ಮೀಸಲಾತಿ ಕುರಿತು ನೇರ ಅಹವಾಲು ಸ್ವೀಕಾರ
ಬೆಂಗಳೂರು, ಫೆ. 18: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸುವ ಕುರಿತು ವರದಿ ನೀಡಲು ಸರ್ಕಾರ ರಚಿಸಿರುವ ನ್ಯಾ. ಎಚ್.ಎನ್. ನಾಗಮೋಹನ ದಾಸ್ ಆಯೋಗದ ವತಿಯಿಂದ ಇದೇ ಫೆಬ್ರವರಿ 25 ರಂದು ಬೆಂಗಳೂರಿನಲ್ಲಿ ಬೆಂಗಳೂರು ವಿಭಾಗ ಮಟ್ಟದ ಜಿಲ್ಲೆಗಳ ಅಹವಾಲು ಸ್ವೀಕಾರ ಹಾಗೂ ಸಮಾಲೋಚನೆ ಸಭೆ ನಡೆಯಲಿದೆ.
ಆಯೋಗದ ಅಧ್ಯಕ್ಷ ನ್ಯಾ. ಎಚ್.ಎನ್ ನಾಗಮೋಹನ ದಾಸ್ ಅವರೇ ನೇರವಾಗಿ ಅಹವಾಲು ಹಾಗೂ ಅಭಿಪ್ರಾಯಗಳನ್ನು ಆಲಿಸಲಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಬೆಂಗಳೂರು ವಿಭಾಗದ ಎಲ್ಲಾ ಜಿಲ್ಲೆಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮುಖಂಡರು ಮತ್ತು ಸಂಘಟನೆಗಳಿಂದ ಅಹವಾಲು ಸ್ವೀಕಾರ ಮತ್ತು ಸಮಾಲೋಚನೆ ಮಾಡಲಾಗುವುದು.
ಬೆಂಗಳೂರು ನಗರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮುಖಂಡರು, ಸಂಘಟನೆಗಳು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ನೀಡಬಹುದಾಗಿದೆ. ಮೌಖಿಕವಾಗಿ ಅಭಿಪ್ರಾಯಗಳನ್ನು ತಿಳಿಸಬಯಸುವವರು, ಸಭೆ ಆರಂಭವಾಗುವ ಒಂದು ಗಂಟೆ ಮೊದಲು ಆಡಿಟೋರಿಯಂ ಹೊರಗಡೆ ಕೌಂಟರ್ಗಳಲ್ಲಿ ಹೆಸರು ನೋಂದಾಯಿಸಿಕೊಂಡು ತಮ್ಮ ಅಭಿಪ್ರಾಯವನ್ನು ಮೌಖಿಕವಾಗಿ ಹೇಳಬಹುದು. ಹೆಸರು ನೋಂದಾಯಿಸಿಕೊಂಡವರಿಗೆ ಮಾತ್ರ ಅಭಿಪ್ರಾಯ ಹೇಳಲು ಅವಕಾಶವಿರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಜಂಟಿ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ನಗರ ಜಿಲ್ಲೆ, 4ನೇ ಮೈನ್ರೋಡ್ 16 ನೇ ಅಡ್ಡರಸ್ತೆ ಸಂಪಂಗಿರಾಮನಗರ, ಬೆಂಗಳೂರು - 560 027 ಇವರ ಕಚೇರಿ 08022240449 ಸಿ.ಯು.ಜಿ. ನಂ. 94808 43019.
ಸಹಾಯಕ ನಿರ್ದೇಶಕರ ಕಚೇರಿ ಬೆಂಗಳೂರು ಉತ್ತರ ತಾಲ್ಲೂಕು ಯಲಹಂಕ ಕಚೇರಿ 0803846135, ಸಿ.ಯು.ಜಿ. 94808 43051 ಸಹಾಯಕ ನಿರ್ದೇಶಕರ ಕಚೇರಿ, ಬೆಂಗಳೂರು ದಕ್ಷಿಣ ತಾಲ್ಲೂಕು, ಬನಶಂಕರಿ ಕಚೇರಿ 08026711096 ಸಿ.ಯು.ಜಿ/ 94808 43050 ಸಹಾಯಕ ನಿರ್ದೇಶಕರ ಕಚೇರಿ, ಪೂರ್ವ ತಾಲ್ಲೂಕು, ಕೆ.ಆರ್. ಪುರಂ ಕಚೇರಿ 08029535045 ಸಿ.ಯು.ಜಿ 9480843049 ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಆನೇಕಲ್ ತಾಲ್ಲೂಕು, ಆನೇಕಲ್ ಕಚೇರಿ 08027859557, ಸಿ.ಯು.ಜಿ. 94808 43052 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications