ಕನಕದಾಸ ಜಯಂತಿ, ಗುರುವಾರ ಬ್ಯಾಂಕ್ ರಜಾ ಇಲ್ಲ!
ಬೆಂಗಳೂರು, ನವೆಂಬರ್ 16 : ಕರ್ನಾಟಕದ ಜನತೆಗೆ ಹಣಕಾಸಿನ ತೀವ್ರ ಅಗತ್ಯವಿರುವ ಕಾರಣ, ಕನಕದಾಸ ಜಯಂತಿ ಪ್ರಯುಕ್ತ ಗುರುವಾರ ಘೋಷಿಸಲಾಗಿದ್ದ ರಜಾವನ್ನು ಕರ್ನಾಟಕ ರದ್ದುಪಡಿಸಿದೆ. ಹೀಗಾಗಿ, ಎಲ್ಲ ಬ್ಯಾಂಕ್ ಗಳು ಎಂದಿನಂತೆ ಕೆಲಸ ನಿರ್ವಹಿಸಲಿವೆ.
ಹಿಂದಿನ ಸುದ್ದಿ : ನಾಳೆ (ನವೆಂಬರ್ 17, ಗುರುವಾರ) ಅಪ್ಪಿತಪ್ಪಿಯಾದರೂ ಬ್ಯಾಂಕ್ ಗಳ ಕಡೇ ಹೋಗ್ಬಿಟ್ಟೀರಿ. ಯಾಕೆಂದರೆ ಕನಕ ದಾಸ ಜಯಂತಿ ಇರುವುದರಿಂದ ಬ್ಯಾಂಕ್ ಗಳಿಗೆ ರಜಾ ಇದೆ. ಆದ್ದರಿಂದ ಯಾವುದೇ ನೋಟು ಬದಲಾವಣೆ ಸಾಧ್ಯವಿಲ್ಲ ಅನ್ನೋದು ಗಮನದಲ್ಲಿ ಇರಲಿ.
ಕಳೆದ ಒಂಬತ್ತು ದಿನಗಳಿಂದ ಸರಕಾರಿ ರಜಾ ಹಾಗೂ ವಾರಾಂತ್ಯದ ದಿನಗಳಲ್ಲೂ ಭಯಂಕರ ಒತ್ತಡದ ಮಧ್ಯೆ ಕೆಲಸ ಮಾಡಿದ ನೌಕರರಿಗೆ ಒಂದಿಷ್ಟು ನೆಮ್ಮದಿ ಸಿಕ್ಕಂತಾಗಿದೆ. ಈ ರಜಾ ಕರ್ನಾಟಕಕ್ಕೆ ಮಾತ್ರ ಅನ್ವಯಿಸುತ್ತದೆ. ಈ ಬಗ್ಗೆ ಒನ್ ಇಂಡಿಯಾ ಜತೆಗೆ ಮಾತನಾಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಿರ್ವಾಹಕಿ ಹೇಮವಲ್ಲಿ ಆವರು, ಸಂಜೆ 4.30ರವರೆಗೆ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಆದರೆ ರಜಾ ನೀಡುವ ಸಾಧ್ಯತೆ ಇದೆ ಎಂದರು.[ದುಡ್ಡು ಸಿಗ್ತಿಲ್ಲ, ಯಾರಿಗೆ ಹೇಳೋಣ ನಮ್ಮ ಪ್ರಾಬ್ಲಮ್ಮು?]

ಈ ಬಗ್ಗೆ ಮತ್ತೊಂದು ಬ್ಯಾಂಕ್ ನ ನಿರ್ವಾಹಕರು ಮಾತನಾಡಿ, ಸತತವಾಗಿ ಕೆಲಸ ಮಾಡಿ ಬ್ಯಾಂಕ್ ನೌಕರರು ದಣಿದಿದ್ದಾರೆ. ಜತೆಗೆ 50, 100 ರುಪಾಯಿ ನೋಟು ಅಗತ್ಯದಷ್ಟು ಲಭ್ಯವಿಲ್ಲ. ಆದ್ದರಿಂದ ರಜಾ ನೀಡುತ್ತಾರೆ. ಜತೆಗೆ ಕಾರ್ಮಿಕ ಕಾನೂನಿನ ಪ್ರಕಾರ ರಜಾ ನೀಡದೆ ಸತವಾಗಿ ಇಂತಿಷ್ಟು ದಿನ ಕೆಲಸ ಮಾಡಿಸುವಂತಿಲ್ಲ ಎಂಬ ನಿಯಮವಿದೆ ಎಂದರು.[ಹಣ ವಿನಿಮಯಕ್ಕೆ ಗುರುತಿನ ಚೀಟಿ ತೋರಿಸಿದರೆ ಸಾಕು]
ಆದರೆ, ಗುರುವಾರ ಆರ್ ಬಿಐ ಕೆಲಸ ನಿರ್ವಹಿಸುವುದರಿಂದ ಇತರ ಬ್ಯಾಂಕ್ ಗಳ ನೌಕರರು ಆರ್ ಬಿಐಗೆ ಸಂಬಂಧಿಸಿದ ವ್ಯವಹಾರಗಳನ್ನು ಪೂರ್ಣಗೊಳಿಸುವುದಕ್ಕೆ ಕೆಲಸ ಮಾಡಬೇಕಾಗುತ್ತದೆ ಎಂದು ಕೂಡ ಅವರು ಹೇಳಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications