ಮನೆ ಮನೆಗಳಲ್ಲಿ ಕನ್ನಡ ಧ್ವಜ ಹಾರಿಸಿ: ಪರಿಷತ್ತಿನಲ್ಲಿ ಹೇಗಿರಲಿದೆ ಕನ್ನಡ ರಾಜ್ಯೋತ್ಸವ
ಬೆಂಗಳೂರು, ಅಕ್ಟೋಬರ್ 19: ಕನ್ನಡ ನಾಡಿನಾದ್ಯಂತ ಹಳದಿ-ಕೆಂಪು ಬಣ್ಣ ರಾರಾಜಿಸುವಂತೆ ಮಾಡುವ ನಿಟ್ಟಿನಲ್ಲಿ ನವೆಂಬರ್ 1ರಂದು ಎಲ್ಲರ ಮನೆಗಳಲ್ಲಿ 'ಕನ್ನಡ ಧ್ವಜ' ಹಾರಿಸಲು ಕನ್ನಡ ಸಾಹಿತ್ಯ ಪರಿಷತ್ತು ಕರೆ ನೀಡಿದೆ. ಜೊತೆಗೆ ಇದೇ ಮೊದಲ ಬಾರಿಗೆ ಪರಿಷತ್ತಿನ ಆವರಣದಲ್ಲಿ ಕನ್ನಡ ತಾಯಿ 'ಭುವನೇಶ್ವರಿ ದೇವಿಯ' ಪುತ್ಥಳಿಯನ್ನು ರಾಜ್ಯೋತ್ಸವದಂತೆ ಸ್ಥಾಪಿಸುವ ಗುರಿ ಇಟ್ಟುಕೊಂಡಿದೆ.
ಕನ್ನಡ ನಾಡಿನಾದ್ಯಂತ ಸ್ಫೂರ್ತಿಯ ಸೆಲೆ ಪಸರಿಸಲು ಮತ್ತು ಕನ್ನಡ ಹಬ್ಬದಲ್ಲಿ ಕನ್ನಡಿಗರೆಲ್ಲರೂ ಪಾಲ್ಗೊಳ್ಳಬೇಕು ಎಂಬ ಮಹತ್ತರ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಮಹೇಶ ಜೋಶಿ ಮನೆಗಳಲ್ಲಿ ಕನ್ನಡ ಭಾವುಟ ಹಾರಿಸಲು ಕರೆ ನೀಡಿದ್ದಾರೆ. ಜೊತೆಗೆ ಕನ್ನಡ-ಕನ್ನಡಿಗ-ಕರ್ನಾಟಕ ಎನ್ನುವ ಧ್ಯೇಯ ವಾಕ್ಯದಡಿ ಕಾರ್ಯ ನಿರ್ವಹಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ನವೆಂಬರ್ 1ರಂದೇ ತಾಯಿ ಭುವನೇಶ್ವರಿ ದೇವಿಯ 6.5ಅಡಿ ಎತ್ತರದ ಪುತ್ಥಳಿ ಸ್ಥಾಪಿಸಲು ಸಕಲ ಸಿದ್ಧತೆಗಳು ನಡೆಯುತ್ತಿವೆ.
ಬೆಂಗಳೂರಿನಲ್ಲೇ ಕಲಾವಿದರಿಂದ ಭುವನೇಶ್ವರಿ ದೇವಿಯ ಮೂರ್ತಿ ಸಿದ್ಧವಾಗುತ್ತಿದೆ. ಕನ್ನಡ ರಾಜ್ಯೋತ್ಸವದಂದು ಮೂರ್ತಿ ಸ್ಥಾಪಿಸಿ ಅದ್ಧೂರಿಯಾಗಿ ಲೋಕಾರ್ಪಣೆ ಮಾಡಲು ಪರಿಷತ್ತು ಯೋಜನೆ ರೂಪಿಸಿದೆ. ಎಲ್ಲವು ಅಂದುಕೊಂಡಂತಾದರೆ ನವೆಂಬರ್ 1ರಂದೇ ಇಲ್ಲವೇ ನವೆಂಬರ್ ಮೊದಲ ವಾರ ಪುತ್ಥಳಿ ಪ್ರತಿಷ್ಠಾಪನೆ ಜುರಗಲಿದೆ.

ಕಸಾಪದಲ್ಲಿ 3 ಮಹನೀಯರ ಮೂರ್ತಿ ಸ್ಥಾಪನೆಗೆ ಚಿಂತನೆ
ಇಷ್ಟೇ ಅಲ್ಲದೇ ಶತಮಾನದ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಗೆ ಕಾರಣಿಭೂತರಾದ ಅಂದಿನ ಮೈಸೂರು ಸಂಸ್ಥಾನದ ಅರಸ ನಾಲ್ವಡಿ ಕೃಷ್ಣರಾಜ ಒಡೆಯರ್, ಮತ್ತವರ ಕಾಲದಲ್ಲಿ ದಿವಾನರಾಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಹಾಗೂ ಸರ್.ಮಿರ್ಜಾ ಇಸ್ಮಾಯಿಲ್ ಸೇರಿ ಈ ಮೂರು ಮಹನೀಯರ ಮೂರ್ತಿಗಳನ್ನು ಪರಿಷತ್ತಿನ ಆವರಣದಲ್ಲಿ ಸ್ಥಾಪಿಸಲು ಪರಿಷತ್ತು ಚಿಂತನೆ ನಡೆಸಿದೆ. ಮೂರ್ತಿಗಳ ತಯಾರಿಕೆ ಪ್ರಗತಿಯಲ್ಲಿದೆ. ಆದಷ್ಟು ಶೀಘ್ರವೇ ಮೂರ್ತಿಗಳು ಪ್ರತಿಷ್ಠಾಪನೆಗೊಳ್ಳಲಿವೆ ಎಂದು ಪರಿಷತ್ತಿನ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯೋತ್ಸವ ಪ್ರಯುಕ್ತ ಕರ್ನಾಟಕ ಏಕೀಕರಣ ಕುರಿತು ಗೋಷ್ಠಿಗಳು, ಧ್ವಜಾರೋಹಣ ಸೇರಿದಂತೆ ಹಲವು ಕನ್ನಡದ ಕಂಪಿನ ಕಾರ್ಯಕ್ರಮಗಳು ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ನೇತೃತ್ವದಲ್ಲಿ ಅದ್ಧೂರಿಯಾಗಿ ಜರುಗಲಿವೆ.

ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ರಾಜ್ಯೋತ್ಸವದಂದು ಕನ್ನಡಿಗರು ತಮ್ಮ ಮನೆಯ ಮೇಲೆ ಹಾರಿಸಬೇಕು. ಈ ಮೂಲಕ ಕನ್ನಡದ ಕಣ್ವ ಎಂದೇ ಖ್ಯಾತರಾದ ಬಿ.ಎಮ್ ಶ್ರೀಕಂಠಯ್ಯನವರ 'ಏರಿಸಿ ಹಾರಿಸಿ ಕನ್ನಡದ ಬಾವುಟ, ಹಾರಿಸಿ ತೋರಿಸಿ ಕೆಚ್ಚೆದೆಯ ಬಾವುಟ' ಎಂಬ ಆಶಯದಂತೆ ಅರ್ಥಪೂರ್ಣವಾಗಿ ಕನ್ನಡ ಪ್ರೇಮವನ್ನು ಮೆರೆಯೋಣ ಎಂದು ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
-
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications