Get Updates
Get notified of breaking news, exclusive insights, and must-see stories!

ವಿವಾದವಾದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆದೇಶ

ಬೆಂಗಳೂರು, ಸೆಪ್ಟೆಂಬರ್ 12 : ಹೈದರಾಬಾದ್-ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಬದಲಾವಣೆ ಮಾಡಲು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಸೆ. 17ರಂದು ನಡೆಯಬೇಕಿರುವ ಹೈದರಾಬಾದ್-ಕರ್ನಾಟಕ ವಿಮೋಚನಾ ದಿನದ ಆಚರಣೆ ಈಗ ವಿವಾದಕ್ಕೆ ಕಾರಣವಾಗಿದೆ.

ಹೈದರಾಬಾದ್-ಕರ್ನಾಟಕ ವಿಮೋಚನಾ ದಿನವನ್ನು 'ಕಲ್ಯಾಣ ಕರ್ನಾಟಕ ವಿಮೋಚನಾ ದಿನ'ವಾಗಿ ಆಚರಣೆ ಮಾಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಕಾಂಗ್ರೆಸ್‌ನ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ, "ಹೈದರಾಬಾದ್-ಕರ್ನಾಟಕ ಎಂಬ ಪದ ಎಲ್ಲೆಲ್ಲಿ ಬಳಕೆಯಾಗಿದೆಯೋ ಅಲ್ಲಿ ಕಲ್ಯಾಣ ಕರ್ನಾಟಕ ಎಂದು ವಿವೇಚನೆ ಇಲ್ಲದೆ ಬಳಕೆ ಮಾಡಲಾಗಿದೆ. ಇದರಿಂದ ಸಾಕಷ್ಟು ಗೊಂದಲಗಳಾಗಿವೆ" ಎಂದು ಹೇಳಿದ್ದಾರೆ.

Kalyana Karnataka

"ಕಲ್ಯಾಣ ಕರ್ನಾಟಕದಿಂದಲೇ ವಿಮೋಚನೆ ಎಂಬ ತಪ್ಪು ಅರ್ಥವೂ ಹೊರಹೊಮ್ಮಲಿದೆ. ಹೀಗಾಗಿ ಈ ಗೊಂದಲವನ್ನು ಬಗೆಹರಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡುತ್ತೇವೆ" ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶಾಸಕರ ಸಮರ್ಥನೆ : ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಸರ್ಕಾರದ ತೀರ್ಮಾನವನ್ನು ಸಮರ್ಥಿಸಿಕೊಂಡಿದ್ದಾರೆ. "ಸರ್ಕಾರದ ಆದೇಶದಲ್ಲಿ ಗೊಂದಲವಿಲ್ಲ. ಕಲ್ಯಾಣ ಕರ್ನಾಟಕದ ಭಾಗವಾಗಿದ್ದ ಈ ಪ್ರದೇಶ ಹೈದರಾಬಾದ್ ನಿಜಾಮರ ಆಳ್ವಿಕೆ ಒಳಪಟ್ಟಿತ್ತು" ಎಂದು ಹೇಳಿದ್ದಾರೆ.

"1948ರ ಸೆಪ್ಟೆಂಬರ್ 17ರಂದು ವಿಲೀನಗೊಂಡಿತು ಈ ವಿಮೋಚನಾ ದಿನವನ್ನು ಸಂಭ್ರಮದಿಂದ ಆಚರಣೆ ಮಾಡಬೇಕು. ಮೊಸರಿನಲ್ಲಿ ಕಲ್ಲು ಹುಡುಕಬಾರದು" ಎಂದು ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+