ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ: ವಿಚಾರಣೆಯಿಂದ ಹಿಂದೆ ಸರಿದ ಸಿಜೆ
ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಸಂಬಂಧ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆಯಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಕೆ ಮುಖರ್ಜಿ ಹಿಂದೆ ಸರಿದಿದ್ದಾರೆ. ಮುಖರ್ಜಿ, ಪ್ರಕರಣದಿಂದ ಹಿಂದಕ್ಕೆ ಸರಿದ ಏಳನೇ ನ್ಯಾಯಮೂರ್ತಿಗಳಾಗಿದ್ದಾರೆ
ಬೆಂಗಳೂರು, ಜೂ 30: ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಸಂಬಂಧ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆಯಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಕೆ ಮುಖರ್ಜಿ ಹಿಂದೆ ಸರಿದಿದ್ದಾರೆ.
ರಾಮಚಂದ್ರಾಪುರ ಮಠದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ, ಮಠಕ್ಕೆ ಆಡಳಿತಾಧಿಕಾರಿ ನೇಮಿಸುವಂತೆ ಕೋರಿ ಎದುರ್ಕುಳ ಈಶ್ವರ ಭಟ್ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ರಾಘವೇಶ್ವರ ಶ್ರೀಗಳ ಪ್ರಕರಣದಿಂದ ಹಿಂದಕ್ಕೆ ಸರಿಯುವ ಮೂಲಕ ನ್ಯಾ.ಮುಖರ್ಜಿ, ಪ್ರಕರಣದಿಂದ ಹಿಂದಕ್ಕೆ ಸರಿದ ಏಳನೇ ನ್ಯಾಯಮೂರ್ತಿಗಳಾಗಿದ್ದಾರೆ.
ರಾಮಚಂದ್ರಾಪುರ ಮಠದವರು ನಾನು ಪೂರ್ವಾಗ್ರಹ ಭಾವನೆ ಹೊಂದಿದ್ದೇನೆಂದು ಹೇಳಿರುವುದರಿಂದ, ಈ ವಿಚಾರಣೆಯಿಂದ ಹಿಂದಕ್ಕೆ ಸರಿಯುತ್ತಿದ್ದೇನೆಂದು ನ್ಯಾ. ಮುಖರ್ಜಿ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಈ ಹಿಂದೆ ನ್ಯಾ.ಮುಖರ್ಜಿ ಅವರು ವಿಚಾರಣೆ ನಡೆಸಿದ ರೀತಿಯನ್ನು ಅವಲೋಕಿಸುವುದಾದರೆ ನಮಗೆ ನ್ಯಾಯಸಿಗುವ ಸಾಧ್ಯತೆ ಕಮ್ಮಿ. ಹಾಗಾಗಿ, ವಿಚಾರಣೆಯಿಂದ ನ್ಯಾಯಮೂರ್ತಿಗಳು ಹಿಂದಕ್ಕೆ ಸರಿಯಬೇಕೆಂದು ಹವ್ಯಕ ಮಹಾಸಭಾ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿತ್ತು.
ಹಲವಾರು ಪುರಾವೆಗಳೊಂದಿಗೆ ಮಹಾಸಭಾ ಸಿಜೆ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುವಂತೆ ಪ್ರಮಾಣಪತ್ರ ಸಲ್ಲಿಸಿದ್ದರು. ಗೋಕರ್ಣಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯಿಂದ ಸಿಜೆ ಹಿಂದೆ ಸರಿದಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
ನ್ಯಾಯಮೂರ್ತಿ ರಾಮಮೋಹನ ರೆಡ್ಡಿ, ಎನ್ ಕುಮಾರ್, ಕೆ.ಎನ್.ಫಣೀಂದ್ರ ಸೇರಿದಂತೆ ಇದುವರೆಗೆ ಏಳು ನ್ಯಾಯಮೂರ್ತಿಗಳು ಈ ಕೇಸಿನಿಂದ ಹಿಂದಕ್ಕೆ ಸರಿದಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ











Click it and Unblock the Notifications