Kannada Hanuman Jayanti 2022: ಹನುಮ ಜಯಂತಿ ಮುಹೂರ್ತ, ಪೂಜಾ ವಿಧಿ, ಮಹತ್ವ ತಿಳಿಯಿರಿ
ಬೆಂಗಳೂರು, ಡಿಸೆಂಬರ್ 5: ಇಂದು ಡಿಸೆಂಬರ್ 5ರಂದು ಕರ್ನಾಟಕದಾದ್ಯಂತ ಶ್ರೀಹನುಮ ಜಯಂತಿಯನ್ನು ಶೃದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದೆ. ದಕ್ಷಿಣ ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಹನುಮ ಜಯಂತಿಯನ್ನು ಮಾರ್ಗಶೀರ್ಷ ಮಾಸದ ಶುಕ್ಲ ಪಕ್ಷದ ತ್ರಯೋದಶಿಯಂದು ಆಚರಿಸಲಾಗುತ್ತದೆ.
ಈ ದಿನವನ್ನು ಹನುಮಾನ್ ವ್ರತ ಎಂದು ಸಹ ಕರೆಯಲಾಗುತ್ತದೆ. ಈ ಬಾರಿ ಇದನ್ನು ಸೋಮವಾರ, ಡಿಸೆಂಬರ್ 5 ರಂದು ಆಚರಿಸಲಾಗುತ್ತಿದೆ. ಈ ವೃತವು ಹನುಮಂತನಿಗೆ ಸಮರ್ಪಿತವಾಗಿದೆ. ಈ ವೃತವನ್ನು ಆಚರಿಸುವವರು ಬಹಳ ಶೃದ್ಧೆಯಿಂದ ಪೂಜೆಗಳನ್ನು ನೆರವೇರಿಸುತ್ತಾರೆ.
ಹನುಮ ಜಯಂತಿಯ ವೃತದ ವಿಧಾನಗಳು
ಹನುಮ ಜಯಂತಿಯಂದು ವೃತಾಚರಣೆ ಮಾಡುವ ಹೆಚ್ಚಿನ ಭಕ್ತರು ಈ ದಿನ ಉಪವಾಸ ಮಾಡುತ್ತಾರೆ. ಈ ವೃತವನ್ನು ಆಚರಿಸುವರು ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ, ಶುಭ್ರವಾದ ಕೆಂಪು ಇಲ್ಲವೇ ಹಳದಿ ಬಟ್ಟೆಯನ್ನು ಧರಿಸುತ್ತಾರೆ. ವೃತದಲ್ಲಿರುವವರು ಮೊದಲು ಗಣಪತಿಯನ್ನು ಸ್ಮರಿಸಿ ಬಳಿಕ ಹನುಮಂತನನ್ನು ಆರಾಧಿಸುತ್ತಾರೆ.

ಭಕ್ತರು ಈ ದಿನ ಹನುಮಾನ್ ಚಾಲೀಸಾ ಮತ್ತು ಹನುಮಾನ್ ಅಷ್ಟಕವನ್ನು ಪಠಿಸುತ್ತಾರೆ. ಈ ದಿನ ಸಾಸಿವೆ ಎಣ್ಣೆಯಿಂದ ನಾಲ್ಕು ಮುಖದ ದೀಪವನ್ನು ಹಚ್ಚಿ 'ಓಂ ಶ್ರೀ ರಾಮದೂತ ಹನುಮತೇ ನಮಃ ದೀಪಂ ದರ್ಶಯಾಮಿ' ಮಂತ್ರವನ್ನು ಹೇಳಬೇಕು. ಮಂತ್ರ ಪಠಣದ ಜೊತೆಗೆ ವೃತ ಮಾಡುತ್ತಿರುವ ಭಕ್ತರು ಹನುಮಂತನಿಗೆ ಸಿಂಧೂರವನ್ನು ಅರ್ಪಿಸಿ, ಸಾಸಿವೆ ಎಣ್ಣೆ, ತೆಂಗಿನಕಾಯಿ ಮತ್ತು 21 ವೀಳ್ಯದೆಲೆಗಳಿರುವ ಹಾರವನ್ನು ಅರ್ಪಿಸಬೇಕು.
ದಾಸವಾಳ ಮತ್ತು ಗುಲಾಬಿ ಹೂ ಸೇರಿದಂತೆ ಕೆಂಪು, ಕೇಸರಿ, ಹಳದಿ ಬಣ್ಣದ ಹೂಗಳನ್ನು ದೇವರಿಗೆ ಇರಿಸಿ, ಹನುಮಂತನಿಗೆ ಪ್ರಿಯವಾದ ಲಡ್ಡು, ಬಾಳೆಹಣ್ಣು, ಪೇರಲೆ ಹಣ್ಣು ಇತ್ಯಾದಿಯನ್ನು ನೈವೇದ್ಯ ಮಾಡಬೇಕು. ಇದರ ಜೊತೆ ಜೊತೆಗೆ ಹನುಮಾನ್ ಚಾಲೀಸಾ ಮತ್ತು ಸುಂದರಕಾಂಡವನ್ನು ಪಠಿಸುತ್ತಾ ರಾಮಧ್ಯಾನವನ್ನು ಮಾಡಬೇಕು. ಸಾಧ್ಯವಾದರೆ ಈ ದಿನ ಭಕ್ತರು ಆಂಜನೇಯನ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಬೇಕು.
ಉತ್ತರ ಭಾರತದದಲ್ಲಿ ಹನುಮ ಜಯಂತಿಯನ್ನು ಚೈತ್ರ ಪೂರ್ಣಿಮೆಯ ದಿನದಂದು ಆಚರಿಸಲಾಗುತ್ತದೆ. ಆದರೆ, ಕರ್ನಾಟಕದಲ್ಲಿ ಮಾರ್ಗಶೀರ್ಷ ಮಾಸದ ಶುಕ್ಲ ಪಕ್ಷ ತ್ರಯೋದಶಿಯಂದು ಶ್ರೀಹನುಮ ಜಯಂತಿಯನ್ನು ಆಚರಿಸಲಾಗುತ್ತದೆ. ಶ್ರೀಹನುಮಾನ್ ಜಯಂತಿ ಕರ್ನಾಟಕದಲ್ಲಿ ಸೋಮವಾರ ಡಿಸೆಂಬರ್ 5ರಂದು, ತಮಿಳುನಾಡಿನಲ್ಲಿ ಡಿಸೆಂಬರ್ 23ರಂದು ಸೇರಿದಂತೆ ಬೇರೆ ಬೇರೆ ಪ್ರದೇಶದಲ್ಲಿ ಬೇರೆ ಬೇರೆ ದಿನ ಆಚರಿಸಲಾಗುತ್ತದೆ. ಇನ್ನು ಈ ಬಾರಿಯ ಶ್ರೀಹನುಮಾನ್ ಜಯಂತಿ ಪೂಜಾ ಮುಹೂರ್ತ ಡಿಸೆಂಬರ್ 5ರ ಬೆಳಗ್ಗೆ 5:57ರಿಂದ ಡಿಸೆಂಬರ್ 6ರ ಬೆಳಗ್ಗೆ 6:46 ಗಂಟೆರವೆರೆಗೆ ಇರಲಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications