ಕಲಘಟಗಿ ಟಿಕೆಟ್ ಸಿದ್ದರಾಮಯ್ಯ ಬಣದ ಪಾಲು: ಬಿಜೆಪಿ ಸೇರ್ಪಡೆಯಾದ ಡಿಕೆಶಿ ಬಣದ ಮುಖಂಡ
ಬೆಂಗಳೂರು, ಏಪ್ರಿಲ್ 09: ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆಗೆ ಸರಿಯಾಗಿ ಒಂದು ತಿಂಗಳಷ್ಟೇ ಬಾಕಿ ಇದೆ. ಈ ನಡುವೆ ಪಕ್ಷಾಂತರ ಹೆಚ್ಚಾಗುತ್ತಿದ್ದು, ಕಾಂಗ್ರೆಸ್ನಿಂದ ಮತ್ತೊಬ್ಬ ಮುಖಂಡ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಬಣದಲ್ಲಿ ಗುರುತಿಸಿಕೊಂಡಿದ್ದ ಕಲಘಟಗಿಯ ಟಿಕೆಟ್ ಆಕಾಂಕ್ಷಿ ನಾಗರಾಜ ಛಬ್ಬಿ ಅವರು ಭಾನುವಾರ ರಾಷ್ಟ್ರ ರಾಜಧಾನಿಯಲ್ಲಿ ಭಾರತೀಯ ಜನತಾ ಪಾರ್ಟಿ (BJP)ಯನ್ನು ಸೇರ್ಪಡೆಯಾದರು.

ಕಾಂಗ್ರೆಸ್ ಮುಖಂಡ ನಾಗರಾಜ ಛಬ್ಬಿ ಅವರನ್ನು ಪಕ್ಷದ ಬಾವುಟ ಹಾಗೂ ಹೂಗುಚ್ಚ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಗೂ ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪಹ್ಲಾದ್ ಜೋಶಿ ಬರಮಾಡಿಕೊಂಡರು.
ಇತ್ತಿಚೇಗೆ ಕಾಂಗ್ರೆಸ್ನಿಂದ ಎರಡು ಹಂತದಲ್ಲಿ ಒಟ್ಟು 42ಮಂದಿಗೆ ಟಿಕೆಟ್ ಹಂಚಿಕೆ ಮಾಡಿದ್ದ ಎರಡನೇ ಪಟ್ಟಿಯನ್ನು ಕೆಪಿಸಿಸಿ ಬಿಡುಗಡೆ ಮಾಡಿತ್ತು. ಅದರಲ್ಲಿ ಕಲಘಟಗಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಅನ್ನು ಸಂತೋಷ್ ಲಾಡ್ ಅವರಿಗೆ ನೀಡಲಾಯಿತು. ಈ ಸಂತೋಷ್ ಲಾಡ್ ಸಿದ್ದರಾಮಯ್ಯನವರ ಬಣದಲ್ಲಿ ಗುರುತಿಸಿಕೊಂಡವರು.
ರಾಜ್ಯಾಧ್ಯಕ್ಷರಾದ ಶ್ರೀ @nalinkateel & ಮುಖ್ಯಮಂತ್ರಿಗಳಾದ ಶ್ರೀ @BSBommai ಅವರ ಸಮ್ಮುಖದಲ್ಲಿ ನವದೆಹಲಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರು, ಕಾಂಗ್ರೆಸ್ನ ಹಿರಿಯ ನಾಯಕರಾದ ಶ್ರೀ ನಾಗರಾಜ್ ಛಬ್ಬಿ ಅವರು ಬಿಜೆಪಿಗೆ ಸೇರ್ಪಡೆಗೊಂಡರು.
— BJP Karnataka (@BJP4Karnataka) April 9, 2023
ಕೇಂದ್ರ ಸಚಿವರಾದ ಶ್ರೀ @JoshiPralhad, ಸಚಿವರಾದ ಶ್ರೀ @GovindKarjol ಉಪಸ್ಥಿತರಿದ್ದರು. pic.twitter.com/sJdIkt6jto
ನಾಗರಾಜ ಛಬ್ಬಿ ಅವರು ಡಿಕೆ ಶಿವಕುಮಾರ್ ಬಣದಲ್ಲಿ ಸಾಕಷ್ಟು ಸಕ್ರಿಯವಾಗಿದ್ದರು. ಅವರು ಕಲಘಟಗಿ ಕ್ಷೇತ್ರದಿಂದ ಟಿಕೆಟ್ ಬಯಸಿದ್ದರು. ಆದರೆ ಅಲ್ಲಿ ಬೇರೆಯವರಿಗೆ ಟಿಕೆಟ್ ನೀಡಿದ ಕಾಂಗ್ರೆಸ್ ನಡೆಗೆ ಬೇಸರಗೊಂಡು ಪಕ್ಷ ತೊರೆದಿದ್ದಾರೆ ಎನ್ನಲಾಗಿದೆ.
6 ತಿಂಗಳಿಗೂ ಮೊದಲೇ ಕಾಂಗ್ರೆಸ್ನಲ್ಲಿ ಟಿಕೆಟ್ ಫೈಟ್
ರಾಜ್ಯ ವಿಧಾನ ಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಮುನ್ನವೇ ಅಂದರೆ ಆರು ತಿಂಗಳ ಮೊದಲಿನಿಂದಲೂ ಧಾರವಾಡ ಜಿಲ್ಲೆ ವ್ಯಾಪ್ತಿಗೆ ಒಳಪಡುವ ಕಲಘಟಗಿ ತಾಲೂಕಿನ ಕಾಂಗ್ರೆಸ್ ಟಿಕೆಟ್ ಗಾಗಿ ಸಂತೋಷ್ ಲಾಡ್ ಮತ್ತು ನಾಗರಾಜ ಛಬ್ಬಿ ಮಧ್ಯೆ ತೀವ್ರ ಪೈಪೋಟಿ ಆರಂಭವಾಗಿತ್ತು. ಇಬ್ಬರು ನಾಯಕರ ನಡುವೆ ತ್ಯಾಗ ವಾದ ಪ್ರತಿವಾದ ನಡೆಯುತ್ತಿತ್ತು. ಇದು ಸಿದ್ದರಾಮಯ್ಯ ಹಾಗೂ ಡಿಕೆಶಿ ಬಣ ಬಡಿದಾಟ ಎಂದಾಗಿ ಕಾಂಗ್ರೆಸ್ ಪಕ್ಷಕ್ಕೆ ತಲೆ ನೋವು ಉಂಟು ಮಾಡಿತ್ತು.
ಕ್ಷೇತ್ರದಲ್ಲಿ ಟಿಕೆಟ್ ಘೋಷಣೆಗೂ ಮೊದಲೇ ನಾಗರಾಜ್ ಛಿಬ್ಬಿ ಮತದಾರರ ಮನೆ ಮನೆಗಳಿಗೆ ತೆರಳಿ ಕುಕ್ಕರ್ ಹಂಚುವ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಸಂತೋಷ ಲಾಡ್ ಸಹ ತಾವು ಮಾಡಿದ ಸಹಾಯವನ್ನು ನೆನಪಿಸಿದ್ದರು. ಮೇಲ್ನೋಟಕ್ಕೆ ಇದು ಛಬ್ಬಿ ಲಾಡ್ ನಡುವಿನ ಸ್ಪರ್ಧೆ ಅಂತಾ ಕಂಡು ಬಂದರೂ ಇಲ್ಲಿ ಡಿಕೆಶಿ ಬಾಣ ಮತ್ತು ಸಿದ್ದು ಬಣಗಳ ಬಡಿದಾಟವೇ ಆಗಿತ್ತು. ಟಿಕೆಟ್ ಕೈ ತಪ್ಪಿದ್ದರಿಂದ ಛಬ್ಬಿ ಅವರು ಪಕ್ಷಕ್ಕೆ ಪೆಟ್ಟು ನೀಡಿದ್ದಾರೆ.
ಕಲಘಟಗಿಯ ಪ್ರಬಲ ಟಿಕೆಟ್ ಆಕಾಂಕ್ಷಿ ನಾನಾಗಿದ್ದೆ ಎಂದು ನಾಗರಾಜ ಛಬ್ಬಿ ಹೇಳಿದರು. 2008ರಲ್ಲಿ ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಎಲ್ಲೋ ಬಳ್ಳಾರಿಯಿಂದ ಬಂದು ಸಂತೋಷ್ ಲಾಡ್ ಅವರು ಎರಡು ತಿಂಗಳಿನಲ್ಲಿ ಪ್ರಚಾರ ಮಾಡಿ ಬಹುಮತ ಪಡೆದರು. ಅವರು ಹೇಗೆ ಗೆದ್ದರು ಎಂಬುದನ್ನು ಮರೆತಿದ್ದಾರೆ ಎಂದು ಛಬ್ಬಿ ನೆನಪಿಸಿದರು.
ಛಬ್ಬಿ ಹೇಳಿಕೆಗೆ ತಿರುಗೇಟು ನೀಡಿರುವ ಸಂತೋಷ್ ಲಾಡ್, ನಾನು ಯಾರ ತ್ಯಾಗದಿಂದ ಕಲಘಟಗಿಯಲ್ಲಿ ಗೆದ್ದಿಲ್ಲ. ಜೆಡಿಎಸ್ ತೊರೆದ ಸಂದರ್ಭದಲ್ಲಿ ಕಾಂಗ್ರೆಸ್ನಲ್ಲಿ ಜಾಗ ಸಿಕ್ಕಿತು. ಬಳಿಕ ಕ್ಷೇತ್ರ ಪುನರ್ವಿಂಗಡನೆಯಾಗಿ ಕಲಘಟಗಿಗೆ ಬಂದೆ. ನಮ್ಮ ಪಕ್ಷದ ನಾಯಕರ ಕಾರ್ಯಕರ್ತರು, ಶ್ರಮ ಮತ್ತು ಜನರ ಆರ್ಶಿವಾದದಿಂದ ನಾನು ಕಲಘಟಗಿಯಲ್ಲಿ ಗೆದ್ದಿದ್ದೇನೆ ಎಂದು ತಿಳಿಸಿದರು.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications