ನ್ಯಾ. ಜಸ್ವಂತ್ ಸಿಂಗ್ ಕರ್ನಾಟಕದ ಹೊಸ ಸಿಜೆ?
ಬೆಂಗಳೂರು ಮೇ 13. ಒಡಿಶಾ ಹೈಕೋರ್ಟ್ ನಲ್ಲಿ ಹಿರಿಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ನ್ಯಾ. ಜಸ್ವಂತ್ ಸಿಂಗ್ ಕರ್ನಾಟಕ ಹೈಕೋರ್ಟ್ ಹೊಸ ಮುಖ್ಯ ನ್ಯಾಯಮೂರ್ತಿಯಾಗುವ ಸಾಧ್ಯತೆ ಇದೆ.
ಇದೇ ಜುಲೈ 2ರಂದು ಕರ್ನಾಟಕ ಹೈಕೋರ್ಟ್ ನ ಹಾಲಿ ಸಿಜೆ ರಿತುರಾಜ್ ಅವಸ್ಥಿ ಅವರು ಸೇವಾವಧಿ ಪೂರೈಸಿ ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ಆ ಸ್ಥಾನದ ಉತ್ತರಾಧಿಕಾರಿಯಾಗಿ ಒಡಿಶಾ ಹೈಕೋರ್ಟ್ನಲ್ಲಿ ಸೇವೆ ಸಲ್ಲಿಸುತ್ತಿರುವ ನ್ಯಾ. ಜಸ್ವಂತ್ ಸಿಂಗ್ ನೇಮಕಗೊಳ್ಳಲಿದ್ದಾರೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಕೊಲಿಜಿಯಂ ಈ ಬಗ್ಗೆ ಅಧಿಕೃತವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ. ಆನಂತರ ನಿಯಮದಂತೆ ಕಾನೂನು ಇಲಾಖೆ ಆ ಪ್ರಸ್ತಾವನೆಯನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸಲಿದ್ದು, ರಾಷ್ಟ್ರಪತಿಗಳು ತಮ್ಮ ಸಂವಿಧಾನದತ್ತ ಅಧಿಕಾರ ಬಳಸಿ ಕರ್ನಾಟಕಕ್ಕೆ ಹೊಸ ಸಿಜೆಯನ್ನು ನೇಮಕ ಮಾಡಲಿದ್ದಾರೆ. ಸೇವಾ ಹಿರಿತನ ಆಧರಿಸಿ ಈ ನೇಮಕ ಮಾಡಲಾಗುವುದು.

ನ್ಯಾ.ಜಸ್ವಂತ್ ಸಿಂಗ್ ಹಿನ್ನೆಲೆ:
1961 ಫೆ.23ರಂದು ರೋಟಕ್ ನಲ್ಲಿ ಜನಿಸಿದ ಜಸ್ವಂತ್ ಸಿಂಗ್ ಝರಿಪಾನಿಯ ಓಕ್ ಗ್ರೂವ್ ಶಾಲೆ ಮತ್ತು ಮಸ್ಸೂರಿಯ ಮಾದರಿ ಶಾಲೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಪೂರ್ಣಗೊಳಿಸಿದರು. 1980ರಲ್ಲಿ ಕಲಾ ಪದವಿಯನ್ನು ಪಡೆದ ನಂತರ ಅವರು ರೋಟಕ್ ನ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಿಂದ ಕಾನೂನು ಮತ್ತು ಮಾಸ್ಟರ್ ಆಫ್ ವ್ಯವಹಾರಿಕ ಆಡಳಿತ ಪದವಿಯನ್ನು ಪಡೆದರು.

ಸಿರ್ಸಾ ಜಿಲ್ಲೆಯಲ್ಲಿ 1986ರಲ್ಲಿ ವಕೀಲಿಕೆ ಆರಂಭಿಸಿದರು. 1988ರಲ್ಲಿ ಚಂಡೀಗಢಕ್ಕೆ ಸ್ಥಳಾಂತರಗೊಂಡ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಲ್ಲಿ ವಕೀಲಿಕೆ ಆರಂಭಿಸಿದರು. 1991ರಿಂದ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾಗುವವರೆಗೆ ಅವರು ಅಸಿಸ್ಟೆಂಟ್ ಅಡ್ವೊಕೇಟ್ ಜನರಲ್, ಡೆಪ್ಯೂಟಿ ಅಡ್ವೊಕೇಟ್ ಜನರಲ್, ಸೀನಿಯರ್ ಅಡ್ವೊಕೇಟ್ ಜನರಲ್ ಮತ್ತು ಅಡ್ವೊಕೇಟ್ ಜನರಲ್ ಆಗಿ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. 2007ರ ಡಿ.7ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2021ರ ಅಕ್ಟೋಬರ್ 8ರಂದು ನ್ಯಾ. ಜಸ್ವಂತ್ ಸಿಂಗ್ ಅವರನ್ನು ಪಂಜಾಬ್ ಮತ್ತು ಹರಿಯಾಣನಿಂದ ಒಡಿಶಾ ಹೈಕೋರ್ಟ್ ಗೆ ವರ್ಗಾವಣೆ ಮಾಡಲಾಗಿತ್ತು. ಅಂದಿನಿಂದ ಅವರು ಅಲ್ಲಿಯೇ ಸೇವೆ ಸಲ್ಲಿಸುತ್ತಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications