Get Updates
Get notified of breaking news, exclusive insights, and must-see stories!

ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ

ಬೆಂಗಳೂರು, ಜುಲೈ 2: "ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹಿರಿಯ ಸಾಹಿತಿ, ಚಿಂತಕ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರನ್ನು ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ," ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಹೇಳಿದ್ದಾರೆ.

ಕನ್ನಡ ಪುಸ್ತಕ ಪ್ರಾಧಿಕಾರದಿಂದ ನೀಡಲಾಗುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಯನ್ನು ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನಕ್ಕೆ ನೀಡಲಾಗಿದೆ. ಡಾ.ಜೆ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಮೈಸೂರಿನ ಸಯ್ಯದ್ ಇಸಾಕ್‌ರನ್ನು ಆಯ್ಕೆ ಮಾಡಲಾಗಿದೆ.

ಡಾ. ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಡಾ. ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ನೀಡಲಾಗಿದೆ ಎಂದು ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ. ಆದರೆ ಶುಕ್ರವಾರದಂದು ಡಾ. ಸುಧೀಂದ್ರ ಹಾಲ್ದೊಡ್ಡೇರಿ ನಿಧನರಾದರು. ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗುವುದು.

kannada book authority announced 2020 annual awards

"ಪುಸ್ತಕ ಬಹುಮಾನಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಕೆಲವು ದಿನಗಳಲ್ಲೇ ಪ್ರಕಟ ಮಾಡಲಾಗುವುದು," ಎಂದು ನಂದೀಶ್ ಹಂಚೆ ಹೇಳಿದ್ದಾರೆ.

* ಅತ್ಯುತ್ತಮ ಪ್ರಕಾಶನ ಪ್ರಶಸ್ತಿ 1.00 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.

* ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ 75,000 ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

* ಡಾ. ಜೆ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ 50,000 ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

Recommended Video

      ಸಿದ್ದರಾಮಯ್ಯ ಮುಂದೆ ನಡೀಲಿಲ್ಲ ಡಿಕೆಶಿ ಆಟ | Karnataka Congress Inside Politics | Oneindia Kannada

      * ಡಾ. ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ 25,000 ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+