ಲೋಕಾಯುಕ್ತ ಹುದ್ದೆ ಬೇಡವೆಂದು ಪತ್ರ ಬರೆದ ವಿಕ್ರಂಜಿತ್ ಸೇನ್
ಬೆಂಗಳೂರು, ಜನವರಿ 08 : ಕರ್ನಾಟಕದ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರು ನೇಮಕಗೊಳ್ಳುವ ಸಾಧ್ಯತೆ ಇದೆ. ನೂತನ ಲೋಕಾಯುಕ್ತ ನೇಮಕದ ಕುರಿತು ಸರ್ಕಾರ ಕಡತ ಸಿದ್ಧಪಡಿಸುತ್ತಿದ್ದು, ಶೀಘ್ರದಲ್ಲೇ ರಾಜ್ಯಪಾಲರಿಗೆ ಕಳುಹಿಸಲಿದೆ.
ನ್ಯಾ.ಎಸ್.ಆರ್.ನಾಯಕ್ ಮತ್ತು ಸುಪ್ರೀಂಕೋರ್ಟ್ ನಿವೃತ್ತ ನ್ಯಾ.ವಿಕ್ರಂಜಿತ್ ಸೇನ್ ಅವರ ಹೆಸರುಗಳು ಲೋಕಾಯುಕ್ತ ಹುದ್ದೆಗೆ ಕೇಳಿಬರುತ್ತಿದ್ದವು. ವಿಕ್ರಂಜಿತ್ ಸೇನ್ ಅವರು ಲೋಕಾಯುಕ್ತರಾಗಲು ಆಸಕ್ತಿ ಹೊಂದಿಲ್ಲ ಎಂದು ಕಾನೂನು ಇಲಾಖೆಗೆ ಪತ್ರ ಬರೆದಿದ್ದಾರೆ. ಆದ್ದರಿಂದ, ಎಸ್.ಆರ್.ನಾಯಕ್ ಆಯ್ಕೆಯಾಗುವ ಸಾಧ್ಯತೆ ಇದೆ. [ಲೋಕಾಯುಕ್ತ ಹುದ್ದೆಗೆ ಕನ್ನಡಿಗರನ್ನು ನೇಮಿಸಿ]

ಜನವರಿ 4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರತಿಪಕ್ಷದ ನಾಯಕರು ವಿಕ್ರಂಜಿತ್ ಸೇನ್ ಅವರನ್ನು ನೇಮಕಮಾಡಬಹುದು ಎಂದು ಸಲಹೆ ನೀಡಿದ್ದರು. ಆದರೆ, ವಿಕ್ರಂಜಿತ್ ಸೇನ್ ಅವರು ಕಾನೂನು ಇಲಾಖೆಗೆ ಪತ್ರ ಬರೆದು ಲೋಕಾಯುಕ್ತರಾಗಲು ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ. [ಕರ್ನಾಟಕ ಲೋಕಾಯುಕ್ತ ಹಗರಣದ Timeline]
ಬೆಂಗಳೂರು ವಕೀಲರ ಸಂಘದ ಸದಸ್ಯರು ವಿಕ್ರಂಜಿತ್ ಸೇನ್ ಅವರನ್ನು ಲೋಕಾಯುಕ್ತರನ್ನಾಗಿ ನೇಮಿಸುವುದು ಬೇಡ. ಕನ್ನಡಿಗರನ್ನು ನೇಮಿಸಿ ಎಂದು ಸಹಿ ಸಂಗ್ರಹಣೆ ಮಾಡಿದ್ದಾರೆ. ವಿಕ್ರಂಜಿತ್ ಸೇನ್ ಅವರು ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಾಗಿದ್ದಾಗ, ಜಿಲ್ಲೆಗಳಿಗೆ ಭೇಟಿ ಕೊಟ್ಟಿಲ್ಲ, ಸಿಟಿ ಸಿವಿಲ್ ಕೋರ್ಟ್ ಪ್ರಕರಣವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ವಕೀಲರು ಆರೋಪಿಸಿದ್ದಾರೆ.
ನ್ಯಾ.ಎಸ್.ಆರ್.ನಾಯಕ್ ಅವರ ನೇಮಕದ ಬಗ್ಗೆಯೂ ಅಪಸ್ವರವಿದೆ. ಆದ್ದರಿಂದ, ಸರ್ಕಾರ ಯಾವುದೇ ಅಂತಿಮ ನಿರ್ಧಾರವನ್ನು ಕೈಗೊಂಡಿಲ್ಲ. ಎಸ್.ಆರ್.ನಾಯಕ್ ಅವರ ಹೆಸರನ್ನು ಪರಿಗಣಿಸುವ ಸಾಧ್ಯತೆ ಇದೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications