ಕನ್ನಡ ಕಡ್ಡಾಯ ಕಲಿಕೆ ಕೈ ಹಿಡಿದ ರಾಜ್ಯ ಸರ್ಕಾರ
ಬೆಂಗಳೂರು, ಮಾ. 27: ರಾಜ್ಯ ಸರ್ಕಾರ 1 ರಿಂದ 5 ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ಪ್ರಾಥಮಿಕ ಶಿಕ್ಷಣ ಜಾರಿಯಾಗಬೇಕು ಎಂಬ ವಿಧೇಯಕವನ್ನು ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ.
1ರಿಂದ 10ನೇ ತರಗತಿವರೆಗೆ ಎಲ್ಲ ಶಾಲೆಗಳಲ್ಲೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವುದನ್ನು ಕಡ್ಡಾಯಗೊಳಿಸಬೇಕು ಎಂಬ ವಿಧೇಯಕವನ್ನು ಸಹ ಮಂಡಿಸಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ "ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಲು ಮಕ್ಕಳ ಹಕ್ಕು ವಿಧೇಯಕ-2015' ಹಾಗೂ "ಕನ್ನಡ ಭಾಷಾ ಕಲಿಕೆ ವಿಧೇಯಕ-2015' ವನ್ನು ಮಂಡಿಸಿದ್ದಾರೆ.[ಕನ್ನಡ ಮಾಧ್ಯಮ ಮಸೂದೆಗೆ ರಾಜ್ಯ ಕ್ಯಾಬಿನೆಟ್ ಒಪ್ಪಿಗೆ]

ಸಂವಿಧಾನದ 350 ಎ ಪ್ರಕಾರ ಮಗುವಿಗೆ ಆತನ/ಆಕೆಯ ಮಾತೃಭಾಷೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣ ಒದಗಿಸುವುದು ಸಂಬಂಧ ಪಟ್ಟ ರಾಜ್ಯಗಳ ಸಂವಿಧಾನಿಕ ಕರ್ತವ್ಯವಾಗಿದೆ. ಇದನ್ನು ಶಿಕ್ಷಣ ತಜ್ಞರು, ಬುದ್ಧಿ ಜೀವಿಗಳು ಮತ್ತು ಬರಹಗಾರರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗಿದೆ.
1 ರಿಂದ 5ನೇ ತರಗತಿವರೆಗೆ ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿ ಕಡ್ಡಾಯವಾಗಿ ನೀಡುವುದು, ಇನ್ನು ಮುಂತಾದ ವಿಚಾರಗಳನ್ನು ವಿಧೇಯಕದಲ್ಲಿ ಮಂಡಿಸಲಾಗಿದೆ.
ರಾಜ್ಯದಲ್ಲಿರುವ ಎಲ್ಲ ಶಾಲೆಗಳಲ್ಲೂ 1ರಿಂದ 10 ನೇ ತರಗತಿವರೆಗೆ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ಸರ್ಕಾರ ನಿರ್ಧಾರ ಮಾಡಿದ್ದು, 2015-16ನೇ ಶೈಕ್ಷಣಿಕ ವರ್ಷದಿಂದಲೇ ಇದನ್ನು ಜಾರಿಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗುವುದು.[ಕಡ್ಡಾಯ ಕನ್ನಡ ಶಿಕ್ಷಣ ಹೋರಾಟಕ್ಕೆ ಮತ್ತೆ ಹಿನ್ನಡೆ]
ಕನ್ನಡ ಭಾಷಾ ಕಲಿಕೆ ವಿಧೇಯಕದಲ್ಲೇನಿದೆ?
ರಾಜ್ಯದಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸಲೇಬೇಕು ಎನ್ನುವುದು ವಿಧೇಯಕದ ಪ್ರಮುಖ ಅಂಶ. ಅಲ್ಪಸಂಖ್ಯಾತ, ಖಾಸಗಿ ಸೇರಿದಂತೆ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ಶಿಕ್ಷಣ ಸಂಸ್ಥೆಗಳಲ್ಲೂ ಕನ್ನಡ ಭಾಷೆಯನ್ನು ಯಾರೂ ನಿರ್ಲಕ್ಷ್ಯ ಮಾಡುವಂತಿಲ್ಲ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications