ವಿವಾದವಾದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆದೇಶ
ಬೆಂಗಳೂರು, ಸೆಪ್ಟೆಂಬರ್ 12 : ಹೈದರಾಬಾದ್-ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಬದಲಾವಣೆ ಮಾಡಲು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಸೆ. 17ರಂದು ನಡೆಯಬೇಕಿರುವ ಹೈದರಾಬಾದ್-ಕರ್ನಾಟಕ ವಿಮೋಚನಾ ದಿನದ ಆಚರಣೆ ಈಗ ವಿವಾದಕ್ಕೆ ಕಾರಣವಾಗಿದೆ.
ಹೈದರಾಬಾದ್-ಕರ್ನಾಟಕ ವಿಮೋಚನಾ ದಿನವನ್ನು 'ಕಲ್ಯಾಣ ಕರ್ನಾಟಕ ವಿಮೋಚನಾ ದಿನ'ವಾಗಿ ಆಚರಣೆ ಮಾಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಕಾಂಗ್ರೆಸ್ನ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, "ಹೈದರಾಬಾದ್-ಕರ್ನಾಟಕ ಎಂಬ ಪದ ಎಲ್ಲೆಲ್ಲಿ ಬಳಕೆಯಾಗಿದೆಯೋ ಅಲ್ಲಿ ಕಲ್ಯಾಣ ಕರ್ನಾಟಕ ಎಂದು ವಿವೇಚನೆ ಇಲ್ಲದೆ ಬಳಕೆ ಮಾಡಲಾಗಿದೆ. ಇದರಿಂದ ಸಾಕಷ್ಟು ಗೊಂದಲಗಳಾಗಿವೆ" ಎಂದು ಹೇಳಿದ್ದಾರೆ.

"ಕಲ್ಯಾಣ ಕರ್ನಾಟಕದಿಂದಲೇ ವಿಮೋಚನೆ ಎಂಬ ತಪ್ಪು ಅರ್ಥವೂ ಹೊರಹೊಮ್ಮಲಿದೆ. ಹೀಗಾಗಿ ಈ ಗೊಂದಲವನ್ನು ಬಗೆಹರಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡುತ್ತೇವೆ" ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಶಾಸಕರ ಸಮರ್ಥನೆ : ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಸರ್ಕಾರದ ತೀರ್ಮಾನವನ್ನು ಸಮರ್ಥಿಸಿಕೊಂಡಿದ್ದಾರೆ. "ಸರ್ಕಾರದ ಆದೇಶದಲ್ಲಿ ಗೊಂದಲವಿಲ್ಲ. ಕಲ್ಯಾಣ ಕರ್ನಾಟಕದ ಭಾಗವಾಗಿದ್ದ ಈ ಪ್ರದೇಶ ಹೈದರಾಬಾದ್ ನಿಜಾಮರ ಆಳ್ವಿಕೆ ಒಳಪಟ್ಟಿತ್ತು" ಎಂದು ಹೇಳಿದ್ದಾರೆ.
"1948ರ ಸೆಪ್ಟೆಂಬರ್ 17ರಂದು ವಿಲೀನಗೊಂಡಿತು ಈ ವಿಮೋಚನಾ ದಿನವನ್ನು ಸಂಭ್ರಮದಿಂದ ಆಚರಣೆ ಮಾಡಬೇಕು. ಮೊಸರಿನಲ್ಲಿ ಕಲ್ಲು ಹುಡುಕಬಾರದು" ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.
-
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್












Click it and Unblock the Notifications