ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂಕೆ ಗಣಪತಿ ಪ್ರಕರಣ: ನ್ಯಾಯಾಂಗ ವರದಿಗೆ ಬೆಲೆ ಇಲ್ಲ!

By Mahesh
|
Google Oneindia Kannada News

ಬೆಂಗಳೂರು, ಫೆಬ್ರವರಿ 27: ಡಿವೈಎಸ್ಪಿ ಎಂ.ಕೆ ಗಣಪತಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನೇಮಿಸಿದ್ದ ನ್ಯಾಯಾಂಗ ಆಯೋಗವು ಕೊನೆಗೂ ತನ್ನ ವರದಿಯನ್ನು ಸಲ್ಲಿಸಿದೆ. ಸಿಐಡಿ ವರದಿಯಂತೆ ಈ ವರದಿ ಪ್ರಕಾರವು ಎಂಕೆ ಗಣಪತಿ ಸಾವಿಗೆ ಮಾನಸಿಕ ಒತ್ತಡವೇ ಕಾರಣ ಎಂದು ಷರಾ ಹಾಕಲಾಗಿದೆ.

ಈ ನಡುವೆ 2017ರ ಅಕ್ಟೋಬರ್ ನಲ್ಲಿ ಸಚಿವ ಕೆಜೆ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಸಿಬಿಐ ನಂತರ ತನಿಖೆಗೆ ಕಾಲಾವಕಾಶ ಕೋರಿತ್ತು. ಆದರೆ, ಇನ್ನೂ ತನ್ನ ತನಿಖಾ ವರದಿಯನ್ನು ಸಲ್ಲಿಸಬೇಕಿದೆ. ಹೀಗಾಗಿ, ನ್ಯಾಯಾಂಗ ಆಯೋಗದ ವರದಿ ಯಾವುದೇ ಬೆಲೆ ಇಲ್ಲ.

ನ್ಯಾಯಾಂಗ ಆಯೋಗದ ವರದಿ ಯಾರ ಕೈಸೇರಿದೆ: ನಿವೃತ್ತ ನ್ಯಾಯಾಧೀಶ ಕೆ.ಎನ್ ಕೇಶವನಾರಾಯಣ ಅವರ ನೇತೃತ್ವದ ನ್ಯಾಯಾಂಗ ಆಯೋಗವು ಗೃಹ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ತನ್ನ ವರದಿಯನ್ನು ಸಲ್ಲಿಸಿದೆ.

ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣದ Timelineಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣದ Timeline

ಸುಮಾರು ಒಂದೂವರೆ ವರ್ಷಗಳ ತನಿಖೆ, ವಿಚಾರಣೆ ಬಳಿಕ ತನ್ನ ವರದಿಯನ್ನು ಸಲ್ಲಿಸಿದೆ. ಸದ್ಯ ವರದಿಯನ್ನು ಪರಿಶೀಲಿಸಲು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಭಾಶ್ ಚಂದ್ರ ಅವರಿಗೆ ಹಸ್ತಾಂತರಿಸಲಾಗಿದೆ.

ನ್ಯಾಯಾಂಗ ಆಯೋಗದ ವರದಿಯಲ್ಲೇನಿದೆ

ನ್ಯಾಯಾಂಗ ಆಯೋಗದ ವರದಿಯಲ್ಲೇನಿದೆ

ಎಂಕೆ ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯ ಕೈವಾಡ ಕಂಡು ಬಂದಿಲ್ಲ. ಮಾನಸಿಕ ಒತ್ತಡವೇ ಗಣಪತಿ ಅವರ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ. ಇದಲ್ಲದೆ, ಪ್ರಮುಖ ಆರೋಪಿಗಳಾದ ಅಂದಿನ ಗೃಹ ಸಚಿವ ಕೆಜೆ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಎ.ಎಂ ಪ್ರಸಾದ್, ಪ್ರಣವ್ ಮೊಹಾಂತಿ ಅವರನ್ನು ನ್ಯಾಯಾಂಗ ಆಯೋಗ ವಿಚಾರಣೆಗೊಳಪಡಿಸಿಲ್ಲ.

ವಿಚಾರಣೆ ನಡೆಸಿದ್ದು ಹೇಗೆ?

ವಿಚಾರಣೆ ನಡೆಸಿದ್ದು ಹೇಗೆ?

ಸುಮಾರು ಒಂದೂವರೆ ವರ್ಷಗಳ ಕಾಲ ತನಿಖೆ ನಡೆಸಿದ ಆಯೋಗವು ಸುಮಾರು 50 ಸಾಕ್ಷ್ಯಗಳ ವಿಚಾರಣೆ ನಡೆಸಿ, ಸತ್ಯ ಶೋಧನಾ ಸಮಿತಿ ಮಾದರಿಯ ವರದಿಯನ್ನು ತಯಾರಿಸಿ, 320ಪುಟಗಳ ವರದಿ ಇದಾಗಿದೆ. ಗೃಹ ಇಲಾಖೆ ಮುಖ್ಯ ಕಾರ್ಯದರ್ಶಿಗಳ ಪರಿಶೀಲನೆ ನಂತರ ವರದಿಯನ್ನು ಸಚಿವ ಸಂಪುಟದ ಮುಂದೆ ಮಂಡಿಸಿ, ಮುಂದಿನ ತೀರ್ಮಾನವನ್ನು ಕರ್ನಾಟಕ ಸರ್ಕಾರ ಕೈಗೊಳ್ಳಬೇಕಾಗುತ್ತದೆ.

ಎಂಕೆ ಗಣಪತಿ ಆತ್ಮಹತ್ಯೆ

ಎಂಕೆ ಗಣಪತಿ ಆತ್ಮಹತ್ಯೆ

ಕೊಡಗಿನ ಮಡಿಕೇರಿಯ ಲಾಡ್ಜ್ ವೊಂದರಲ್ಲಿ ಮಂಗಳೂರಿನ ಡಿವೈಎಸ್ಪಿಯಾಗಿದ್ದ ಎಂ.ಕೆ ಗಣಪತಿ ಅವರು ಜುಲೈ 7, 2016ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಸಂದರ್ಭದಲ್ಲಿ ಅವರು ಮಂಗಳೂರಿನಲ್ಲಿ ಡಿವೈಎಸ್ಪಿಯಾಗಿದ್ದರು. ಸಾಯುವುದಕ್ಕೂ ಮೊದಲು ನೀಡಿದ್ದ ಸಂದರ್ಶನದಲ್ಲಿ ಗಣಪತಿ ತಮ್ಮ ಸಾವಿಗೆ ಕೆ.ಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ, ಎ.ಎಂ ಪ್ರಸಾದ್ ಕಾರಣ ಎಂದು ಹೇಳಿದ್ದರು.

ತನಿಖೆ ಎತ್ತ ಸಾಗಿದೆ?

ತನಿಖೆ ಎತ್ತ ಸಾಗಿದೆ?

ವಿಡಿಯೋ ಸಾಕ್ಷ್ಯದ ಮೇಲೆ ಆರಂಭವಾದ ಪೊಲೀಸರ ತನಿಖೆ ನಂತರ ಸಿಐಡಿ ಪಾಲಾಯಿತು. ಸಿಐಡಿ ತನಿಖೆ ನಡೆಸಿ, ಕೆಜೆ ಜಾರ್ಜ್ ಸೇರಿದಂತೆ ಮೂವರಿಗೂ ಕ್ಲೀನ್ ಚಿಟ್ ನೀಡಿ, ಕೋರ್ಟಿಗೆ ಬಿ ರಿಪೋರ್ಟ್ ಸಲ್ಲಿಸಿತು. ರಾಜೀನಾಮೆ ನೀಡಿದ್ದ ಜಾರ್ಜ್ ಮತ್ತೆ ಸಂಪುಟ ಸೇರಿದರು. ಗಣಪತಿ ಕುಟುಂಬದವರ ಅರ್ಜಿ ಪುರಸ್ಕರಿಸಿದ ಸುಪ್ರೀಂಕೋರ್ಟ್, ಪ್ರಕರಣವನ್ನು ಸಿಬಿಐಗೆ ವಹಿಸಿದ್ದು, ತನಿಖೆ ನಿಧಾನಗತಿಯಿಂದ ಸಾಗಿದೆ. ಸಿಬಿಐ ವರದಿ ಮೇಲೆ ಎಲ್ಲವೂ ನಿರ್ಧಾರವಾಗಲಿದೆ.

ಡಿವೈಎಸ್ಪಿ ಗಣಪತಿ ಯಾರು? ಏನು? ಎತ್ತ?ಡಿವೈಎಸ್ಪಿ ಗಣಪತಿ ಯಾರು? ಏನು? ಎತ್ತ?

English summary
The commission of inquiry headed by former High Court judge K.N. Keshavanarayana that probed the death of Deputy Superintendent of Police M.K. Ganapathi submitted its 320-page report to the State government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X