ಕಲಬುರ್ಗಿ ಹತ್ಯೆ : ಗಡಿಯಲ್ಲಿ ರುದ್ರ ಪಾಟೀಲ್ಗಾಗಿ ಹುಡುಕಾಟ
ಬೆಂಗಳೂರು, ಸೆಪ್ಟೆಂಬರ್ 21 : ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ, ರುದ್ರ ಪಾಟೀಲ್ ಹತ್ಯೆಯ ಸಂಚು ರೂಪಿಸಿದ್ದ ಎಂಬುದಕ್ಕೆ ಮಾಹಿತಿಗಳನ್ನು ಸಂಗ್ರಹಣೆ ಮಾಡಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪಾಟೀಲ್ ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದೆ.
ಮಹಾರಾಷ್ಟ್ರ ಪೊಲೀಸರ ಸಹಕಾರ ಪಡೆದಿರುವ ಕರ್ನಾಟಕದ ಸಿಐಡಿ ತಂಡ ರುದ್ರ ಪಾಟೀಲ್ಗಾಗಿ ಹುಡುಕಾಟ ನಡೆಸುತ್ತಿದೆ. ಕಲಬುರ್ಗಿ ಅವರ ಹತ್ಯೆ ನಡೆದ ಬಳಿಕ ಕೊನೆಯ ಬಾರಿ ಪಾಟೀಲ್ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಕಾಣಿಸಿಕೊಂಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ. [ಕಲಬುರ್ಗಿ ಹತ್ಯೆ ಮಾಸ್ಟರ್ ಮೈಂಡ್ ಪಾಟೀಲ್]

ರುದ್ರ ಪಾಟೀಲ್ ಗೋವಿಂದ ಪನ್ಸಾರೆ ಮತ್ತು ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದ ಸಂಚನ್ನು ರೂಪಿಸಿದ್ದಾನೆ ಎಂಬ ಆರೋಪವಿದೆ. ಆದ್ದರಿಂದ, ಮಹಾರಾಷ್ಟ್ರದ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. [ಮೂರು ಹತ್ಯೆಗಳ ನಡುವೆ ಸಾಮ್ಯತೆ]
ರೆಡ್ ಕಾರ್ನರ್ ನೋಟಿಸ್ : ರುದ್ರ ಪಾಟೀಲ್ ಗೋವಾದಲ್ಲಿ ನಡೆದ ಎರಡು ಬಾಂಬ್ ಸ್ಫೋಟ ಪ್ರಕರಣದಲ್ಲಿಯೂ ಭಾಗಿಯಾಗಿದ್ದಾನೆ ಎಂಬ ಆರೋಪವಿದೆ. ಆದ್ದರಿಂದ, ರಾಷ್ಟ್ರೀಯ ತನಿಖಾ ದಳದ ಮೋಸ್ಟ್ ವಾಟೆಂಡ್ ಪಟ್ಟಿಯಲ್ಲಿ ಪಾಟೀಲ್ ಇದ್ದು, ಆತನ ಪತ್ತೆಗಾಗಿ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ. ಅತ್ತ ಸಿಬಿಐಗೂ ಪಾಟೀಲ್ ಬೇಕಾಗಿದ್ದಾನೆ.
2015ರ ಆ.30ರಂದು ಧಾರವಾಡದಲ್ಲಿ ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡೆಯುವ ಕೆಲವೇ ದಿನಗಳ ಮೊದಲು ರುದ್ರ ಪಾಟೀಲ್ ಕೊಲ್ಲಾಪುರಕ್ಕೆ ಭೇಟಿ ನೀಡಿದ್ದ ಎಂದು ಮಹಾರಾಷ್ಟ್ರ ಗುಪ್ತಚರ ಇಲಾಖೆ ಮಾಹಿತಿ ಸಂಗ್ರಹಿಸಿದೆ. ಈ ಮಾಹಿತಿಯ ಅನ್ವಯ ಹತ್ಯೆ ನಡೆಯುವ ದಿನ ಪಾಟೀಲ್ ಬೆಳಗಾವಿಯಲ್ಲಿದ್ದ ಎಂದು ತಿಳಿದುಬಂದಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications