Kabini Dam: ಭರ್ಜರಿ ಮಳೆಗೆ ಭರ್ತಿಯಾದ ಕಬಿನಿ ಜಲಾಶಯ: ಬಾಗಿನ ಅರ್ಪಣೆ
ಮಂಡ್ಯ, ಜುಲೈ 20: ರಾಜ್ಯದಲ್ಲಿ ಕಳೆದ ನಾಲ್ಕೈದು ತಿಂಗಳಿನಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ವರುಣಾನ ಆಗಮನದಿಂದಾಗಿ ಕೆಆರ್ ಎಸ್ ಸೇರಿದಂತೆ ವಿವಿಧ ಜಲಾಶಯಗಳು ಭರ್ತಿಯಾಗಿದ್ದು, ಇದೀಗ ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ. ಹೀಗಾಗಿ ಇಂದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಾಗಿನ ಅರ್ಪಿಸಿದ್ದಾರೆ. ಕೆಆರ್ಎಸ್ ಹಾಗೂ ಕಬಿನಿ ಜಲಾಶಯಕ್ಕೆ ಒಂದೇ ದಿನ ಬಾಗಿನ ಅರ್ಪಿಸುತ್ತಿದ್ದ ವಾಡಿಕೆ ಇತ್ತು. ಆದರೆ ರೈತರು ಹಾಗೂ ಹೋರಾಟಗಾರರ ಪ್ರತಿಭಟನೆಗೆ ಹೆದರಿ ಸರ್ಕಾರ ಬಾಗಿನ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಿತ್ತು. ಇದೀಗ ಇಂದು ಬಾಗಿನ ಅರ್ಪಣೆ ಕಾರ್ಯಕ್ರಮ ನೆರವೇರಿದೆ.
ಬಾಗಿನ ಅರ್ಪಿಸಿದ ಬಳಿಕ ಕಬಿನಿ ಅಣೆಕಟ್ಟಿನ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಕುರಿತು ಸರ್ಕಾರ ತಾಂತ್ರಿಕ ಸಮಿತಿ ರಚಿಸಿದ್ದು, ಈ ಸಮಿತಿ ವರದಿ ಬಂದ ನಂತರ ಅಗತ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಆರ್ ಎಸ್ ಅಣೆಕಟ್ಟಿನ ನಂತರ ಇಂದು ಕಬಿನಿಯಲ್ಲಿ ಬಾಗಿನ ಅರ್ಪಣೆ ಮಾಡಿದ್ದೇವೆ. ಈ ಮಧ್ಯೆ ಎರಡು ವರ್ಷ ಅಣೆಕಟ್ಟು ಭರ್ತಿ ಆಗಿರಲಿಲ್ಲ. ಈ ವರ್ಷ ತುಂಬಿದೆ. ಕಬಿನಿಯಿಂದ ನಮಗೆ ಕಷ್ಟ ಕಾಲದಲ್ಲೂ ಸಹಾಯವಾಗುತ್ತಿದೆ. ಈ ಪ್ರದೇಶ ವಿಸ್ತರಣೆ ಮಾಡಬೇಕು ಎಂದು ನಮ್ಮ ಶಾಸಕರು ಪ್ರಸ್ತಾವನೆ ನೀಡಿದ್ದಾರೆ. ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಮಾರು 35 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದೇವೆ. ಈ ಭಾಗದಲ್ಲಿ 88 ಕೋಟಿ ಮೊತ್ತದ ಹನಿ ನೀರಾವರಿ ಯೋಜನೆಗೆ ಡಿಪಿಆರ್ ಸಿದ್ಧಗೊಳಿಸಿ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು. ತುಂಗಭದ್ರಾ ಅಣೆಕಟ್ಟು ಗೇಟ್ ದುರಸ್ತಿಯಾದ ಬಳಿಕ ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆ ವಿಚಾರದಲ್ಲಿ ತಾಂತ್ರಿಕ ಸಮಿತಿ ರಚಿಸಲಾಗಿದೆ. ಈ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
ಕಬಿನಿ ಉತ್ಸವ ಮಾಡುವ ಬಗ್ಗೆ ಒತ್ತಾಯ ಇದೆ ಎಂಬ ಪ್ರಶ್ನೆಗೆ ಮಾಧ್ಯಮಗಳ ಜೊತೆಗೆ ಉತ್ತರಿಸಿ, ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಸಚಿವರು ಹಾಗೂ ಇತರರೊಂದಿಗೆ ಚರ್ಚೆ ಮಾಡುತ್ತೇನೆ. ಕಬಿನಿ ಉತ್ಸವ, ಕಾವೇರಿ ಆರತಿ ಮಾಡಲು ನಾವು ಚರ್ಚೆ ಮಾಡುತ್ತಿದ್ದೇವೆ. ಈ ಕಾರ್ಯಕ್ರಮಗಳ ಮೂಲಕ ಪ್ರವಾಸೋದ್ಯಮ ಆಕರ್ಷಣೆ ಹಾಗೂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲು ನಮ್ಮ ಸರ್ಕಾರ ಸಂಕಲ್ಪ ಮಾಡಿದೆ ಎಂದು ಹೇಳಿದರು.
ಬಟಾನಿಕಲ್ ಗಾರ್ಡನ್ ಮಾಡುವ ಯೋಜನೆ ನೆನೆಗುದಿಗೆ ಬಿದ್ದಿದೆಯಲ್ಲ ಎಂದು ಕೇಳಿದಾಗ, ಇದಕ್ಕೆ ಬಂಡವಾಳ ಹೂಡಿಕೆ ಮಾಡುವವರು ಮುಂದೆ ಬರಬೇಕು. ನಮ್ಮ ಆದ್ಯತೆ ಇರುವುದು ನೀರಿನ ಸಮರ್ಪಕ ಬಳಕೆ ಹಾಗೂ ಅಣೆಕಟ್ಟು ಸುರಕ್ಷತೆ ಬಗ್ಗೆ ಇದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಹೇಳಿದರು.
ದಿಢೀರನೆ ದೆಹಲಿ ಪ್ರವಾಸದ ಕುರಿತು ಮಾತನಾಡಿ, ನಾನು ಸಿಎಂಗೆ ಮಾಹಿತಿ ನೀಡಿ ನಾನು ಕಾರ್ಯಕ್ರಮದಿಂದ ಹೊರಟೆ. ಮಾರ್ಗ ಮಧ್ಯದಲ್ಲೇ ನನ್ನ ಬೆಂಗಾವಲು ವಾಹನ ಅಪಘಾತಕ್ಕೀಡಾಯಿತು. ತಾಯಿ ಚಾಮುಂಡೇಶ್ವರಿ ಕೃಪೆ ಯಾರಿಗೂ ಅಪಾಯವಾಗಿಲ್ಲ. ವಕೀಲರ ಜೊತೆ ಸಭೆ ನಿಗದಿಯಾದ ಕಾರಣ, ನಾನು 7.30ಕ್ಕೆ ತೆರಳಿ, 9.30ಕ್ಕೆ ವಾಪಸ್ ಬಂದಿದ್ದೇನೆ. ನಂತರ ಇಂದಿನ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದೇನೆ. ನನ್ನ ಖಾಸಗಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಹೋಗಿದ್ದು, ಅದನ್ನು ಮುಗಿಸಿಕೊಂಡು ಬಂದಿದ್ದೇನೆ. ಇದರ ಹೊರತಾಗಿ ರಾಜಕಾರಣವಿಲ್ಲ ಎಂದು ಹೇಳಿದರು.
ಡಿ.ಕೆ. ಶಿವಕುಮಾರ್ ಅವರಿಗೆ ಅಪಮಾನ ಮಾಡಲಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಕುರಿತು ಮಾತನಾಡಿ, ಅವರಿಗೆ ಯಾವಾಗಲೂ ನನ್ನ ಮೇಲೆ ಪ್ರೀತಿ ಜಾಸ್ತಿ. ನಾನು ಹೆಚ್ಚು ಬಲಿಷ್ಠವಾಗಿರುವುದಕ್ಕೆ ನನ್ನ ಮೇಲೆ ಪ್ರೀತಿ ಜಾಸ್ತಿ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಲೇವಡಿ ಮಾಡಿದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications