ಕನ್ನಡ ಕಡ್ಡಾಯ ಕಲಿಕೆ ಕೈ ಹಿಡಿದ ರಾಜ್ಯ ಸರ್ಕಾರ
ಬೆಂಗಳೂರು, ಮಾ. 27: ರಾಜ್ಯ ಸರ್ಕಾರ 1 ರಿಂದ 5 ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ಪ್ರಾಥಮಿಕ ಶಿಕ್ಷಣ ಜಾರಿಯಾಗಬೇಕು ಎಂಬ ವಿಧೇಯಕವನ್ನು ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ.
1ರಿಂದ 10ನೇ ತರಗತಿವರೆಗೆ ಎಲ್ಲ ಶಾಲೆಗಳಲ್ಲೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವುದನ್ನು ಕಡ್ಡಾಯಗೊಳಿಸಬೇಕು ಎಂಬ ವಿಧೇಯಕವನ್ನು ಸಹ ಮಂಡಿಸಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ "ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಲು ಮಕ್ಕಳ ಹಕ್ಕು ವಿಧೇಯಕ-2015' ಹಾಗೂ "ಕನ್ನಡ ಭಾಷಾ ಕಲಿಕೆ ವಿಧೇಯಕ-2015' ವನ್ನು ಮಂಡಿಸಿದ್ದಾರೆ.[ಕನ್ನಡ ಮಾಧ್ಯಮ ಮಸೂದೆಗೆ ರಾಜ್ಯ ಕ್ಯಾಬಿನೆಟ್ ಒಪ್ಪಿಗೆ]

ಸಂವಿಧಾನದ 350 ಎ ಪ್ರಕಾರ ಮಗುವಿಗೆ ಆತನ/ಆಕೆಯ ಮಾತೃಭಾಷೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣ ಒದಗಿಸುವುದು ಸಂಬಂಧ ಪಟ್ಟ ರಾಜ್ಯಗಳ ಸಂವಿಧಾನಿಕ ಕರ್ತವ್ಯವಾಗಿದೆ. ಇದನ್ನು ಶಿಕ್ಷಣ ತಜ್ಞರು, ಬುದ್ಧಿ ಜೀವಿಗಳು ಮತ್ತು ಬರಹಗಾರರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗಿದೆ.
1 ರಿಂದ 5ನೇ ತರಗತಿವರೆಗೆ ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿ ಕಡ್ಡಾಯವಾಗಿ ನೀಡುವುದು, ಇನ್ನು ಮುಂತಾದ ವಿಚಾರಗಳನ್ನು ವಿಧೇಯಕದಲ್ಲಿ ಮಂಡಿಸಲಾಗಿದೆ.
ರಾಜ್ಯದಲ್ಲಿರುವ ಎಲ್ಲ ಶಾಲೆಗಳಲ್ಲೂ 1ರಿಂದ 10 ನೇ ತರಗತಿವರೆಗೆ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ಸರ್ಕಾರ ನಿರ್ಧಾರ ಮಾಡಿದ್ದು, 2015-16ನೇ ಶೈಕ್ಷಣಿಕ ವರ್ಷದಿಂದಲೇ ಇದನ್ನು ಜಾರಿಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗುವುದು.[ಕಡ್ಡಾಯ ಕನ್ನಡ ಶಿಕ್ಷಣ ಹೋರಾಟಕ್ಕೆ ಮತ್ತೆ ಹಿನ್ನಡೆ]
ಕನ್ನಡ ಭಾಷಾ ಕಲಿಕೆ ವಿಧೇಯಕದಲ್ಲೇನಿದೆ?
ರಾಜ್ಯದಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸಲೇಬೇಕು ಎನ್ನುವುದು ವಿಧೇಯಕದ ಪ್ರಮುಖ ಅಂಶ. ಅಲ್ಪಸಂಖ್ಯಾತ, ಖಾಸಗಿ ಸೇರಿದಂತೆ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ಶಿಕ್ಷಣ ಸಂಸ್ಥೆಗಳಲ್ಲೂ ಕನ್ನಡ ಭಾಷೆಯನ್ನು ಯಾರೂ ನಿರ್ಲಕ್ಷ್ಯ ಮಾಡುವಂತಿಲ್ಲ.
-
ವರ್ಷಾಂತ್ಯದೊಳಗೆ ಮಾಜಿ ಸೈನಿಕರಿಗೆ ಸರ್ಕಾರದಿಂದ ನಿವೇಶನ: ಕೃಷ್ಣ ಬೈರೇಗೌಡ ಭರವಸೆ -
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ












Click it and Unblock the Notifications