ಕೆ.ರೋಸಯ್ಯ ಕರ್ನಾಟಕದ ಉಸ್ತುವಾರಿ ರಾಜ್ಯಪಾಲರು
ಬೆಂಗಳೂರು, ಜೂ. 27 : ಕರ್ನಾಟಕದ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಶನಿವಾರ ತಮ್ಮ ಅಧಿಕಾರಾವಧಿ ಪೂರ್ಣಗೊಳಿಸಲಿದ್ದು, ಹೊಸ ರಾಜ್ಯಪಾಲರ ಆಯ್ಕೆ ಆಗುವ ತನಕ ತಮಿಳುನಾಡು ರಾಜ್ಯಪಾಲರಾದ ಕೆ.ರೋಸಯ್ಯ ಅವರಿಗೆ ಕರ್ನಾಟಕದ ಉಸ್ತುವಾರಿವಹಿಸಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರ ಅಧಿಕಾರಾವಧಿ ಜೂ.28ರ ಶನಿವಾರ ಅಂತ್ಯಗೊಳ್ಳಲಿದೆ. ಹೊಸ ರಾಜ್ಯಪಾಲರ ನೇಮಕವಾಗುವ ತನಕ ಕೆ.ರೋಸಯ್ಯ ಅವರು ಕರ್ನಾಟಕದ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದು ಶುಕ್ರವಾರ ಹೊರಡಿಸಲಾದ ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿಯಾಗಿರುವ ಕೆ.ರೋಸಯ್ಯ ಅವರು ಸದ್ಯ ತಮಿಳುನಾಡಿನ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರ ಜೊತೆಗೆ ಕರ್ನಾಟಕದ ಉಸ್ತುವಾರಿಯನ್ನು ಅವರಿಗೆ ವಹಿಸಲಾಗಿದೆ. ಹೊಸ ರಾಜ್ಯಪಾಲರು ಅಧಿಕಾರಿ ಸ್ವೀಕರಿಸುವ ತನಕ ರೋಸಯ್ಯ ಅವರು ಕಾರ್ಯ ನಿರ್ವಹಿಸಲಿದ್ದಾರೆ. [ಗವರ್ನರ್ ಎತ್ತಂಗಡಿ: ಮೋದಿ ಸರಕಾರದ ನಿರ್ಧಾರ ಸರಿಯೇ?]
ಕರ್ನಾಟಕಕ್ಕೆ ಯಾರು ರಾಜ್ಯಪಾಲರು : ಎಚ್.ಆರ್.ಭಾರದ್ವಾಜ್ ಅವರಿಂದ ತೆರವಾಗುವ ಕರ್ನಾಟಕದ ರಾಜ್ಯಪಾಲರ ಹುದ್ದೆಗೆ ಯಾರು ನೇಮಕವಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಬಿಜೆಪಿ ಹಿರಿಯ ನಾಯಕರಾದ ಮುರಳಿ ಮನೋಹರ ಜೋಷಿ, ಯಶವಂತ ಸಿನ್ಹಾ, ವಿ.ಕೆ.ಮಲ್ಹೋತ್ರಾ ಮತ್ತು ಕಲ್ಯಾಣ್ ಸಿಂಗ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.
ಆದರೆ, ಕರ್ನಾಟಕದ ರಾಜ್ಯಪಾಲರನ್ನಾಗಿ ಯಾರನ್ನು ನೇಮಿಸಲಾಗುತ್ತದೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಶನಿವಾರ ಎಚ್.ಆರ್.ಭಾರದ್ವಾಜ್ ಅವರ ಅಧಿಕಾರಾವಧಿ ಪೂರ್ಣಗೊಳ್ಳಲಿದ್ದು, ಜುಲೈ ಮೊದಲ ವಾರದಲ್ಲಿ ಕರ್ನಾಟಕಕ್ಕೆ ನೂತನ ರಾಜ್ಯಪಾಲರ ನೇಮಕವಾಗುವ ಸಾಧ್ಯತೆ ಇದೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ












Click it and Unblock the Notifications