ಜಿಲ್ಲಾ ಕಾಂಗ್ರೆಸ್ ಘಟಕಗಳ ಬಿಕ್ಕಟ್ಟು ಶಮನಕ್ಕೆ ವೇಣುಗೋಪಾಲ್ ಪ್ರವಾಸ

ಬೆಂಗಳೂರು, ಜೂನ್ 26 : ಜಿಲ್ಲಾ ಕಾಂಗ್ರೆಸ್ ಘಟಕಗಳಲ್ಲಿರುವ ಗೊಂದಲ, ಸಂಘಟನಾತ್ಮಕ ಬಿಕ್ಕಟ್ಟು ಪರಿಹಾರಕ್ಕೆ ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಅವರು ಇದೇ 27ರಿಂದ 30ರವರೆಗೆ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪಕ್ಷದ ಸಂಘಟನೆಗೆ ಚುರುಕು ಮುಟ್ಟಿಸಲು ಮುಂದಾಗಿದ್ದ ಅವರು, ಕೆಪಿಸಿಸಿ ಕಚೇರಿಯಲ್ಲಿ ಜಿಲ್ಲಾವಾರು ಪ್ರಮುಖರ ಸಭೆ ನಡೆಸಿದ್ದರು.

K C Venugopal will arrive in Bengaluru on a four-day visit on June 27 to 30th

ಹಾಸನ, ಬೆಳಗಾವಿ, ಮಂಗಳೂರು, ಮೈಸೂರು, ಧಾರವಾಡ, ಮಂಡ್ಯ, ಬಳ್ಳಾರಿ ಜಿಲ್ಲಾ ಘಟಕಗಳಲ್ಲಿ ಗೊಂದಲ ಇರುವುದು ಅವರ ಗಮನಕ್ಕೆ ಬಂದಿತ್ತು. ಜಿಲ್ಲಾ ಕೇಂದ್ರಕ್ಕೆ ಭೇಟಿ ಕೊಟ್ಟು ತಳಮಟ್ಟದ ಕಾರ್ಯಕರ್ತರ ಅಹವಾಲು ಆಲಿಸುವುದಾಗಿ ಅವರು ಭರವಸೆ ನೀಡಿದ್ದರು.

ಇದೇ 29ರಂದು ಕೂಡಲ ಸಂಗಮದಲ್ಲಿ ನಡೆಯಲಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್. ಪಾಟೀಲ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+