ಯಡಿಯೂರಪ್ಪನವರೇ ಹೆಣ್ಣಿನ ಮಾತನ್ನು ಕೇಳಿದ್ರೆ ಸರ್ವನಾಶವಾಗ್ತೀರಾ
ಹೆಣ್ಣಿನ ಮಾತನ್ನು ಕೇಳಿದರೆ ಸರ್ವನಾಶ ಆಗ್ತೀರಾ ಎಂದು ಕಾಗಿನೆಲೆ ಪೀಠಾಧಿಪತಿಗಳು, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರಿಗೆ ಎಚ್ಚರಿಕೆ ನೀಡಿದ್ದಾರೆ.
ರಾಯಚೂರು, ಜ 14: ಧರ್ಮಶಾಸ್ತ್ರ, ಗುರುಗಳ ಮಾತನ್ನು ಕೇಳಿದ್ರೆ ಉದ್ದಾರವಾಗುತ್ತೀರಾ, ಹೆಣ್ಣಿನ ಮಾತನ್ನು ಕೇಳಿದರೆ ಸರ್ವನಾಶ ಆಗ್ತೀರಾ ಎಂದು ಕಾಗಿನೆಲೆ ಪೀಠಾಧಿಪತಿಗಳು, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರಿಗೆ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಕರ ಸಂಕ್ರಾತಿಯ ದಿನವಾದ ಶನಿವಾರ (ಜ 14) ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಕಾಗಿನೆಲೆ ಮಠದ ನಿರಂಜನಾನಂದಪುರಿ ಶ್ರೀಗಳು, ಯಡಿಯೂರಪ್ಪನವರಿಗೆ ಮೇಲಿನ ಎಚ್ಚರಿಕೆ ನೀಡಿ ಹೊಸ ವಿವಾದ ಹುಟ್ಟು ಹಾಕಿದ್ದಾರೆ. (ಬಿಜೆಪಿಯಲ್ಲಿ ಮುಗಿಯದ ರಗಳೆ)
ನಿರಂಜನಾನಂದಪುರಿ ಶ್ರೀಗಳು ಹೆಣ್ಣಿನ ಮಾತನ್ನು ಕೇಳಿದ್ರೆ ಸರ್ವನಾಶ ಆಗುತ್ತೀರಾ ಎಂದಾಗ, ವೇದಿಕೆಯಲ್ಲಿದ್ದ ಬಿಜೆಪಿಯ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಕೈಮುಗಿದು ಆ ರೀತಿ ಹೇಳಿಕೆ ನೀಡಬೇಡಿ ಎಂದು ಶ್ರೀಗಳಲ್ಲಿ ಮನವಿ ಮಾಡಿದ ಘಟನೆ ನಡೆಯಿತು.

ಸ್ತ್ರೀ ಬುದ್ಧಿ ಪ್ರಳಯಾಂತಕವಾದದ್ದು ಎನ್ನುವುದಕ್ಕೆ ಇತಿಹಾಸ ನಮ್ಮ ಮುಂದೆ ಸಾಕ್ಷಿಯಿದೆ, ಇದು ನಿಮಗೆ ಗೊತ್ತಿರದ ವಿಚಾರವಲ್ಲ. ಸ್ವಲ್ಪ ಗುರುವಿನ ಮಾತು ಕೇಳಿ ಯಡಿಯೂರಪ್ಪನವರೇ ಎಂದು ಶ್ರೀಗಳು ವೇದಿಕೆಯಲ್ಲಿ ಬಿಎಸ್ವೈಗೆ ಎಚ್ಚರಿಕೆ ನೀಡಿದ್ದಾರೆ.
ನೀವು ಹೆಣ್ಣಿನ ಮಾತು ಕೇಳಿ ಸರ್ವನಾಶ ಆಗುತ್ತಿದ್ದೀರಿ. ಹಾಲುಮತ ಸಮಾಜ ಇತ್ತೀಚಿನ ನಿಮ್ಮ ನಡವಳಿಕೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ, ಇನ್ನಾದರೂ ಎಚ್ಚೆತ್ತುಕೊಳ್ಳಿ ಎಂದು ಸಮಾವೇಶದಲ್ಲಿ ಯಡಿಯೂರಪ್ಪನವರಿಗೆ ನಿರಂಜನಾನಂದಪುರಿ ಶ್ರೀಗಳು ಎಚ್ಚರಿಕೆಯ ಮೂಲಕ ಮನವಿ ಮಾಡಿದ್ದಾರೆ.
ಶ್ರೀಗಳು ಭಾಷಣ ಮಾಡುತ್ತಿದ್ದಾಗ, ಅವರ ಬಳಿ ಬಂದ ಈಶ್ವರಪ್ಪ ಆ ರೀತಿಯ ಹೇಳಿಕೆಯನ್ನು ನೀಡಬೇಡಿ ಎಂದು ಕೈಮುಗಿದು ಮನವಿ ಮಾಡಿದರು. ಆಗ ಆಯ್ತು ಹೋಗ್ರೀ.. ಕೂತ್ಕೊಳ್ಳಿ ಎಂದು ಶ್ರೀಗಳು, ಈಶ್ವರಪ್ಪನವರಿಗೆ ಸೂಚಿಸಿದರು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications