ಹಾವಿನಿಂದ ಹುಡುಗಿಯ ರಕ್ಷಿಸಿದ ವೈಶಾಖ್ ಮತ್ತಿತರರಿಗೆ ಶೌರ್ಯ ಪ್ರಶಸ್ತಿ
ಬೆಂಗಳೂರು, ನವೆಂಬರ್ 11 : ಈ ಬಾರಿಯ ಶೌರ್ಯ ಪ್ರಶಸ್ತಿಗೆ ನಾಲ್ಕು ಜನ ಬಾಲಕಿಯರು ಹಾಗೂ ಮೂವರು ಬಾಲಕರು ಒಟ್ಟು 7 ಮಕ್ಕಳು ಆಯ್ಕೆಯಾಗಿದ್ದಾರೆ.
ಕೆಳದಿ ಚೆನ್ನಮ್ಮ ಪ್ರಶಸ್ತಿಗೆ 4 ಬಾಲಕಿಯರು ಮತ್ತು ಹೊಯ್ಸಳ ಪ್ರಶಸ್ತಿಗೆ 3 ಬಾಲಕರನ್ನು ಆಯ್ಕೆ ಮಾಡಲಾಗಿದೆ. ಧೈರ್ಯ, ಸಾಹಸ ಪ್ರದರ್ಶಿಸಿ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಿಸುವ ಮಕ್ಕಳಿಗೆ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರತಿ ವರ್ಷ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಪುತ್ತೂರು ತಾಲ್ಲೂಕು ಕೌಕ್ರಾಡಿ ಗ್ರಾಮದ ನಿತಿನ್ ಕೆ.ಆರ್. (16), ಶಿವಮೊಗ್ಗದ ಕೃಷ್ಣ ನಾಯ್ಕ ಸಿ.ಡಿ. (14) ಮತ್ತು ಬಂಟ್ವಾಳ ತಾಲ್ಲೂಕಿನ ಕೂಡೂರು ಮನೆಯ ವೈಶಾಖ್ (11) ಹೊಯ್ಸಳ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಚಾಮರಾಜನಗರದ ಜುನೇರಾ ಹರಂ (7), ಶಿಡ್ಲಘಟ್ಟ ತಾಲ್ಲೂಕಿನ ಹನುಮಂತಪುರದ ದೀಕ್ಷಿತಾ ಎಚ್.ಕೆ. (10), ಎಚ್.ಕೆ. ಅಂಬಿಕಾ (12) ಮತ್ತು ಹುನಗುಂದ ತಾಲ್ಲೂಕಿನ ವಡ್ಡರ ಹೊಸೂರಿನ ನೇತ್ರಾವತಿ ಚವ್ಹಾಣ (15) ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹಾವು ಕಚ್ಚಿದ್ದ ತಂಗಿಯನ್ನು ರಕ್ಷಿಸಿದ ಕೆ.ಆರ್. ನಿತಿನ್
ಬಾಯಲ್ಲಿ ವಿಷ ಹೀರುವ ಮೂಲಕ ಹಾವು ಕಚ್ಚಿದ್ದ ತಂಗಿಯನ್ನು ರಕ್ಷಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಕೌಕ್ರಾಡಿ ಗ್ರಾಮದ 16 ವರ್ಷದ ಕೆ.ಆರ್. ನಿತಿನ್ ಗೆ ಈ ವರ್ಷದ ಶೌರ್ಯ ಪ್ರಶಸ್ತಿ ಲಭಿಸಿದೆ.

ಹೆಬ್ಬಾವಿನನಿಂದ ಹುಡಗಿಯ ಪ್ರಾಣ ರಕ್ಷಿಸಿದ ವೈಶಾಖ್
ತನ್ನನ್ನು ಸುತ್ತಿ ನುಂಗಲು ಪ್ರಯತ್ನಿಸಿದ ಹೆಬ್ಬಾವಿನ ಮುಖಕ್ಕೆ ಕಲ್ಲಿನಿಂದ ಜಜ್ಜಿ ತನ್ನ ಪ್ರಾಣ ರಕ್ಷಿಸಿ ಜತೆಗೆ, ಹುಡುಗಿಯನ್ನು ರಕ್ಷಿಸಿದ ಬಂಟ್ವಾಳ ತಾಲೂಕಿನ ಕೂಡೂರು ಮನೆಯ 11 ವರ್ಷದ ವೈಶಾಖ್ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರಶಸ್ತಿ ಪ್ರಧಾನ
ಧೈರ್ಯ, ಸಾಹಸ ಪ್ರದರ್ಶಿಸಿ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಿಸುವ ಮಕ್ಕಳಿಗೆ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರತಿ ವರ್ಷ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

10 ಸಾವಿರ ರು. ನಗದು ಬಹುಮಾನ
ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿರುವ ಮಕ್ಕಳಿಗೆ 10 ಸಾವಿರ ರು. ನಗದು, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ಪ್ರದಾನ ಮಾಡಲಾಗುವುದು. ಮಕ್ಕಳ ದಿನಾಚರಣೆಯಂದು (ನ.14) ಬೆಂಗಳೂರಿನ ಜವಾಹರ ಬಾಲಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications