ಅರ್ಕಾವತಿ ತನಿಖೆ, ಆಯೋಗದ ಅವಧಿ ವಿಸ್ತರಣೆ
ಬೆಂಗಳೂರು, ಮಾ.2 : ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಆಯೋಗದ ಅವಧಿಯನ್ನು 6 ತಿಂಗಳ ಕಾಲ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಆಯೋಗ ಮಾಡಿದ ಮನವಿಯ ಅನ್ವಯ, ಮಾ.1 ರಿಂದ ಅನ್ವಯವಾಗುವಂತೆ ಮುಂದಿನ ಆರು ತಿಂಗಳಿಗೆ, ಆಯೋಗದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಆಯೋಗದ ಅವಧಿ ಫೆ.28ಕ್ಕೆ ಕೊನೆಗೊಂಡಿತ್ತು. [ಅರ್ಕಾವತಿ ಬಡಾವಣೆ ವಿವಾದ ಏಕೆ? ಏನು?]

ಅರ್ಕಾವತಿ ಡಿನೋಟಿಫಿಕೇಷನ್ ಆರೋಪ ಕೇಳಿ ಬಂದ ನಂತರ ಸರ್ಕಾರ ಪ್ರಕರಣದ ತನಿಖೆಗೆ 2014ರ ಆಗಸ್ಟ್ನಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ನೇತೃತ್ವದ ತನಿಖಾ ಆಯೋಗ ನೇಮಕ ಮಾಡಲಾಗಿತ್ತು. [ಅರ್ಕಾವತಿ ಹಗರಣದ ಬಗ್ಗೆ ಎಚ್ಡಿಕೆ ಪುಸ್ತಕ]
ಆರು ತಿಂಗಳಿನಲ್ಲಿ ಆಯೋಗ ಕೇವಲ ದೂರಗಳನ್ನು ಮಾತ್ರ ಸ್ವೀಕರಿಸಿದೆ. ಅಧಿಕೃತವಾದ ತನಿಖೆ ಆರಂಭಗೊಂಡಿಲ್ಲ. ಆದ್ದರಿಂದ ಆಯೋಗದ ಅವಧಿಯನ್ನು ವಿಸ್ತರಣೆ ಮಾಡುವಂತೆ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಇದರ ಅನ್ವಯ ಸರ್ಕಾರ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಇಂದು ಬಿಜೆಪಿ ದೂರು : ಬಿಜೆಪಿ ಮತ್ತೊಮ್ಮೆ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಹೋರಾಟ ಆರಂಭಿಸಿದ್ದು, ಸೋಮವಾರ ಬಿಜೆಪಿ ಬೆಂಬಲಿತ ವಕೀಲರಾದ ಎಸ್.ನಟರಾಜ್ ಶರ್ಮ ಮತ್ತು ದೊರೆರಾಜು ಅವರು ನ್ಯಾಯಮೂರ್ತಿ ಕೆಂಪಣ್ಣ ಆಯೋಗಕ್ಕೆ ದೂರು ನೀಡಲಿದ್ದಾರೆ.
ಬೆಂಗಳೂರಿನ ಕಾವೇರಿ ಭವನದ 6ನೇ ಮಹಡಿಯಲ್ಲಿರುವ ಕೆಂಪಣ್ಣ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಲಿದ್ದು, ಇದರ ಜೊತೆಗೆ ಸುಮಾರು 800 ಪುಟಗಳ ದಾಖಲೆಗಳನ್ನು ಸಲ್ಲಿಸಲಿದ್ದಾರೆ.
-
ಸಿದ್ದರಾಮಯ್ಯ ಬಜೆಟ್; ಹಣಕಾಸು ಶಿಸ್ತು, AI ಉತ್ತೇಜನ ಸ್ವಾಗತಾರ್ಹ:ರಂಗಸ್ವಾಮಿ ಮೂಕನಹಳ್ಳಿ -
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications