Kidnap Case: ವಿದ್ಯಾರ್ಥಿನಿ ಕಿಡ್ನ್ಯಾಪ್: ಈ ಟ್ಯೂಷನ್ ಟೀಚರ್ ಹುಡುಕಿಕೊಟ್ಟವರಿಗೆ 25,000 ಬಹುಮಾನ
ಬೆಂಗಳೂರು ಜನವರಿ 3: ಬಿಗ್ಬಾಸ್ ಕನ್ನಡ ಸೀಸನ್ 11ರ ಮನೆಯಲ್ಲಿ ಚೆನ್ನಾಗಿ ಆಟ ಆಡುತ್ತಾ ವೀಕ್ಷಕರನ್ನು ರಂಜಿಸುತ್ತಿರುವ ಮೋಕ್ಷಿತಾ ಪೈ ಮೇಲೆ ಮಕ್ಕಳ ಕಳ್ಳಿ ಎನ್ನುವ ಆರೋಪ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಧಾರವಾಹಿಯಲ್ಲಿ ನಟಿಸುವ ಮೊದಲು ಮೋಕ್ಷಿತಾ ಟ್ಯೂಷನ್ ಟೀಚರ್ ಆಗಿ ಕೆಲಸ ಮಾಡುತ್ತಾ ತನ್ನ ಬಳಿ ಟ್ಯೂಷನ್ಗೆ ಬರುತ್ತಿದ್ದ ವಿದ್ಯಾರ್ಥಿಯನ್ನು ಹಣದ ಆಸೆಗೆ ಅಪಹರಿಸಿದ್ದರು ಎನ್ನುವ ಆರೋಪ ಅವರ ಮೇಲೆ ಇತ್ತು. ಆದರೆ ಆ ಪ್ರಕರಣ ಕೋರ್ಟ್ನಲ್ಲಿ ಖುಲಾಸೆ ಆಗಿದೆ. ಇದೀಗ ಅಂಥಹದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಆದರಿದು ಹಣದಾಸೆಗೆ ಆದ ಕಿಡ್ನ್ಯಾಪ್ ಅಲ್ಲ ಬದಲಿಗೆ ಪ್ರೀತಿಪ್ರೇಮದ ವಿಚಾರದಲ್ಲಿ ಆದ ಕಿಡ್ನ್ಯಾಪ್ ಆಗಿದೆ.
ಹೌದು... ಕನಕಪುರ ಮೂಲದ ಟ್ಯೂಷನ್ ಟೀಚರ್ ಅಭಿಷೇಕ್ ಎಂಬಾತ ತನ್ನ ಬಳಿ ಟ್ಯೂಷನ್ಗೆ ಬರುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿದ ಆರೋಪ ಕೇಳಿ ಬಂದಿದೆ. ಕನಕಪುರ ಮೂಲದ ಬಾಲಕಿ ತಂದೆ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಕಿಡ್ನ್ಯಾಪ್ ಕೇಸ್ ದಾಖಲಿಸಿದ್ದಾರೆ.

ಇದರಿಂದ ಜೆ.ಪಿ.ನಗರ ಪೊಲೀಸ್ ಠಾಣೆಯ ಪೊಲೀಸರು ಆರೋಪಿ ಫೋಟೋವನ್ನು ಹಂಚಿಕೊಂಡು ಹುಡುಕಿ ಕೊಟ್ಟವರಿಗೆ 25,000 ರೂ. ಬಹುಮಾನ ನೀಡುವುದಾಗಿ ಪೊಲೀಸ್ ಪ್ರಕಟಣೆಯೊಂದನ್ನು ನೀಡಿದ್ದಾರೆ. ಪ್ರಕರಣೆಯಲ್ಲಿ 23-11-2024ರಂದು ಜೆ.ಪಿ.ನಗರ 1ನೇ ಹಂತ ಆಂಜನೇಯ ದೇವಸ್ಥಾನ ಹತ್ತಿರದಿಂದ ಟ್ಯೂಷನ್ಗೆ ಹೋಗುತ್ತಿದ್ದ ಹುಡುಗಿ (15)ಯನ್ನು ಟ್ಯೂಷನ್ ಟೀಚರ್ ಅಭಿಷೇಕ್ (30) ಅಪಹರಣ ಮಾಡಿಕೊಂಡು ಹೋಗಿದ್ದಾನೆ. ಕಾಣೆಯಾದ ಬಾಲಕಿ ಇಲ್ಲಿವರೆಗೂ ಪತ್ತೆಯಾಗಿಲ್ಲ. ಈತನ ಬಗ್ಗೆ ಸುಳಿವು ಸಿಕ್ಕರೆ ಪೊಲೀಸ್ ಠಾಣೆಗೆ ತಿಳಿಸಲು ಕೋರಲಾಗಿದೆ.
ಆರೋಪಿಯ ಪೂರ್ಣ ಹೆಸರು ಅಭಿಷೇಕ್ ಗೌಡ ಎಂ. ಈತ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ಹಾರೋ ಹಳ್ಳಿ, ದೊಡ್ಡ ಸಾದೇನಹಳ್ಳಿಯವನು. ಈತ ಬೆಂಗಳೂರಿನಲ್ಲಿ ಜಿಮ್ ಟ್ರೈನರ್ ಆಗಿದ್ದು 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಹೇಳಿಕೊಡುತ್ತಾನೆ.
ಕಳೆದ ನವೆಂಬರ್ ತಿಂಗಳಿನಲ್ಲಿ ಎಂದಿನಂತೆ ಆರೋಪಿ ಬಳಿ ವಿದ್ಯಾರ್ಥಿನಿ ಟ್ಯೂಷನ್ಗೆ ಬಂದಿದ್ದಳು. ಆದರೆ ಟ್ಯೂಷನ್ ಮುಗಿದು ರಾತ್ರಿಯಾದರೂ ವಿದ್ಯಾರ್ಥಿನಿ ಮನೆಗೆ ವಾಪಾಸ್ ಆಗಿರಲಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ಎಲ್ಲಾ ಕಡೆ ಹುಡುಕಾಡಿದ್ದಾರೆ. ತಡ ರಾತ್ರಿಯವರೆಗೂ ಮಗಳು ಮನೆಗೆ ಬಾರದೇ ಇದ್ದಾಗ ಪೋಷಕರು ಪೋಲಿಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಬಳಿಕ ಪೋಷಕರಿಗೆ ಟ್ಯೂಷನ್ ಟೀಚರ್ ಬಾಲಕಿಯನ್ನು ಅಪಹರಣ ಮಾಡಿರುವುದು ಗೊತ್ತಾಗಿದೆ.
ಕಳೆದ ಒಂದು ತಿಂಗಳಿನಿಂದ ಬಾಲಕಿಯನ್ನು ಪ್ರೀತಿ ಪ್ರೇಮದ ಹೆಸರಿನಲ್ಲಿ ಕರೆದೊಯ್ದ ಟ್ಯೂಷನ್ ಟೀಚರ್ ಯಾವುದೇ ಸುಳಿವು ಸಿಗದೆ ತಲೆಮರಿಸಿಕೊಂಡಿದ್ದಾನೆ. ಫೋನ್ ಕೂಡ ಬಳಕೆ ಮಾಡುತ್ತಿಲ್ಲ. ಫೋನ್ ಪೇ, ಗೂಗಲ್ ಪೇ, ಎಟಿಎಂ ಸೇರಿ ಆನ್ಲೈನ್ ಪೇಮೆಂಟ್ ಕೂಡ ಆರೋಪಿ ಮಾಡುತ್ತಿಲ್ಲ.
ಬೆಂಗಳೂರು ಜೆಪಿ ನಗರ ಪೊಲೀಸರು ಎಲ್ಲಾ ಕಡೆ ಹುಡುಕಾಡಿದರೂ ಕೂಡ ಆರೋಪಿ ಪತ್ತೆ ಆಗಿಲ್ಲ. ಹೀಗಾಗಿ ಮಗಳನ್ನು ಕಾಣದೆ ಪೋಷಕರು ಕಂಗಾಲಾಗಿದ್ದಾರೆ. ಪೊಲೀಸರಿಗೆ ಮಗಳನ್ನು ಹುಡುಕಿ ಕೊಡುವಂತೆ ಅಂಗಲಾಚಿದ್ದಾರೆ. ಕೊನೆಗೆ ಪೊಲೀಸರು ಆರೋಪಿಯನ್ನು ಹುಡುಕಿ ಕೊಟ್ಟವರಿಗೆ 25,000 ಬಹುಮಾನ ನೀಡುವುದಾಗಿ ಘೋಷಣೆ ಮಾಡಿ ಪೊಲೀಸ್ ಪ್ರಕಟಣೆಯನ್ನು ಹೊರಡಿಸಿದ್ದಾರೆ.
-
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications