ಕರ್ನಾಟಕ ಲೋಕಾಯುಕ್ತರಿಗೆ ಮತ್ತೆ 45 ದಿನ ರಜೆ!
ಬೆಂಗಳೂರು, ಅಕ್ಟೋಬರ್ 21 : ಕರ್ನಾಟಕ ಲೋಕಾಯುಕ್ತರಿಗೆ ಮತ್ತೊಮ್ಮೆ ರಜೆ ವಿಸ್ತರಣೆ ಭಾಗ್ಯ ಸಿಕ್ಕಿದೆ. ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ಅವರು ಅಕ್ಟೋಬರ್ 22ರಿಂದ 45 ದಿನಗಳ ಕಾಲ ರಜೆಯನ್ನು ವಿಸ್ತರಣೆ ಮಾಡಿದ್ದಾರೆ. ಲೋಕಾಯುಕ್ತ ಕಚೇರಿಯಲ್ಲಿ 350ಕ್ಕೂ ಅಧಿಕ ಕಡತಗಳು ಅವರಿಗಾಗಿ ಕಾದು ಕುಳಿತಿವೆ.
ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಪುತ್ರ ಅಶ್ವಿನ್ ರಾವ್ ಬಂಧನವಾದ ಬಳಿಕ ಭಾಸ್ಕರರಾವ್ ಸರಣಿ ರಜೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಹಿಂದೆ ರಜೆಯನ್ನು ಅವರು ಅಕ್ಟೋಬರ್ 21ರ ತನಕ ವಿಸ್ತರಣೆ ಮಾಡಿದ್ದರು. ಅದು ಮುಕ್ತಾಯಗೊಂಡ ಹಿನ್ನಲೆಯಲ್ಲಿ ಅಕ್ಟೋಬರ್ 22ರ ಗುರುವಾರದಿಂದ 45 ದಿನಗಳ ತನಕ ರಜೆಯನ್ನು ಅವರು ವಿಸ್ತರಿಸಿದ್ದಾರೆ. [3ನೇ ಬಾರಿ ರಜೆ ವಿಸ್ತರಣೆ ಮಾಡಿದ ಭಾಸ್ಕರರಾವ್]

4ನೇ ಬಾರಿ ರಜೆ ವಿಸ್ತರಣೆ : ಮೊದಲು ಭಾಸ್ಕರರಾವ್ ಅವರು ಜುಲೈ 17ರಿಂದ ಆಗಸ್ಟ್ 17ರ ತನಕ ರಜೆ ಹಾಕಿದ್ದರು. ನಂತರ ಅದನ್ನು ಸೆಪ್ಟೆಂಬರ್ 30ರ ತನಕ ವಿಸ್ತರಣೆ ಮಾಡಿದ್ದರು. ಪುನಃ ಅದನ್ನು ಅಕ್ಟೋಬರ್ 21ರ ತನಕ ವಿಸ್ತರಿಸಿದರು. ಸದ್ಯ, ಪುನಃ 45 ದಿನಗಳ ಕಾಲ ರಜೆ ವಿಸ್ತರಣೆಯಾಗಿದೆ. [ಲೋಕಾಯುಕ್ತರನ್ನು ಬಂಧಿಸಿ, ವಿಚಾರಿಸಲು ಸಕಾಲ]
ಲೋಕಾಯುಕ್ತರು ಸರಣಿ ರಜೆಗಳನ್ನು ತೆಗೆದುಕೊಳ್ಳುತ್ತಿದ್ದರು. ಅವರು ಕೆಲಸಗಳನ್ನು ಯಾರಿಗೂ ಹಸ್ತಾಂತರ ಮಾಡಿಲ್ಲ. ಆದ್ದರಿಂದ, ಲೋಕಾಯುಕ್ತ ಕಚೇರಿಯಲ್ಲಿ 350ಕ್ಕೂ ಅಧಿಕ ಕಡತಗಳು ಅವರ ಒಪ್ಪಿಗೆಗಾಗಿ ಕಾದು ಕುಳಿತಿವೆ. ಅತ್ತ ಭ್ರಷ್ಟಾಷಾರ ಪ್ರಕರಣದಲ್ಲಿ ಅವರನ್ನು ಪ್ರಶ್ನೆ ಮಾಡಲು ಎಸ್ಐಟಿ ಕಾಯುತ್ತಿದೆ.
ರಜೆಯನ್ನು ವಿಸ್ತರಣೆ ಮಾಡುವ ಬಗ್ಗೆ ಲೋಕಾಯುಕ್ತದ ರಿಜಿಸ್ಟ್ರಾರ್ ಅವರಿಗೆ ನ್ಯಾ.ಭಾಸ್ಕರರಾವ್ ಪತ್ರ ಬರೆದಿದ್ದಾರೆ. ರಿಜಿಸ್ಟ್ರಾರ್ ಅವರು ಈ ಕುರಿತು ರಾಜ್ಯಪಾಲರ ಕಚೇರಿಗೆ ಮಾಹಿತಿ ರವಾನಿಸಿದ್ದಾರೆ. ಭಾಸ್ಕರರಾವ್ ಅವರು ಒಟ್ಟು 145 ದಿನಗಳ ವೇತನ ಸಹಿತ ರಜೆಯನ್ನು ಪಡೆದಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications