ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ: ವಿಚಾರಣೆಯಿಂದ ಹಿಂದೆ ಸರಿದ ಸಿಜೆ
ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಸಂಬಂಧ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆಯಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಕೆ ಮುಖರ್ಜಿ ಹಿಂದೆ ಸರಿದಿದ್ದಾರೆ. ಮುಖರ್ಜಿ, ಪ್ರಕರಣದಿಂದ ಹಿಂದಕ್ಕೆ ಸರಿದ ಏಳನೇ ನ್ಯಾಯಮೂರ್ತಿಗಳಾಗಿದ್ದಾರೆ
ಬೆಂಗಳೂರು, ಜೂ 30: ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಸಂಬಂಧ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆಯಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಕೆ ಮುಖರ್ಜಿ ಹಿಂದೆ ಸರಿದಿದ್ದಾರೆ.
ರಾಮಚಂದ್ರಾಪುರ ಮಠದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ, ಮಠಕ್ಕೆ ಆಡಳಿತಾಧಿಕಾರಿ ನೇಮಿಸುವಂತೆ ಕೋರಿ ಎದುರ್ಕುಳ ಈಶ್ವರ ಭಟ್ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ರಾಘವೇಶ್ವರ ಶ್ರೀಗಳ ಪ್ರಕರಣದಿಂದ ಹಿಂದಕ್ಕೆ ಸರಿಯುವ ಮೂಲಕ ನ್ಯಾ.ಮುಖರ್ಜಿ, ಪ್ರಕರಣದಿಂದ ಹಿಂದಕ್ಕೆ ಸರಿದ ಏಳನೇ ನ್ಯಾಯಮೂರ್ತಿಗಳಾಗಿದ್ದಾರೆ.
ರಾಮಚಂದ್ರಾಪುರ ಮಠದವರು ನಾನು ಪೂರ್ವಾಗ್ರಹ ಭಾವನೆ ಹೊಂದಿದ್ದೇನೆಂದು ಹೇಳಿರುವುದರಿಂದ, ಈ ವಿಚಾರಣೆಯಿಂದ ಹಿಂದಕ್ಕೆ ಸರಿಯುತ್ತಿದ್ದೇನೆಂದು ನ್ಯಾ. ಮುಖರ್ಜಿ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಈ ಹಿಂದೆ ನ್ಯಾ.ಮುಖರ್ಜಿ ಅವರು ವಿಚಾರಣೆ ನಡೆಸಿದ ರೀತಿಯನ್ನು ಅವಲೋಕಿಸುವುದಾದರೆ ನಮಗೆ ನ್ಯಾಯಸಿಗುವ ಸಾಧ್ಯತೆ ಕಮ್ಮಿ. ಹಾಗಾಗಿ, ವಿಚಾರಣೆಯಿಂದ ನ್ಯಾಯಮೂರ್ತಿಗಳು ಹಿಂದಕ್ಕೆ ಸರಿಯಬೇಕೆಂದು ಹವ್ಯಕ ಮಹಾಸಭಾ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿತ್ತು.
ಹಲವಾರು ಪುರಾವೆಗಳೊಂದಿಗೆ ಮಹಾಸಭಾ ಸಿಜೆ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುವಂತೆ ಪ್ರಮಾಣಪತ್ರ ಸಲ್ಲಿಸಿದ್ದರು. ಗೋಕರ್ಣಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯಿಂದ ಸಿಜೆ ಹಿಂದೆ ಸರಿದಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
ನ್ಯಾಯಮೂರ್ತಿ ರಾಮಮೋಹನ ರೆಡ್ಡಿ, ಎನ್ ಕುಮಾರ್, ಕೆ.ಎನ್.ಫಣೀಂದ್ರ ಸೇರಿದಂತೆ ಇದುವರೆಗೆ ಏಳು ನ್ಯಾಯಮೂರ್ತಿಗಳು ಈ ಕೇಸಿನಿಂದ ಹಿಂದಕ್ಕೆ ಸರಿದಿದ್ದಾರೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ











Click it and Unblock the Notifications