ಕನ್ನಡಿಗರಿಗೆ ಕರ್ನಾಟಕದಲ್ಲೇ ಮತ್ತೊಂದು ದೊಡ್ಡ ಅನ್ಯಾಯ, ಹೋರಾಟಕ್ಕೆ ಸಜ್ಜಾದ ಕರವೇ
ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ಟಿ.ಎ.ನಾರಾಯಣಗೌಡರು ಸಂಕ್ರಾಂತಿ ಹಬ್ಬದ ಎಲ್ಲರಿಗೂ ಶುಭಕೋರಿದ್ದಾರೆ. ಇದೇ ದಿನ ಅವರು ಕನ್ನಡಿಗರಿಗೆ ಕರ್ನಾಟಕದಲ್ಲೇ ಆಗುತ್ತಿರುವ ಅನ್ಯಾಯದ ವಿರುದ್ಧ ದೊಡ್ಡ ಚಳವಳಿಗೆ ಕರೆ ನೀಡಿದ್ದಾರೆ. ಮೂರು ಪ್ರಮುಖ ಬೇಡಿಕೆಗಳನ್ನಿಟ್ಟುಕೊಂಡು ಚಳವಳಿ ನಡೆಸಲು ನಾರಾಯಣಗೌಡರು ಮುಂದಾಗಿದ್ದಾರೆ.
ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು. ಎಲ್ಲರ ಬದುಕು ಎಳ್ಳು, ಬೆಲ್ಲದ ಸಿಹಿಯಲ್ಲಿ ಅರಳಿಕೊಳ್ಳಲಿ ಎಂದು ಹಾರೈಸುತ್ತೇನೆ. ಕನ್ನಡಿಗರೂ ಒಂದು ಸಂಕ್ರಮಣದ ಕಾಲಘಟ್ಟದಲ್ಲಿ ಹಾದುಹೋಗುತ್ತಿದ್ದೇವೆ. ಈ ಸಂದರ್ಭದಲ್ಲಿ ನಾವು ಎಚ್ಚೆತ್ತುಕೊಂಡು ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿದೆ ಎಂದು ನಾರಾಯಣಗೌಡರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ, ಮಕರ ಸಂಕ್ರಾಂತಿಯ ಈ ಸಂದರ್ಭದಲ್ಲಿ ರಕ್ಷಣಾ ವೇದಿಕೆಯ ನನ್ನೆಲ್ಲ ಕಾರ್ಯಕರ್ತರಿಗೆ ದೊಡ್ಡ ಸವಾಲೊಂದನ್ನು ನೀಡುತ್ತಿದ್ದೇನೆ. ಮುಂದಿನ ಸಂಕ್ರಾಂತಿಯೊಳಗೆ ಮೂರು ಮುಖ್ಯ ವಿಷಯಗಳು ನಿಮ್ಮ ಚಳವಳಿಯ ವಿಷಯವಾಗಬೇಕು. ಈ ಮೂರು ಹಕ್ಕೊತ್ತಾಯಗಳು ಈಡೇರುವವರೆಗೆ ನೀವು ವಿರಮಿಸಬಾರದು. ಈ ಚಳವಳಿಯಿಂದ ಏನೇ ಸಮಸ್ಯೆ ಬಂದರೂ ಧೃತಿಗೆಡದೆ, ಕನ್ನಡಿಗರ ಬಹುಕಾಲದ ಬೇಡಿಕೆಗಳು ಈಡೇರುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ಮೊದಲನೆಯದು ಕರ್ನಾಟಕದಲ್ಲಿ ಮಾರಾಟವಾಗುವ ಅಥವಾ ಬಳಕೆಯಾಗುವ ಎಲ್ಲ ಬಗೆಯ ಉತ್ಪನ್ನಗಳ ಏಜೆನ್ಸಿಗಳು ಪರಭಾಷಿಕರ ಪಾಲಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಸಾರಾಸಗಟಾಗಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಮತ್ತು ಅಪಮಾನ ಎಂದು ದೂರಿದ್ದಾರೆ. ಹೀಗಾಗಿ ಎಲ್ಲ ಉತ್ಪನ್ನಗಳ ಏಜೆನ್ಸಿಗಳು ಕನ್ನಡಿಗರಿಗೇ ಸಿಗಬೇಕು. ಅಥವಾ ಈ ಏಜೆನ್ಸಿಗಳಲ್ಲಿ ಕನ್ನಡಿಗರು ಪಾಲುದಾರರಾಗಿರಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ ಮಾರಾಟವಾಗುವ, ಬಳಕೆಯಾಗುವ ಎಲ್ಲ ಬಗೆಯ ಉತ್ಪನ್ನಗಳ ಮೇಲೆ ಶೇ 60ರಷ್ಟು ಬರಹಗಳು ಕನ್ನಡದಲ್ಲಿಯೇ ಇರಬೇಕು. ತಾವು ಬಳಕೆ ಮಾಡುವ ವಸ್ತುಗಳ ಹೆಸರೇನು? ಪ್ರಮಾಣವೇನು? ಅವುಗಳ ತಯಾರಿಕೆಗೆ ಏನನ್ನು ಬಳಸಲಾಗಿದೆ ಎಂಬ ವಿಷಯಗಳು ಕನ್ನಡಿಗರಿಗೆ ಕಡ್ಡಾಯವಾಗಿ ಗೊತ್ತಾಗಬೇಕು ಎಂದಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ ಎಲ್ಲ ಬಗೆಯ ರಾಷ್ಟ್ರೀಯ, ಖಾಸಗಿ, ಗ್ರಾಮೀಣ, ಸಹಕಾರಿ ಬ್ಯಾಂಕ್ಗಳು, ಫೈನಾನ್ಸ್ಗಳು, ಚಿನ್ನದ ಅಡಮಾನ ಸಂಸ್ಥೆಗಳು, ಜೀವವಿಮಾ ಸಂಸ್ಥೆಗಳು, ಆರೋಗ್ಯ ವಿಮಾ ಸಂಸ್ಥೆಗಳು ಮತ್ತು ಇತರ ಯಾವುದೇ ಸ್ವರೂಪದ ಹಣಕಾಸು ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ 100ರಷ್ಟು ಹುದ್ದೆಗಳು ಮತ್ತು ಇತರೆ ಹುದ್ದೆಗಳಲ್ಲಿ ಶೇ. 60ರಷ್ಟು ಹುದ್ದೆಗಳು ಕನ್ನಡಿಗರಿಗೆ ನೀಡಬೇಕು. ಈ ಎಲ್ಲ ಸಂಸ್ಥೆಗಳು ಬಳಸುವ, ಗ್ರಾಹಕರಿಗೆ ನೀಡುವ ಎಲ್ಲ ದಾಖಲೆಗಳು ಕಡ್ಡಾಯವಾಗಿ ಕನ್ನಡದಲ್ಲಿರಬೇಕು ಎಂದು ನಾರಾಯಣಗೌಡರು ಒತ್ತಾಯಿಸಿದ್ದಾರೆ.
ಈ ಮೂರು ಹಕ್ಕೊತ್ತಾಯಗಳು ಈಡೇರಲು ಗ್ರಾಮಮಟ್ಟದಿಂದ, ರಾಜಧಾನಿಯವರೆಗೆ ದೊಡ್ಡ ಮಟ್ಟದ ಚಳವಳಿ ಹಮ್ಮಿಕೊಳ್ಳಲು ನನ್ನ ಕಾರ್ಯಕರ್ತರಿಗೆ ಕರೆ ನೀಡುತ್ತೇನೆ. ಕನ್ನಡದ ಸಮಸ್ತ ಜನತೆ ಈ ಚಳವಳಿಯನ್ನು ಬೆಂಬಲಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ. 2023ರ ಡಿಸೆಂಬರ್ 27ರಂದು ಕರವೇ ಸಂಘಟಿಸಿದ ಐತಿಹಾಸಿಕ ನಾಮಫಲಕ ಚಳವಳಿಯನ್ನು ಯಶಸ್ವಿಗೊಳಿಸಿದ ಹಾಗೆ ಕರವೇ ಕಟ್ಟಾಳುಗಳು ಜೀವದ ಹಂಗು ತೊರೆದು ಹೋರಾಡಿ, ಈ ಹೋರಾಟವನ್ನೂ ಯಶಸ್ವಿಗೊಳಿಸುತ್ತಾರೆ ಎಂಬ ವಿಶ್ವಾಸ ನನ್ನದು ಎಂದಿದ್ದಾರೆ.
ನಮ್ಮ ಈ ಮೂರು ಹಕ್ಕೊತ್ತಾಯಗಳ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಸೂಕ್ತ ಕಾಯ್ದೆ ರೂಪಿಸಬೇಕು, ಶಾಸನಬದ್ಧವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸೋಣ. ಮುಂದಿನ ಮಕರ ಸಂಕ್ರಾಂತಿಯೊಳಗೆ ಈ ಹಕ್ಕೊತ್ತಾಯಗಳು ಈಡೇರುವಂತೆ ನೋಡಿಕೊಳ್ಳೋಣ ಎಂದು ಕರೆ ಕೊಟ್ಟಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಏರ್ಪಡಿಸಿದ್ದ ಕರ್ನಾಟಕ ಹೆಸರು ನಾಮಕರಣದ ನೆನಪಿನ "ಹೆಸರಾಯಿತು ಕರ್ನಾಟಕ" ಸಮಾವೇಶದಲ್ಲಿ ನನ್ನ ಎಲ್ಲ ಮುಖಂಡರಿಗೆ ಕನ್ನಡಕ್ಕಾಗಿ, ಕನ್ನಡಿಗರ ಏಳಿಗೆಗಾಗಿ, ಕರ್ನಾಟಕದ ರಕ್ಷಣೆಗಾಗಿ ಎಂಥದ್ದೇ ಕಷ್ಟ ಬಂದರೂ ಎದೆಗುಂದದೆ ಎದುರಿಸುತ್ತೇವೆ ಎಂಬ ಪ್ರತಿಜ್ಞೆಯನ್ನು ಬೋಧಿಸಿದ್ದೆ. ಆ ಪ್ರತಿಜ್ಞೆಯಂತೆ ಎಲ್ಲರೂ ನಡೆಯೋಣ ಎಂದು ಹೇಳಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications