ಸಂಭಾವನೆಯಲ್ಲಿ ಒಂದು ಭಾಗ ಅನಾಥಾಶ್ರಮಗಳಿಗೆ ನೀಡುತ್ತಿದ್ದ ಪುನೀತ್!
ಬೆಂಗಳೂರು,ಅ. 29 : ವೃದ್ಧ ಜೀವಗಳನ್ನು ಕಾಪಾಡುವ ಅನಾಥಾಶ್ರಮ ರಕ್ಷಿಸುವ ರಾಜಕುಮಾರನಾಗಿ ನಟ ಪುನೀತ್ ನಟನೆಗೆ ಸೀಮಿತವಾಗಲಿಲ್ಲ. ನಿಜ ಜೀವನದಲ್ಲಿ ಪುನೀತ್ ರಾಜ್ ಕುಮಾರ್ ರಾಜಕುಮಾರನಾಗಿಯೇ ಮೆರೆದರು. ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವೃದ್ಧರ ಮತ್ತು ಅನಾಥರ ಪೋಷಣೆ ಜತೆಗೆ ಹೆಣ್ಣು ಮಕ್ಕಳಿಗೆ ಶಿಕ್ಷಣ ಧಾರೆ ಎರೆದಿದ್ದರು. ತಾನು ಸಮಾಜಕ್ಕೆ ಈ ಕೊಡುಗೆ ಕೊಟ್ಟಿದ್ದೇನೆ ಎಂದು ಎಲ್ಲೂ ಬಹಿರಂಗಪಡಿಸದೇ ಸಮಾಜ ಸೇವೆ ಮಾಡುತ್ತಿದ್ದರು!
ನಟ ಪುನೀತ್ ರಾಜ್ ಕುಮಾರ್ ಇನ್ನಿಲ್ಲ. ಆದರೆ, ಪುನೀತ್ ವೃದ್ಧರಿಗೆ ಅನಾಥಶಾಶ್ರಮಗಳಿಗೆ ಹಾಗೂ ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ದೊಡ್ಡ ಕೊಡುಗೆ ನೀಡಿದ್ದರು. ಪುನೀತ್ ರಾಜ್ ಕುಮಾರ್ ನಟನೆ ಮಾಡಿದ್ದ ರಾಜಕುಮಾರ ಸಿನಿಮಾ ಹಿಟ್ ಆಗಿತ್ತು. ಹೆತ್ತವರನ್ನು ಪ್ರೀತಿಸಬೇಕು. ವೃದ್ಧಾಶ್ರಮಗಳಗೆ ಕಳಿಸಬಾರದು ಎಂಬ ಸಂದೇಶ ಸಾರುವ ಪುನೀತ್ ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಆದರೆ, ಪುನೀತ್ ಹೀರೋಹಿಸಂ ಕೇವಲ ತೆರೆಯ ಮೇಲಿನ ನಟನೆಗೆ ಸೀಮಿತ ಮಾಡಿಕೊಂಡಿರಲಿಲ್ಲ. ಬದಲಿಗೆ ನಿಜ ಜೀವನದಲ್ಲಿಯೂ ರಾಜಕುಮಾರನಾಗಿ ಅನೇಕ ಅನಾಥ ಮಕ್ಕಳನ್ನು ಪೋಷಣೆ ಮಾಡುತ್ತಿದ್ದರು. ಅನೇಕ ವೃದ್ಧಾಶ್ರಮಗಳನ್ನು , ಗೋ ಶಾಲೆಗಳನ್ನು ಪೋಷಣೆ ಮಾಡುತ್ತಿದ್ದರು. ಎಲ್ಲಿಯೂ ನಾನು ಸಮಾಜ ಸೇವಕ ಎಂದು ಬಿಂಬಿಸಿಕೊಂಡಿರಲಿಲ್ಲ.ಈ ಮೂಲಕ ದೊಡ್ಡಮನೆಯ ದೊಡ್ಡತನ ಮೆರೆದಿದ್ದರು. ಪುನೀತ್ ಪೋಷಣೆ ಮಾಡುತ್ತಿದ್ದ ಅನಾಥಾಶ್ರಮಗಳೇ ಇದೀಗ ಅನಾಥ ಆಗಿವೆ.
ಪುನೀತ್ ರಾಜ್ ಕುಮಾರ್ ಸುಮಾರು 26 ಕ್ಕಿಂತಲೂ ಹೆಚ್ಚು ಅನಾಥಾಶ್ರಮ, 19 ಗೋಶಾಲೆ, 16 ವೃದ್ಧಾಶ್ರಮಗಳನ್ನು ಪೋಷಣೆ ಮಾಡುತ್ತಿದ್ದರು. ಮಾತ್ರವಲ್ಲದೇ ಸುಮಾರು 45 ಕ್ಕೂ ಹೆಚ್ಚು ಹೆಚ್ಚು ಶಾಲಾ ಮಕ್ಕಳನ್ನು ಓದಿಸುತ್ತಿದ್ದರು. ಮಿಗಿಲಾಗಿ ಶಕ್ತಿಧಾಮ ಮೂಲಕ ಸಾವಿರಾರು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದರು. ಪುನೀತ್ ಮಾಡಿರುವ ಸೇವೆ, ಮೆರೆರೆಯುತ್ತಿದ್ದ ಹೃದಯ ಶ್ರೀಮಂತಿಕೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ನಾಂದಿ ಹಾಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಷಯ ವೈರಲ್ ಆಗಿದೆ. ರಾಜಕುಮಾರ ಸಿನಿಮಾದಿಂದ ಪಡೆದ ಸಂಭಾವನೆಯ ಒಂದು ಭಾಗವನ್ನು ವೃದ್ಧಾಶ್ರಮಗಳಿಗೆ ವಿನಿಯೋಗಿಸಿದ್ದರು ಎನ್ನಲಾಗಿದೆ.

ಪುನೀತ್ ಮಾಡುತ್ತಿದ್ದ ಸೇವೆಯನ್ನು ಸಾರ್ವಜನಿಕವಾಗಿ ಎಲ್ಲಿಯೂ ಹೇಳಿಕೊಳ್ಳುತ್ತಿರಲಿಲ್ಲ ಎಂಬುದು ವಿಶೇಷ. ಪುನೀತ್ ಸಮಾಜದ ಬಗ್ಗೆ, ಬಡವರ ಬಗ್ಗೆ ಹೊಂದಿದ್ದ ಕಾಳಜಿ, ಮಾಡುತ್ತಿದ್ದ ಸೇವೆ ಇಂದಿಗೆ ಅಂತ್ಯವಾಗಿದೆ. ಪುನೀತ್ ಮಾಡುತ್ತಿದ್ದ ಸಮಾಜ ಸೇವೆಯನ್ನು ವಿಧಿಯಾಟ ನಿಲ್ಲಿಸಿದೆ. ಪುನೀತ್ ರಾಜ್ ಕುಮಾರ್ ನಟನೆಯ ರಾಜಕುಮಾರ ಸಿನಿಮಾ ನೋಡಿ ವೃದ್ಧರು ಕಣ್ಣೀರು ಹಾಕುತ್ತಿದ್ದರು. ಸಿನಿಮಾ ಹಿಟ್ ಬಳಿಕ ವೃದ್ಧಾಶ್ರಮಗಳನ್ನು ದತ್ತು ಪಡೆದು ಪೋಷಣೆ ಮಾಡಿದರು. ಹೃದಯಾಘಾತದಿಂದ ಪುನೀತ್ ನಿಧನ ಹೊಂದಿದ್ದು ಇದೀಗ ಪುನೀತ್ ನೆರಳಿನಲ್ಲಿ ಬದುಕುತ್ತಿದ್ದ ವೃದ್ಧರು, ಅನಾಥ ಮಕ್ಕಳು, ಬಡ ವಿದ್ಯಾರ್ಥಿಗಳು ಅನಾಥವಾಗಿದ್ದಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications