ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ಸಂತೋಷ್ ಹೆಗ್ಡೆ ಸಂದರ್ಶನ
ಬೆಂಗಳೂರು, ಆಗಸ್ಟ್ 19 : ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ -2015ಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಅಂಕಿತ ಹಾಕಿದ್ದಾರೆ. ವಿಧೇಯಕದ ಪ್ರಕಾರ ಲೋಕಾಯುಕ್ತರನ್ನು ಪದಚ್ಯುತಿಗೊಳಿಸಬಹುದಾಗಿದೆ. ಇದೊಂದು ಉತ್ತಮ ಬೆಳವಣಿಗೆಯಾಗಿದೆ ಎಂದು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಒನ್ ಇಂಡಿಯಾಕ್ಕೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಸಂತೋಷ್ ಹೆಗ್ಡೆ ಅವರು ಲೋಕಾಯುಕ್ತ ತಿದ್ದುಪಡಿ ಕಾಯ್ದೆಯ ಬಗ್ಗೆ ಮಾತನಾಡಿದ್ದಾರೆ. ಕಾಯ್ದೆಗೆ ಒಪ್ಪಿಗೆ ಸಿಗುತ್ತಿದ್ದಂತೆ ಪ್ರತಿಪಕ್ಷ ಬಿಜೆಪಿ ಲೋಕಾಯುಕ್ತ ನ್ಯಾ.ಭಾಸ್ಕರರಾವ್ ಅವರ ಪದಚ್ಯುತಿಗೆ ಶಾಸಕ ಸಹಿ ಸಂಗ್ರಹ ಮಾಡುವ ಕಾರ್ಯವನ್ನು ಆರಂಭಿಸಿದೆ. ಸಂತೋಷ್ ಹೆಗ್ಡೆ ಸಂದರ್ಶನದ ವಿವರ ಇಲ್ಲಿದೆ.....[ಲೋಕಾಯುಕ್ತದಲ್ಲಿ ಭ್ರಷ್ಟಾಚಾರ 4 ಪ್ರಮುಖ ಬೆಳವಣಿಗೆಗಳು]
ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕದ ಬಗ್ಗೆ ನಿಮ್ಮ ಅಭಿಪ್ರಾಯವೇನು?
ಲೋಕಾಯುಕ್ತ ತಿದ್ದುಪಡಿ ವಿಧೇಯಕ ಒಂದು ಉತ್ತಮ ಬೆಳವಣಿಗೆಯಾಗಿದೆ. ಕಾಯ್ದೆಯ ಅನ್ವಯ ಮೂವರು ನ್ಯಾಯಮೂರ್ತಿಗಳು ಆರೋಪಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಆದರೆ, ಈ ಪ್ರಕ್ರಿಯೆ ದೀರ್ಘಕಾಲಿಕವಾಗಬಾರದು ಶೀಘ್ರವಾಗಿ ಪೂರ್ಣಗೊಳ್ಳಬೇಕು.

ಲೋಕಾಯುಕ್ತದ ಅವ್ಯವಸ್ಥೆ ಮತ್ತು ಬಾಕಿ ಉಳಿದಿರುವ ಪ್ರಕರಣಗಳ ಬಗ್ಗೆ ಏನು ಹೇಳುವಿರಿ?
ಸದ್ಯ ಲೋಕಾಯುಕ್ತರು ರಜೆ ಮೇಲೆ ತೆರಳಿದ್ದಾರೆ. ಅವರು ತಮ್ಮ ಜವಾಬ್ದಾರಿಯನ್ನು ಯಾರಿಗೂ ವಹಿಸಿಲ್ಲ. ಆದ್ದರಿಂದ ಪ್ರಕರಣಗಳು ಬಾಕಿ ಉಳಿಯುತ್ತಿವೆ. ಲೋಕಾಯುಕ್ತರ ಅನುಪಸ್ಥಿತಿಯಲ್ಲಿ ಉಪ ಲೋಕಾಯುಕ್ತರು ಕಚೇರಿಯ ಕೆಲಸಗಳ ಜವಾಬ್ದಾರಿ ನೋಡಿಕೊಳ್ಳಬೇಕು. ಆದರೆ, ಯಾರಿಗೂ ಜವಾಬ್ದಾರಿ ವಹಿಸಿದ ಕಾರಣ ಅವ್ಯವಸ್ಥೆ ಉಂಟಾಗುತ್ತಿದೆ ಎಂದು ಅನ್ನಿಸುತ್ತಿದೆ. [ಕರ್ನಾಟಕ ಲೋಕಾಯುಕ್ತದಲ್ಲಿ ಇದೇನಿದು ಹಗರಣ?]
ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಮಾತಿನ ಬಗ್ಗೆ ಏನು ಹೇಳುತ್ತೀರಿ?
ಕೆಲವು ವ್ಯಕ್ತಿಗಳ ವಿರುದ್ಧ ಆರೋಪ ಕೇಳಿಬಂದ ತಕ್ಷಣ ಸಂಸ್ಥೆಯನ್ನೇ ಮುಚ್ಚುವ ಬಗ್ಗೆ ಮಾತನಾಡಬಾರದು. ಸಂಸ್ಥೆಯಲ್ಲಿ ಕೇಳಿಬಂದಿರುವ ಆರೋಪಗಳನ್ನು ಅದು ಬಗೆಹರಿಸಿಕೊಳ್ಳಬೇಕು. ಸಂಸ್ಥೆಯ ಮೇಲೆ ನಂಬಿಕೆ ಇಟ್ಟುಕೊಂಡಿರುವ ಇತರ ವ್ಯಕ್ತಿಗಳ ಬಗ್ಗೆಯೂ ಆಲೋಚನೆ ನಡೆಸಬೇಕು.
ಆರೋಪಗಳ ಬಗ್ಗೆ ಕ್ರಮ ಕೈಗೊಳ್ಳಲು ವಿಳಂಬವಾಗುತ್ತಿದೆಯೇ?
ಹಲವಾರು ಆರೋಪಗಳು ಕೇಳಿಬರುತ್ತಿದ್ದರೂ ಕ್ರಮ ಕೈಗೊಳ್ಳಲು ವಿಳಂಬವಾಗುತ್ತಿದೆ ಎಂದು ಅನ್ನಿಸುತ್ತಿದೆ. ಹೈಕೋರ್ಟ್ ಕೋಲ್ಜಿಯಂ ಲೋಕಾಯುಕ್ತ ನೇಮಕಾತಿ ಬಗ್ಗೆ ನಿರ್ಧಾರ ಕೈಗೊಳ್ಳಬೇಕು. ಈ ಆರೋಪಗಳ ವಿಚಾರದಲ್ಲಿ ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂದು ಕೇಳಿದ್ದೇನೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications