Bandh: ಮೂರು ದಿನ ಹಾಲು, ಸಿಗರೇಟ್, ಗುಟ್ಕಾ ಸಿಗಲ್ಲ! ರಾಜ್ಯಾದ್ಯಂತ ಬಂದ್ಗೆ ಕರೆ, ಕಾರಣವೇನು?
ರಾಜ್ಯದಲ್ಲಿ ಬೃಹತ್ ಮಟ್ಟದ್ದಲ್ಲಿ ಮತ್ತೊಂದು ಬಂದ್ಗೆ ಕರೆ ನೀಡಲಾಗಿದೆ. ಈ ಹಿಂದೆ ಒಂದು ದಿನ ಮಾತ್ರವೇ ಅಖಂಡ ಕರ್ನಾಟಕ ಬಂದ್ ನಡೆಯುತ್ತಿತ್ತು. ಆದರೆ ಈ ಬಾರಿ ಸತತ ಮೂರು ದಿನಗಳ ಕಾಲ ಬಂದ್ಗೆ ಕರೆ ನೀಡಲಾಗಿದೆ. ಇದೇ ತಿಂಗಳಿನಲ್ಲಿ ಬಂದ್ ನಡೆಯಲಿದ್ದು, ಮುಖ್ಯವಾಗಿ ದಿನನಿತ್ಯದ ಅಗತ್ಯ ವಸ್ತು ಹಾಲು ಮಾರಾಟ ಸಂಪೂರ್ಣ ಬಂದ್ ಆಗಲಿದೆ. ಇದರೊಂದಿಗೆ ಗುಟ್ಕಾ, ಸಿಗರೇಟ್ ಸೇರಿ ಇನ್ನಿತರೆ ವಸ್ತುಗಳ ಮಾರಾಟ ಕೂಡ ಇರುವುದಿಲ್ಲ ಎಂದು ತಿಳಿದು ಬಂದಿದೆ. ಮೂರು ದಿನಗಳ ಕಾಲ ಬಂದ್ಗೆ ಕರೆ ನೀಡಿರುವುದು? ಯಾವ ಕಾರಣಕ್ಕೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಡಿಜಿಟಲ್ ಯುಗದಲ್ಲಿ ಸಾಗುತ್ತಿರುವ ನಾವು ಇಲ್ಲಿವರೆಗೆ ಆನ್ಲೈನ್ ಪೇಮೆಂಟ್, ಡಿಜಿಟಲ್ ಪೇಮೆಂಟ್ ಅನ್ನು ನಮ್ಮ ಒಡನಾಡಿ ಎನ್ನುವಂತೆ ಬಳಸಿಕೊಳ್ಳುತ್ತಿದ್ದೆವು. ಕೆಲವೇ ಸೆಕೆಂಡ್ಗಳಲ್ಲಿ ಯುಪಿಐ ಸ್ಕ್ಯಾನ್ ಮಾಡಿ ಹಣ ಪಾವತಿ ಮಾಡುವ ವ್ಯವಸ್ಥೆಗೆ ಜನರೆಲ್ಲರೂ ಸಲಾಂ ಹೊಡೆದಿದ್ದರು. ಮುಖ್ಯವಾಗಿ ತಳ್ಳುಗಾಡಿಗಳು, ಸಣ್ಣಪುಟ್ಟ ಅಂಗಡಿಯಿಂದ ಹಿಡಿದು ದೊಡ್ಡ ದೊಡ್ಡ ಮಳಿಗೆ ಸೇರಿ ಎಲ್ಲೆಡೆಯೂ ವ್ಯಾಪಾರಿಗಳಿಗೆ ಈ ಡಿಜಿಟಲ್ ಕ್ಯೂಆರ್ ಕೋಡ್ಗಳು ತಮ್ಮ ಪಾವತಿ ವಿಧಾನವನ್ನು ಸರಳಗೊಳಿಸಿತ್ತು. ಆದರೆ ಇದೇ ಈಗ ಅವರಿಗೆ ಮುಳುವಾಗಿದೆ.

ಕ್ಯಾಶ್ಲೆಸ್ ಪದ್ಧತಿಗೆ ಒಗ್ಗಿಕೊಂಡು ಡಿಜಿಟಲ್ ಪಾವತಿಯನ್ನೇ ಅವಲಂಬಿಸಿರುವ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ರಾಜ್ಯದ ಬೇಕರಿ, ಹೋಟೆಲ್, ಕಿರಾಣಿ ಅಂಗಡಿ, ಟೀ ಅಂಗಡಿ ಸೇರಿದಂತೆ ಸಣ್ಣ ವ್ಯಾಪಾರಿಗಳು ಯುಪಿಐ (UPI) ಮೂಲಕ ನಡೆಸಿದ ವಾರ್ಷಿಕ ವಹಿವಾಟು ಮೊತ್ತ ₹40 ಲಕ್ಷ ದಾಟಿದರೆ, ಅವರು ಕೂಡ ಜಿಎಸ್ಟಿ ನೋಂದಣಿ ಮಾಡಿಸಬೇಕು ಎಂಬ ನಿಯಮಾನುಸಾರ ಜಿಎಸ್ಟಿ ನೋಟಿಸ್ ನೀಡಲಾಗುತ್ತಿದೆ.
ವಾಣಿಜ್ಯ ತೆರಿಗೆ ಇಲಾಖೆ ಎಲ್ಲಾ ಸಣ್ಣ ವ್ಯಾಪಾರಿಗಳ ಯುಪಿಐ ಮೂಲಕ ನಡೆದ ವಹಿವಾಟಿನ ಮಾಹಿತಿಯನ್ನು ಸಂಗ್ರಹಿಸಿದ್ದು, ಇದರ ಆಧಾರದಲ್ಲಿ ವಹಿವಾಟಿದಾರರನ್ನು ಗುರುತಿಸಿ ಕ್ರಮ ತೆಗೆದುಕೊಳ್ಳುತ್ತಿದೆ. ಕೆಲ ಬೇಕರಿ ಮತ್ತು ಟೀ ಅಂಗಡಿಗಳಿಗೆ ಹೊಸದಾಗಿ ಜಿಎಸ್ಟಿ ಸಲ್ಲಿಸುವಂತೆ ನೋಟಿಸ್ ನೀಡಲಾಗಿದೆ. ಇದರಿಂದ ವ್ಯಾಪಾರಿಗಳು ಶಾಕ್ಗೆ ಒಳಗಾಗಿದ್ದಾರೆ. 2017ರ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಪ್ರಕಾರ ಸರಕುಗಳ ಮಾರಾಟ ಮೊತ್ತ ವರ್ಷಕ್ಕೆ ₹40 ಲಕ್ಷ ದಾಟಿದರೆ, ಸೇವೆಗಳ ಪೂರೈಕೆ ಮೊತ್ತ ವರ್ಷಕ್ಕೆ ₹20 ಲಕ್ಷ ದಾಟಿದರೆ ಅದಕ್ಕೆ ಜಿಎಸ್ಟಿ ನೋಂದಣಿ ಕಡ್ಡಾಯ.

ಜುಲೈ 23ರಿಂದ ಬಂದ್ಗೆ ಕರೆ
ಯುಪಿಐ ಮೂಲಕ ವರ್ಷಕ್ಕೆ ₹40 ಲಕ್ಷಕ್ಕಿಂತ ಹೆಚ್ಚು ವಹಿವಾಟು ನಡೆಸಿದ ಬೇಕರಿ, ಕಾಂಡಿಮೆಂಟ್ಸ್ ಮತ್ತು ಇತರ ಸಣ್ಣ ಅಂಗಡಿಗಳಿಗೆ ಜಿಎಸ್ಟಿ ನೋಟಿಸ್ ನೀಡಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸಣ್ಣ ವ್ಯಾಪಾರಿ ಸಂಘಟನೆಗಳು ಹಾಗೂ ಬೇಕರಿ, ಕಾಂಡಿಮೆಂಟ್ಸ್ ಮಾಲೀಕರು ಈ ನೋಟಿಸ್ಗಳ ವಿರುದ್ಧ ಹೋರಾಟಕ್ಕೆ ನಿರ್ಧರಿಸಿದ್ದಾರೆ. ಹಂತ ಹಂತವಾಗಿ ಜುಲೈ 23ರಂದು ಹಾಲು ಮಾರಾಟಗಾರರು ಪ್ರತಿಭಟನೆ ನಡೆಸಲಿದ್ದಾರೆ. ಜುಲೈ 24ರಂದು ಗುಟ್ಕಾ ಮತ್ತು ಸಿಗರೇಟ್ ಅಂಗಡಿಗಳು ಬಂದ್ ಮಾಡಿ ಹೋರಾಟ ನಡೆಸಲಿದ್ದಾರೆ. ಜುಲೈ 25ರಂದು ಕಾಂಡಿಮೆಂಟ್ಸ್, ಬೇಕರಿ ಹಾಗೂ ಸಣ್ಣ ಪುಟ್ಟ ಅಂಗಡಿಗಳು ಸಂಪೂರ್ಣ ಬಂದ್ ಮಾಡಿ ರಾಜ್ಯಮಟ್ಟದಲ್ಲಿ ಹೋರಾಟಕ್ಕೆ ಮುಂದಾಗಿದ್ದಾರೆ.
ಈ ಮೂಲಕ ವ್ಯಾಪಾರಿಗಳು ಜಿಎಸ್ಟಿ ನೋಟಿಸ್ ವಾಪಸ್ ಪಡೆಯುವಂತೆ ಒತ್ತಾಯಿಸಲಿದ್ದಾರೆ. ಹೀಗಾಗಿ ಹೋರಾಟದ ದಿನಗಳಲ್ಲಿ ಪ್ರಮುಖವಾಗಿ ಹಾಲು, ಸಿಗರೇಟ್, ಗುಟ್ಕಾ, ಕಾಂಡಿಮೆಂಟ್ಸ್ ಹಾಗೂ ಬೇಕರಿ ಅಂಗಡಿಗಳು ಮುಚ್ಚಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಮೇಲೆ ಪರಿಣಾಮ ಬೀರಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications