ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿವಾದವಾದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆದೇಶ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 12 : ಹೈದರಾಬಾದ್-ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಬದಲಾವಣೆ ಮಾಡಲು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಸೆ. 17ರಂದು ನಡೆಯಬೇಕಿರುವ ಹೈದರಾಬಾದ್-ಕರ್ನಾಟಕ ವಿಮೋಚನಾ ದಿನದ ಆಚರಣೆ ಈಗ ವಿವಾದಕ್ಕೆ ಕಾರಣವಾಗಿದೆ.

ಹೈದರಾಬಾದ್-ಕರ್ನಾಟಕ ವಿಮೋಚನಾ ದಿನವನ್ನು 'ಕಲ್ಯಾಣ ಕರ್ನಾಟಕ ವಿಮೋಚನಾ ದಿನ'ವಾಗಿ ಆಚರಣೆ ಮಾಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಕಾಂಗ್ರೆಸ್‌ನ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್ ಕರ್ನಾಟಕ ಇನ್ನು ಮುಂದೆ ಕಲ್ಯಾಣ ಕರ್ನಾಟಕಹೈದರಾಬಾದ್ ಕರ್ನಾಟಕ ಇನ್ನು ಮುಂದೆ ಕಲ್ಯಾಣ ಕರ್ನಾಟಕ

ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ, "ಹೈದರಾಬಾದ್-ಕರ್ನಾಟಕ ಎಂಬ ಪದ ಎಲ್ಲೆಲ್ಲಿ ಬಳಕೆಯಾಗಿದೆಯೋ ಅಲ್ಲಿ ಕಲ್ಯಾಣ ಕರ್ನಾಟಕ ಎಂದು ವಿವೇಚನೆ ಇಲ್ಲದೆ ಬಳಕೆ ಮಾಡಲಾಗಿದೆ. ಇದರಿಂದ ಸಾಕಷ್ಟು ಗೊಂದಲಗಳಾಗಿವೆ" ಎಂದು ಹೇಳಿದ್ದಾರೆ.

ಹೈ-ಕರ್ನಾಟಕಕ್ಕೆ ವಿವೇಚನಾ ಅನುದಾನ: ವಿಜಯನಗರಕ್ಕೆ ಬಂಪರ್ ಲಾಟರಿಹೈ-ಕರ್ನಾಟಕಕ್ಕೆ ವಿವೇಚನಾ ಅನುದಾನ: ವಿಜಯನಗರಕ್ಕೆ ಬಂಪರ್ ಲಾಟರಿ

Kalyana Karnataka

"ಕಲ್ಯಾಣ ಕರ್ನಾಟಕದಿಂದಲೇ ವಿಮೋಚನೆ ಎಂಬ ತಪ್ಪು ಅರ್ಥವೂ ಹೊರಹೊಮ್ಮಲಿದೆ. ಹೀಗಾಗಿ ಈ ಗೊಂದಲವನ್ನು ಬಗೆಹರಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡುತ್ತೇವೆ" ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಹೈ-ಕ ವಿಶೇಷ ಸ್ಥಾನಮಾನಕ್ಕೆ ಲೋಕಸಭೆ ಅಸ್ತುಹೈ-ಕ ವಿಶೇಷ ಸ್ಥಾನಮಾನಕ್ಕೆ ಲೋಕಸಭೆ ಅಸ್ತು

ಶಾಸಕರ ಸಮರ್ಥನೆ : ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಸರ್ಕಾರದ ತೀರ್ಮಾನವನ್ನು ಸಮರ್ಥಿಸಿಕೊಂಡಿದ್ದಾರೆ. "ಸರ್ಕಾರದ ಆದೇಶದಲ್ಲಿ ಗೊಂದಲವಿಲ್ಲ. ಕಲ್ಯಾಣ ಕರ್ನಾಟಕದ ಭಾಗವಾಗಿದ್ದ ಈ ಪ್ರದೇಶ ಹೈದರಾಬಾದ್ ನಿಜಾಮರ ಆಳ್ವಿಕೆ ಒಳಪಟ್ಟಿತ್ತು" ಎಂದು ಹೇಳಿದ್ದಾರೆ.

"1948ರ ಸೆಪ್ಟೆಂಬರ್ 17ರಂದು ವಿಲೀನಗೊಂಡಿತು ಈ ವಿಮೋಚನಾ ದಿನವನ್ನು ಸಂಭ್ರಮದಿಂದ ಆಚರಣೆ ಮಾಡಬೇಕು. ಮೊಸರಿನಲ್ಲಿ ಕಲ್ಲು ಹುಡುಕಬಾರದು" ಎಂದು ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.

English summary
Karnataka government approved to rename Hyderabad-Karnataka region Kalyana Karnataka. The celebration of Kalyana Karnataka on September 17 sparked controversy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X