Jog Falls: ಗತವೈಭವಕ್ಕೆ ಮರಳಿದ ವಿಶ್ವ ಪ್ರಸಿದ್ಧ ಜೋಗ ಜಲಪಾತ: ಮುಂದುವರಿದ ಭಾರೀ ಮಳೆ
ಬೆಂಗಳೂರು, ಆಗಸ್ಟ್ 19: ಮಲೆನಾಡಿನ ದಟ್ಟ ಹಸಿರು ಕಾನನ ಹಾಲಿ ನೊರೆಯಂತೆ ಧುಮ್ಮುಕ್ಕಿವ ವಿಶ್ವ ವಿಖ್ಯಾತ ಜೋಗ ಜಲಪಾತ (Jog Falls) ನೋಡಗರ ಕಣ್ಮನ ಸಳೆಯುತ್ತಿದೆ. ಎತ್ತರದಿಂದ ಭೋರ್ಗರೆಯುತ್ತಿರುವ ನೀರನ್ನು ನೋಡಲು ಪ್ರವಾಸಿಗರ ದಂಡೆ ಆಗಮಿಸುತ್ತಿದೆ. ನಿರಂತರವಾಗಿ ಸುರಿದ ಮುಂಗಾರು ಮಳೆಯಿಂದ ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತಕ್ಕೆ ಜೀವ ಕಳೆ ಬಂದಿದೆ. ಈ ವರ್ಷದಲ್ಲೇ ಮಂಗಳವಾರ ಅತ್ಯಧಿಕ ಪ್ರಮಾಣದಲ್ಲಿ ನೀರು ಬೀಳುತ್ತಿರುವ ನಯನ ಮನೋಹರ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಯಿತು.
ಮಲೆನಾಡಿನ ಭಾಗದಲ್ಲಿ ತಿಂಗಳುಗಳಿಂದ ಮುಂಗಾರು ಮಳೆ ಸುರಿಯುತ್ತಲೇ ಇದೆ. ಇಂದಿಗೂ ಮುಂದುವರಿದಿದೆ. ಭಾರೀ ಮಳೆಗೆ ಶರಾವತಿ ನದಿ ಉಕ್ಕಿ ಹರಿಯುತ್ತಿದೆ. ಈ ನದಿಗೆ ಅಡ್ಡಲಾಗಿ ಕಟ್ಟಿರುವ ಪ್ರಮುಖ ಜಲಾಶಯವಾದ ಆಲಮಟ್ಟಿಯಿಂದ ಮಂಗಳವಾರ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಯಿತು. ಇದರಿಂದ ಜೋಗ ಜಲಪಾತದಲ್ಲಿ ಅತ್ಯಧಿಕ ಪ್ರಮಾಣದ ನೀರು ಹರಿಯಿತು. ನಿರಂತರ ಮಳೆಗೆ ನದಿ, ಡ್ಯಾಂ, ಜಲಪಾತಗಳು ತುಂಬಿ ಹರಿಯುತ್ತಿವೆ. ಪ್ರವಾಸಿರನ್ನು ತನ್ನತ್ತ ಸೆಳೆಯುತ್ತಿರುವ ಜೋಗ ಜಲಪಾತ ನೋಡಲು ಬೇರೆ ಬೇರೆ ಜಿಲ್ಲೆಗಳಿಂದ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ.

11 ಗೇಟ್ಗಳಿಂದ ಅಪಾರ ನೀರು ಬಿಡುಗಡೆ
ಹಲವು ದಿನಗಳಿಂದ ಭಾರಿ ಮಳೆ ಮುಂದುವರಿದ ಪರಿಣಾಮ ಶರಾವತಿ ನದಿಯಲ್ಲಿ ಒಳಹರಿವು ಹೆಚ್ಚಾಗುತ್ತಿದೆ. ಇದರಿಂದ ಅಣೆಕಟ್ಟು ಬಹುತೇಕ ಭರ್ತಿಯಾಗಿದ್ದು, ಅದರ ಒಳಹರಿವು ಸಹ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕ ಪವರ್ ಕಾರ್ಪೋರೇಷನ್ ಲಿಮಿಟೆಡ್ (KPCL) ಮಂಗಳವಾರ ಡ್ಯಾಂನ ಒಂದೊಂದೇ ಗೇಟ್ ತೆಗೆದು ನೀರು ಬಿಡುಗಡೆ ಮಾಡಿತು. ಮಧ್ಯಾಹ್ನದ ಹೊತ್ತಿಗೆ ಬರೋಬ್ಬರಿ 11 ಗೇಟ್ಗಳನ್ನು ತೆಗೆದು ನೀರು ಹೊರ ಬೀಡಲಾಯಿತು. ಸುಮಾರು 15000 ಕ್ಕೂ ಅಧಿಕ ಕ್ಯೂಸೆಕ್ ನೀರು ಹೊರ ಬಿಡಲಾಗಿದೆ. ಹೀಗಾಗಿ ಜೋಗ ಜಲಪಾತದಲ್ಲಿ ಧುಮ್ಮಿಕ್ಕುವ ನೀರಿನ ಪ್ರಮಾಣ ಹೆಚ್ಚಾಯಿತು.
ಜಲಪಾತದ ನಾಲ್ಕು 'ರಾಜಾ, ರಾಣಿ, ರೋರರ್ ಮತ್ತು ರಾಕೆಟ್' ಕವಲುಗಳಿಂದ ನೀರು ಮೈದುಂಬಿ ಹರಿದ ದೃಶ್ಯ ನೋಡಿದ ಪ್ರವಾಸಿಗರು ಸಂತಗೊಂಡರು. ಫೋಟೋ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೋಗಕ್ಕೆ ಬರುವ ಪ್ರವಾಸಿಗರಿಗೆ ಅನುಕೂಲ ಆಗಬೇಕು ಎಂಬ ಕಾರಣಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಾರ್ವಜನಿಕ ಸಾರಿಗೆ ಪ್ಯಾಕೇಜ್ಗಳನ್ನು ಈಗಾಲೇ ಘೋಷಿಸಲಾಗಿದೆ.
Jog falls💚#jogfalls pic.twitter.com/aWl05KAk3l
— Kanthesh (@KantheshPg) August 19, 2025
ಹಾವೇರಿ, ಹುಬ್ಬಳ್ಳಿ-ಧಾರವಾಡ ಭಾಗದಿಂದ ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ವಿಶೇಷ ಟೂರ್ ಪ್ಯಾಕೇಜ್ ಘೋಷಿಸಿದೆ. ಪ್ರತಿ ಶನಿವಾರ ಮತ್ತು ಭಾನುವಾರ ಹಾಗೂ ರಜಾ ದಿನಗಳಲ್ಲಿ ಒಂದು ದಿನದಲ್ಲಿ ಜೋಗ ಜಲಪಾತಕ್ಕೆ ಕರೆದುಕೊಂಡು ಬರುವ ವ್ಯವಸ್ಥೆ ಮಾಡಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications