'ಕನಕಪುರಕ್ಕೆ ಮಾರಿ, ಸ್ಟಾಲಿನ್ ನಾಡಿಗೆ ಉಪಕಾರಿ' ಈ ಡಿಕೆಶಿ, ಸ್ವಕ್ಷೇತ್ರಕ್ಕೆ ಕೊಡುಗೆ ಶೂನ್ಯ
ಬೆಂಗಳೂರು, ನವೆಂಬರ್ 20: ಕನಕಪುರದಲ್ಲಿ ಸುಮಾರು ಮೂರು ದಶಕಗಳ ಕಾಲ ದಬ್ಬಾಳಿಕೆ ನಡೆಸಿ ಜಗೀರನ್ನಾಗಿಸಿಕೊಂಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರಕ್ಕೆ ನೀಡಿದ ಕೊಡುಗೆ ಶೂನ್ಯ ಎಂದು ಕರ್ನಾಟಕ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ಬರಗಾಲದ ಸಂದರ್ಭದಲ್ಲೂ ಪ್ರಾಧಿಕಾರಗಳ ನಿರ್ದೇಶನ ಮೇರೆಗೆ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಇತ್ತ ಉಪಮುಖ್ಯಮಂತ್ರಿ ಪ್ರತಿನಿಧಿಸುವ ಕನಕಪುರ ಕ್ಷೇತ್ರದಲ್ಲಿಯೇ ನೀರಿಗೆ ಹಾಹಾಕಾರ ಎದ್ದಿದೆ. ಈ ಕುರಿತು ರಾಜ್ಯ ಬಿಜೆಪಿಯು ಟ್ವೀಟ್ ಮಾಡಿ ಖಾರವಾಗಿ ಪ್ರತಿಕ್ರಿಯಿಸಿದೆ.

ಸರ್ಕಾರದ ಪ್ರಮುಖ ಉಪಕ್ರಮಗಳಲ್ಲಿ ಒಂದಾಗಿರುವ 'ಬ್ರ್ಯಾಂಡ್ ಬೆಂಗಳೂರು' ಹೆಸರಿನಲ್ಲಿ ಪಿಕ್ನಿಕ್ ಮಾಡುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು 'ಕನಕಪುರಕ್ಕೆ ಮಾರಿ, ಸ್ಟಾಲಿನ್ ನಾಡಿಗೆ ಉಪಕಾರಿ' ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ಜರಿದಿದೆ.
ಕನಕಪುರಕ್ಕೆ ಡಿಕೆಶಿ ಕೊಡುಗೆ ಶೂನ್ಯ:ಬಿಜೆಪಿ
ಕಾವೇರಿ ನದಿ ನೀರನ್ನು ಬೇಕಾಬಿಟ್ಟಿಯಾಗಿ ನೆರೆ ರಾಜ್ಯಕ್ಕೆ ಹರಿಬಿಟ್ಟ ಕಾರಣ, ಡಿ.ಕೆ. ಶಿವಕುಮಾರ್ ತವರು ಕನಕಪುರದಲ್ಲಿಯೇ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಅಲ್ಲಿಯ ಜನರು ಸಾಕಷ್ಟು ಸಮಸ್ಯೆಗಳು ಎದುರಿಸುತ್ತಿದ್ದಾರೆ. ಕಳೆದ 30 ವರ್ಷ ದಬ್ಬಾಳಿಕೆ ನಡೆಸಿ ಕನಕಪುರವನ್ನು ಜಹಗೀರಾಗಿ ನಿರ್ಮಿಸಿಕೊಂಡಿರುವ ಡಿಕೆ ಶಿವಕುಮಾರ್ ಅವರು ಕನಕಪುರಕ್ಕೆ ನೀಡಿರುವ ಕೊಡುಗೆ ಶೂನ್ಯ ಎಂದು ಆರೋಪಿಸಿದೆ.
ಡಿಕೆ ಶಿವಕುಮಾರ್ ಅವರೇ, ಇನ್ನಾದರೂ ಮತ ನೀಡಿದ ಜನತೆಗೆ ಸ್ವಲ್ಪವಾದರೂ ಸೇವೆ ಸಲ್ಲಿಸಿ, ಅವರ ಕಷ್ಟಗಳಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಿ ಎಂದು ಬಿಜೆಪಿ ಸಲಹೆ ನೀಡುವ ಮೂಲಕ ಎಚ್ಚರಿಸಿದೆ.

ಕಾವೇರಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸೂಕ್ತ ವಾದ ಮಂಡಿಸುವಲ್ಲಿ ವಿಫಲವಾಗಿದೆ ಎಂದು ವಿಪಕ್ಷಗಳು ಸೇರಿದಂತೆ ಕನ್ನಡಪರ ಸಂಘಟನೆಗಳು ದೂರಿವೆ. ಸಾಲದೆಂಬಂತೆ ಪದೇ ಪದೆ ತಮಿಳುನಾಡಿಗೆ ನೀರು ಬಿಡುವಂತೆ ಸೂಚನೆ ಸಿಕ್ಕಿದೆ. ಅದರನ್ವಯ ಸರ್ಕಾರ ಕಾವೇರಿ ನೀರನ್ನು ಹರಿಸುತ್ತಿದೆ.
ಕನಕಪುರದಲ್ಲಿಯೇ ನೀರಿಗೆ ಹಾಹಾಕಾರ
ಇದರ ಪರಿಣಾಮವೆಂಬಂತೆ ಉಪಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲಿ ನೀರಿನ ಹಾಹಾಕಾರ ಎದ್ದಿದೆ. ತಾಲೂಕಿನ ಕಸಬಾ ಕಲ್ಲಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಮಸಂದ್ರ ಸರ್ಕಲ್ ವ್ಯಾಪ್ತಿಯಲ್ಲಿ ನೀರು ಪೂರೈಕೆಯ ಮೋಟಾರು ಕಟ್ಟಿತ್ತು. ಜನರ ಕುಡಿಯಲು ನೀರಿಲ್ಲದೇ ಪರದಾಡಿದರು. ಇದು ತಾಲೂಕು ಪಂಚಾಯಿತಿಯ ಆಡಳಿತ ಹೇಗಿದೆ ಎಂಬುದನ್ನು ತೋರಿಸುತ್ತದೆ.
ಇನ್ನೂ ಕಳೆದೊಂದು ದಶಕದಿಂದ ಗ್ರಾಮದ ಒಳಚರಂಡಿ ಶುದ್ಧೀಕರಿಸದ ಕಾರಣ ಸೊಳ್ಳೆ, ನೋಣಗಳ ಆವಾಸಸ್ಥಾನವಾಗುವಂತೆ ಮಾಡಲಾಗಿದೆ. ಇದು ಜನರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಭೀರುವಂತೆ ಮಾಡಿದೆ. ಈ ನಿರ್ಲಕ್ಷ್ಯಕ್ಷಜನ ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಗ್ರಾಮ ಮೂವರು ಪಂಚಾಯಿತಿಗೆ ಆಯ್ಕೆ ಆದರೂ ಮೂಲ ಸಮಸ್ಯೆಗಳು ಮಾತ್ರ ಮುಂದುವರಿದಿವೆ. ಸಾಲದೆಂಬಂತೆ ಇದೀಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈ ಕಾರಣ ಇಟ್ಟುಕೊಂಡ ಬಿಜೆಪಿ ಉಪಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದೆ.
-
ಡಿಕೆಶಿ ನನ್ನದು ಹಾಲು-ಜೇನಿನಂತಹ ಸಂಬಂಧ, ಹುಳಿ ಹಿಂಡಲು ಬರಬೇಡಿ: ಅಶೋಕ್-ಕುಮಾರಸ್ವಾಮಿಗೆ ಸಿದ್ದರಾಮಯ್ಯ ಟಾಂಗ್ -
Karnataka Budget: ಡಿಕೆ ಶಿವಕುಮಾರ್ ಮೇಲೆ ನಿಗಾ ಇಡಲು ಸಿದ್ದರಾಮಯ್ಯರಿಂದ ತಂಡ ರಚನೆ: ಆರ್.ಅಶೋಕ್ -
ರಶ್ಮಿಕಾ ಮೊದಲ ಸಿನಿಮಾದಲ್ಲಿ ನಾನು ಹೀರೋ, ನೀನು ಬಾಲಿವುಡ್ಗೆ ಪಕ್ಕಾ ಹೋಗ್ತೀಯ ಎಂದಿದ್ದೆ: ನಟ ತ್ರಿವಿಕ್ರಮ್ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Horoscope March 2: ಈ ರಾಶಿಯವರಿಗೆ ಸಕಾರಾತ್ಮಕ ಪ್ರಗತಿ, ಮೇಷ-ಮೀನ ರಾಶಿಯವರೆಗೆ ಇಂದಿನ ದಿನ ಭವಿಷ್ಯ -
ಮಧ್ಯಪ್ರಾಚ್ಯದಲ್ಲಿ ವಿಮಾನಗಳ ಸಂಚಾರ ವ್ಯತ್ಯಯ: ಕರ್ನಾಟಕದ ನಾಗರಿಕರಿಗೆ ಸರ್ಕಾರ ನೆರವು -
Gold Rate : ಆಭರಣ ಪ್ರಿಯರಿಗೆ ಬಿಗ್ ಶಾಕ್; ಭಾರಿ ಏರಿಕೆ ಕಂಡ ಚಿನ್ನ- ಬೆಳ್ಳಿ ದರ, ಇಲ್ಲಿದೆ ಇಂದಿನ ಬೆಲೆ ಪಟ್ಟಿ -
Iran Vs America, Israel ಯುದ್ಧ ತೀವ್ರ: ಗಲ್ಫ್ ರಾಷ್ಟ್ರಗಳಿಗೂ ವ್ಯಾಪಿಸಿದ ಸಂಕಷ್ಟ; ಈ ಕ್ಷಣದ 10 ಪ್ರಮುಖ ಬೆಳವಣಿಗೆಗಳು












Click it and Unblock the Notifications