೋಗ ಮೇಳ-2024: ನೋಂದಣಿಯಲ್ಲಿ ಧಾರವಾಡಕ್ಕೆ 2ನೇ ಸ್ಥಾನ, ಮೊದಲ ಸ್ಥಾನ ಯಾವ ಜಿಲ್ಲೆಗೆ?
ಬೆಂಗಳೂರು, ಫೆಬ್ರವರಿ 24: ಕರ್ನಾಟಕ ರಾಜ್ಯ ಸರ್ಕಾದ ಕೌಶಲ್ಯಾಭಿವೃದ್ಧಿ ಇಲಾಖೆಯು ಬೆಂಗಳೂರಿನಲ್ಲಿ ನಿರುದ್ಯೋಗಿಗಳಾಗಿ 'ಯುವ ಸಮೃದ್ಧಿ' ಮೇಳ ಹೆಸರಿನಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ- 2024 ಹಮ್ಮಿಕೊಳ್ಳಲಾಗಿದೆ. ಇದೀಗ ಈ ಮೇಳದಲ್ಲಿ ಪಾಲ್ಗೊಳ್ಳಲು ಈವರೆಗೆ ಬರೊಬ್ಬರಿ 54 ಸಾವಿರಕ್ಕೂ ಅಧಿಕ ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಹಾಗಾದರೆ ಅತೀ ಹೆಚ್ಚು ಮತ್ತು ಅತೀ ಕಡಿಮೆ ನೋಂದಣಿ ಮಾಡಿಕೊಂಡ ಜಿಲ್ಲೆಗಳು ಯಾವುವು? ಇಲ್ಲಿ ತಿಳಿಯಿರಿ.
ಮೇಳದಲ್ಲಿ ಪಾಲ್ಗೊಂಡು ಕೆಲಸ ಪಡೆಯಲು ನಿರುದ್ಯೋಗಿ ಅಭ್ಯರ್ಥಿಗಳು ಈಗಾಗಲೇ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ ನೋಂದಣಿಯಲ್ಲಿ ಬಳ್ಳಾರಿ ಜಿಲ್ಲೆಯು (4611) ಮೂರನೇ ಸ್ಥಾನದಲ್ಲಿದೆ. ಇನ್ನೂ ಧಾರವಾಡ (4908) ಎರಡನೇ ಸ್ಥಾನದಲ್ಲಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಮೊದಲ ಸ್ಥಾನದ ಜಿಲ್ಲೆಯಲ್ಲಿ ಎಷ್ಟು ನೋಂದಣಿ
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ (7599) ಹೆಚ್ಚಿನ ನಿರುದ್ಯೋಗಿಗಳು ಉದ್ಯೋಗ ಮೇಳಕ್ಕಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಯಾದಗಿರಿ (600) ಜಿಲ್ಲೆಯು ಕೊನೆ ಸ್ಥಾನದಲ್ಲಿದೆ. ಅಲ್ಲದೇ ಸರ್ಕಾರ ಯುವನಿಧಿಗೆ ಹೆಸರು ನೋಂದಾಯಿಸಿಕೊಂಡ ಒಂದು ಲಕ್ಷಕ್ಕೂ ಹೆಚ್ಚು ನಿರುದ್ಯೋಗಿ ಅಭ್ಯರ್ಥಿಗಳಿಗೆ ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ತಿಳಿಸಲಾಗಿದೆ.
577 ಕಂಪನಿಗಳು ಭಾಗಿ
ಈ ಮೇಳದಲ್ಲಿ 577 ಕಂಪನಿಗಳು ಭಾಗವಹಿಸಲಿವೆ. ಇದರಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಂಪನಿಗಳು ಇರಲಿವೆ. ಈ ಕಂಪನಿಗಳು ಎಷ್ಟು ಮಂದಿ ಸಂದರ್ಶನ ಮಾಡುತ್ತವೆ ಎಂಬ ನಿಖರ ಮಾಹಿತಿ ನೀಡಬೇಕು. ಎಷ್ಟು ಮಂದಿಗೆ ಉದ್ಯೋಗ ನೀಡಲಾಗಿದೆ ಎಂಬೆಲ್ಲ ಖಚಿತ ಮಾಹಿತಿ ಒದಗಿಸಬೇಕು.
ಒಂದು ಲಕ್ಷದಷ್ಟು ಉದ್ಯೋಗಗಳು ಖಾಲಿ ಇವೆ. ಕಂಪನಿಗಳು ಸಂದರ್ಶನದಲ್ಲಿ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಕನಿಷ್ಠ ವೇತನ ಕಾನೂನಿನಡಿ ವೇತನ ನೀಡಬೇಕು ಎಂದು ರಾಜ್ಯ ಸರ್ಕಾರ ತಾಕೀತು ಮಾಡಿದೆ. ಕಾಂಟ್ರ್ಯಾಕ್ಟ್, ಇಲ್ಲವೇ ಅಪ್ರೆಂಟಿಸ್ ಆಧಾರದಲ್ಲಿ ಉದ್ಯೋಗ ಕೊಟ್ಟರೆ ಅವರಿಗೆ ನಿಯಮಾವಳಿ ಸಾರ ವೇತನ ಒದಗಿಸಬೇಕು ಎಂದು ಸರ್ಕಾರ ಸೂಚಿಸಿದೆ.

ನೋಂದಣಿ ಮಾಡಿಕೊಳ್ಳುವುದು ಹೇಗೆ?
ಈ ಉದ್ಯೋಗ ಮೇಳವು ಇದೇ ಫೆಬ್ರವರಿ 26 ಮತ್ತು 27 ರಂದು ನಡೆಯಲಿದೆ. ಆಸಕ್ತರು ನೋಂದಾಣಿ ಮಾಡಿಕೊಳ್ಳಲು ಇಲಾಖೆ ಅಧಿಕೃತ ಜಾಲತಾಣ https://skillconnect.kaushalkar.com/ ಇಲ್ಲಿಗೆ ಭೇಟಿ ನೀಡಿ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 180059 99918 ಗೆ ಸಂಪರ್ಕಿಸುವಂತೆ ಇಲಾಖೆ ತಿಳಿಸಿದೆ.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications