ಕಮಲಾಕರ್ ಭಟ್ ಪ್ರಕರಣ: ಮಹಿಳೆಗೆ ಮತ್ತೊಬ್ಬರ ಜೊತೆಗೂ ನಂಟು, ಖಾಸಗಿ ಫೋಟೋಗಳು ಪತ್ತೆ
ವಸಂತ ನಾಯಕ್ ಹತ್ಯೆ ಪ್ರಕರಣ ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಇದರ ಪ್ರಮುಖ ಆರೋಪಿಗಳಾದ ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಸುಚಿತ್ರಾ ಎನ್ನುವ ಮಹಿಳೆ ವಿರುದ್ಧದ ಆರೋಪಗಳು ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿವೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಆ ಮಹಿಳೆಯ ಹಳೆಯ ಜೀವನ, ಸಂಪರ್ಕಗಳು ಮತ್ತು ಹಣಕಾಸು ಚಟುವಟಿಕೆಗಳ ಬಗ್ಗೆ ಹೊಸ ಅಂಶಗಳು ಬಹಿರಂಗಗೊಂಡಿದ್ದು, ಪ್ರಕರಣಕ್ಕೆ ಟ್ವಿಸ್ಟ್ ನೀಡಿದೆ.
ಇತ್ತೀಚಿನ ತನಿಖೆಯಲ್ಲಿ ಆ ಮಹಿಳೆ ಜ್ಯೋತಿಷಿ ಕಮಲಾಕರ್ ಭಟ್ ಅವರಿಗೆ ಪರಿಚಯವಾಗುವ ಮುನ್ನವೇ ಕಲಬುರಗಿ ಮೂಲದ ಭೂಸ್ವಾಮಿ ಶರಣಬಸಪ್ಪ ಅವರೊಂದಿಗೆ ಸುಮಾರು ಮೂರು ವರ್ಷಗಳ ಕಾಲ ಆಪ್ತ ಸಂಬಂಧ ಹೊಂದಿದ್ದರು ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ವಿಚಾರವನ್ನು ಪೊಲೀಸರು ಹಾಗೂ ತನಿಖಾಧಿಕಾರಿಗಳು ಪ್ರಕರಣದ ಹಿನ್ನೆಲೆ ತಿಳಿದುಕೊಳ್ಳುವ ಸಲುವಾಗಿ ಪರಿಶೀಲನೆಗೆ ತೆಗೆದುಕೊಂಡಿದ್ದಾರೆ.

ಭೂಸ್ವಾಮಿಯ ಹಣದಲ್ಲಿ ಆರ್ಕೆಸ್ಟ್ರಾ
ಮೂಲಗಳ ಪ್ರಕಾರ, ಶರಣಬಸಪ್ಪ ನೀಡಿದ ಹಣದ ಸಹಾಯದಿಂದ ಆ ಮಹಿಳೆ 'ಅಪ್ಪು ಮೆಲೋಡೀಸ್ ಗುಲ್ಬರ್ಗಾ' ಎಂಬ ಆರ್ಕೆಸ್ಟ್ರಾ ತಂಡವನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧಕ್ಕೆ ಸಂಬಂಧಿಸಿದಂತೆ ಇಬ್ಬರ ಕೆಲವು ಖಾಸಗಿ ಫೋಟೋಗಳು ಸಹ ಹೊರಬಿದ್ದಿದ್ದು, ಪ್ರಕರಣದ ಕುರಿತು ಸಾರ್ವಜನಿಕ ಕುತೂಹಲ ಮತ್ತಷ್ಟು ಹೆಚ್ಚಾಗಿದೆ. ವರದಿಗಳ ಪ್ರಕಾರ, ಆ ಮಹಿಳೆ ತನ್ನ ಪತಿಯನ್ನು ಬಿಟ್ಟು ಕಲಬುರಿಗೆ ತೆರಳಿ ಅಲ್ಲೇ ವಾಸವಿದ್ದರು. ಆ ಸಮಯದಲ್ಲಿ ಶರಣಬಸಪ್ಪ ಅವರೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವುದೂ ತನಿಖೆಯ ವೇಳೆ ಗಮನಕ್ಕೆ ಬಂದಿದೆ. ಪತಿ ಮನೆಯಲ್ಲಿಲ್ಲದ ವೇಳೆ ಶರಣಬಸಪ್ಪ ಅವರನ್ನು ಮನೆಗೆ ಆಹ್ವಾನಿಸುತ್ತಿದ್ದರು ಎಂಬ ಆರೋಪವೂ ಕೇಳಿಬರುತ್ತಿದೆ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಕಾರು ಬೈಕ್ ಉಡುಗೊರೆ
ಮತ್ತೊಂದೆಡೆ ಶರಣಬಸಪ್ಪ ಅವರಿಂದ ಬಂದ ಹಣವನ್ನು ಬಳಸಿಕೊಂಡು ಮಹಿಳೆಯು ಸಿದ್ದಾಪುರ ಪ್ರದೇಶದಲ್ಲಿ ಖಾಸಗಿ ಸಾಲ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಈ ಅಂಶವೂ ಈಗ ತನಿಖಾಧಿಕಾರಿಗಳ ಪರಿಶೀಲನೆಯಲ್ಲಿದೆ. ಮಹಿಳೆಯು ಶರಣಬಸಪ್ಪ ಜೊತೆಗಿನ ಸಂಬಂಧದ ಬಗ್ಗೆ ಜ್ಯೋತಿಷಿ ಕಮಲಾಕರ್ ಭಟ್ಗೆ ಮಾಹಿತಿ ತಿಳಿದ ನಂತರ, ಇಬ್ಬರ ನಡುವೆ ತೀವ್ರ ಸಂಘರ್ಷ ಆರಂಭವಾಯಿತು ಎಂದು ಮೂಲಗಳು ಹೇಳುತ್ತಿವೆ. ಈ ಬೆಳವಣಿಗೆಯ ನಂತರ ಮಹಿಳೆ ಕಲಬುರಗಿ ವ್ಯಕ್ತಿಯ ಸಂಪರ್ಕ ಕಡಿದುಕೊಂಡು, ಸಂಪೂರ್ಣವಾಗಿ ಕಮಲಾಕರ್ ಭಟ್ ಜೊತೆಗೆ ಇದ್ದರು ಎನ್ನಲಾಗಿದೆ. ಕಮಲಾಕರ್ ಭಟ್ ಅವರು ಆ ಮಹಿಳೆಗೆ ಕಾರು ಮತ್ತು ಬೈಕ್ ಉಡುಗೊರೆಯಾಗಿ ನೀಡಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ.
ಆ ಮಹಿಳೆಯ ಪತಿ ಮಹೇಶ್ ನಾಯಕ್ ಕಳೆದ ಆರು ತಿಂಗಳಿಂದಲೇ ಅವರಿಂದ ದೂರವಿದ್ದು, ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದರೆಂದು ಹೇಳಲಾಗಿದೆ. ಪತ್ನಿಯ ಮೇಲೆ ಕೇಳಿಬಂದಿರುವ ಆರೋಪಗಳೇ ಇದಕ್ಕೆ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನು ವಸಂತ ನಾಯಕ್ ಹತ್ಯೆ ಪ್ರಕರಣದಲ್ಲಿ ಮಹಿಳೆ ಮತ್ತು ಜ್ಯೋತಿಷಿ ಕಮಲಾಕರ್ ಭಟ್ ಪ್ರಮುಖ ಆರೋಪಿಗಳಾಗಿದ್ದು, ಮಹಿಳೆಯ ಹಿನ್ನೆಲೆ, ಹಣಕಾಸು ವ್ಯವಹಾರಗಳು ಮತ್ತು ವೈಯಕ್ತಿಕ ಬದುಕು ಈ ಕೊಲೆ ಪ್ರಕರಣದೊಂದಿಗೆ ನಂಟು ಹೊಂದಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಆಘಾತಕಾರಿ ಸಂಗತಿಗಳು ಬಹಿರಂಗವಾಗುವ ಸಾಧ್ಯತೆ ಇದೆ ಎಂಬುದಾಗಿ ಪೊಲೀಸರು ಸುಳಿವು ನೀಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications