ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ ಅಧ್ಯಕ್ಷರಾಗಿ ಎಮ್ ಅಪ್ಪಣ್ಣ ನೇಮಕ
ಬೆಂಗಳೂರು, ಡಿಸೆಂಬರ್ 1: ಮೈಸೂರಿನ ಎಮ್. ಅಪ್ಪಣ್ಣ ಅವರನ್ನು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ (ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್) ನ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಗೊಳಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಆದೇಶ ನೀಡಿದ್ದಾರೆ.
ಎಮ್. ಅಪ್ಪಣ್ಣ ಮೈಸೂರು ಅವರು ಸದ್ಯ ಮಹರ್ಷಿ ಶ್ರೀ ವಾಲ್ಮೀಕಿ ಗುರುಪೀಠದ ಧರ್ಮದರ್ಶಿಗಳಾಗಿದ್ದಾರೆ. ಮೈಸೂರು ಭಾಗದಲ್ಲಿ ನಾಯಕ ಸಮಾಜದ ಪ್ರಭಾವಿ ನಾಯಕರಾಗಿದ್ದಾರೆ. ಸಂಘ ಪರಿವಾರದ ಮೂಲಕ ರಾಜಕೀಯ ಪ್ರವೇಶಿಸಿ ಮೂರು ಬಾರಿ ಮೈಸೂರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿಧಾನಸಭೆಗೆ ಸ್ಪರ್ಧಿಸಿ ಈ ಬಾಗದಲ್ಲಿ ಬಿಜೆಪಿ ನೆಲೆಯೂರಲು ಕಾರಣೀಭೂತರಾಗಿದ್ದಾರೆ.
ಸುಮಾರು ಐದು ಜಿಲ್ಲೆಗಳಲ್ಲಿ ನಾಯಕ ಸಮಾಜದ ಮುಂಚೂಣಿ ನಾಯಕರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿರುವುದನ್ನು ಗುರುತಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಜಂಗಲ್ ಲಾಡ್ಜ್ಸ್ ಮತ್ತು ರೆಸಾರ್ಟ್ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಪ್ಪಣ್ಣ ಅವರು ''ನನ್ನನ್ನು ಗುರುತಿಸಿ ಈ ಹುದ್ದೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ, ಪಕ್ಷದ ಅಧ್ಯಕ್ಷರಿಗೆ ಹಾಗೂ ಎಲ್ಲಾ ಹಿರಿಯ ನಾಯಕರುಗಳಿಗೆ ನನ್ನ ವಂದನೆಗಳನ್ನು ಅರ್ಪಿಸುತ್ತೇನೆ'' ಎಂದಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೀಗರಾದ ಎಸ್ಐ ಚಿಕ್ಕನಗೌಡ್ರು, ರಾಜಕೀಯ ಕಾರ್ಯದರ್ಶಿ ಎಸ್. ಆರ್ ವಿಶ್ವನಾಥ್, ವಿ. ವೈ ವಿಜಯೇಂದ್ರ ಅವರ ಆಪ್ತರಾದ ತಮ್ಮೇಶ್ ಗೌಡ ಅವರಿಗೆ ಮಣೆ ಹಾಕಲಾಗಿದೆ.ನಟಿ ಕಮ್ ರಾಜಕಾರಣಿ ತಾರಾ ಅನುರಾಧ ಅವರಿಗೆ ಅರಣ್ಯ ಅಭಿವೃದ್ಧಿ ನಿಗಮ ಒಲಿದು ಬಂದಿದೆ. ಮಿಕ್ಕಂತೆ 27ಕ್ಕೂ ಅಧಿಕ ಕರ್ನಾಟಕದ ವಿವಿಧ ನಿಗಮ, ಮಂಡಳಿಯ ನೂತನ ಅಧ್ಯಕ್ಷರ
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications