ನಟಿ ಜಯಮಾಲಾಗೆ ಒಲಿದ 'ಮಂತ್ರಿ' ಅದೃಷ್ಟ: ಬೆಲ್ಲ ಸವಿದು ಸಂಭ್ರಮ
Recommended Video

'ಗಿರಿ ಕನ್ಯೆ', 'ಶಂಕರ್ ಗುರು' ಸೇರಿದಂತೆ ಸಾಲು ಸಾಲು ಸೂಪರ್ ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಜಯಮಾಲಾ ಮನೆ ಬಾಗಿಲಿಗೆ ಅದೃಷ್ಟ ಹುಡುಕಿಕೊಂಡು ಬಂದಿದೆ.
ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಸದಸ್ಯೆ ಆಗಿರುವ ನಟಿ ಜಯಮಾಲಾಗೆ ಇದೇ ಮೊದಲ ಬಾರಿಗೆ ಮಂತ್ರಿ ಸ್ಥಾನ ಲಭಿಸಿದೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕ್ಯಾಬಿನೆಟ್ ಗೆ ನಟಿ ಜಯಮಾಲಾ ಸೇರ್ಪಡೆ ಆಗಲಿದ್ದಾರೆ.
ನಾಲ್ಕು ವರ್ಷಗಳಿಂದ ವಿಧಾನ ಪರಿಷತ್ ಸದಸ್ಯೆ ಆಗಿ ಕಾರ್ಯ ನಿರ್ವಹಿಸಿರುವ ರೀತಿಯನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷದ ವರಿಷ್ಟರು ಜಯಮಾಲಾ ರವರಿಗೆ ಸಚಿವ ಸ್ಥಾನ ಕೊಡಲು ಮನಸ್ಸು ಮಾಡಿದ್ದಾರೆ.

ಸಂಪುಟ ಸೇರ್ಪಡೆ ಆಗುತ್ತಿರುವುದಕ್ಕೆ ಹರ್ಷಿತರಾದ ಜಯಮಾಲಾ, ಮನೆಯಲ್ಲಿ ಬೆಲ್ಲ ಸವಿದು ಸಂಭ್ರಮಿಸಿದರು. ''ನಾಲ್ಕು ವರ್ಷಗಳಿಂದ ನಾನು ಕೆಲಸ ಮಾಡಿರುವುದನ್ನು ಪಕ್ಷದ ವರಿಷ್ಟರು ನೋಡಿದ್ದಾರೆ. ಮತ್ತೆ ಯೋಗ ಕೂಡ ಇರಬಹುದು. ನಾನು ಅದರಲ್ಲಿಯೂ ನಂಬಿಕೆ ಇಟ್ಟುಕೊಂಡಿದ್ದೇನೆ. ಖಾತೆ ಯಾವುದೇ ಕೊಟ್ಟರೂ, ಅದಕ್ಕೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ'' ಎನ್ನುತ್ತಾರೆ ನಟಿ ಜಯಮಾಲಾ
''ನನ್ನ ಹೃದಯಕ್ಕೆ ಹತ್ತಿರವಾಗಿರುವುದು ಹೆಣ್ಮಕ್ಳು. ಈ ದೇಶದಲ್ಲಿ ಇರುವ ಮಹಿಳೆಯರ ಸ್ಥಿತಿ-ಗತಿ ಬಗ್ಗೆ ಅಧ್ಯಯನ ಮಾಡಿರುವೆ. ರಾಜ್ಯದ ಹೆಣ್ಣಿನ ಸಶಕ್ತಿಕರಣದ ಬಗ್ಗೆ ನನಗೆ ಅತ್ಯಂತ ಕಾಳಜಿ ಇದೆ. ಎಲ್ಲಿ ಕೂತರೂ ನಾನು ಹೆಣ್ಣನ್ನು ಪ್ರತಿನಿಧಿಸುತ್ತಾ ಹೋಗುವೆ. ಹೆಣ್ಣಿಗೆ ಒಳ್ಳೆಯ ಸ್ಥಾನಮಾನ, ರಕ್ಷಣೆ ಸಿಗಬೇಕು ಅನ್ನೋದು ನನ್ನ ಅಂತರಾತ್ಮದ ಆಸೆ. ಆದ್ರೆ, ಪಕ್ಷ ಯಾವುದೇ ಖಾತೆ ಕೊಟ್ಟರೂ, ಅದನ್ನ ಪ್ರಸಾದ ಅಂತ ತಿಳಿದುಕೊಂಡು ನಿಷ್ಟೆಯಿಂದ ಕೆಲಸ ಮಾಡುವೆ'' ಎನ್ನುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಗ್ಗೆ ತಮಗಿರುವ ಆಸಕ್ತಿಯನ್ನು ಜಯಮಾಲಾ ಹೊರಹಾಕಿದರು.
1959 ರಲ್ಲಿ ಜನಿಸಿದ ನಟಿ ಜಯಮಾಲಾ ಕನ್ನಡ, ತೆಲುಗು, ತಮಿಳು, ತುಳು ಹಾಗೂ ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ 'ತಾಯಿ ಸಾಹೇಬ' ಚಿತ್ರದ ಮೂಲಕ ನಿರ್ಮಾಪಕಿ ಆದ ಜಯಮಾಲಾ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದರು. ರಾಜಕೀಯ ರಂಗ ಪ್ರವೇಶ ಮಾಡಿದ ಜಯಮಾಲಾ ವಿಧಾನ ಪರಿಷತ್ ಸದಸ್ಯೆ ಆದರು. ಈಗ ಮಂತ್ರಿ ಪಟ್ಟಕ್ಕೇರಿದ್ದಾರೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications