ರಾಘವೇಶ್ವರ ಶ್ರೀ ವಿರುದ್ಧ ನಿಷ್ಪಕ್ಷ ತನಿಖೆಗೆ ಸಾಹಿತಿಗಳ ಒತ್ತಾಯ
ಬೆಂಗಳೂರು, ಸೆಪ್ಟೆಂಬರ್. 15: ಶಿವಮೊಗ್ಗ ಜಿಲ್ಲೆ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ಅತ್ಯಾಚಾರ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಬೇಕು ಎಂದು ಪ್ರಗತಿಪರ ಸಾಹಿತಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಕೆ ಮಾಡಿದ್ದಾರೆ.
ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿದ ಸಾಹಿತಿಗಳು ತನಿಖೆಯನ್ನು ಕ್ಷಿಪ್ರವಾಗಿ ನಡೆಸಲು ಒತ್ತಾಯ ಮಾಡಿದ್ದಾರೆ. ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್, ಬರಗೂರು ರಾಮಚಂದ್ರಪ್ಪ, ಸಿದ್ದಲಿಂಗಯ್ಯ ಸೇರಿದಂತೆ ಅನೇಕ ಸಾಹಿತಿಗಳ ನಿಯೋಗ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.[ಗಿರಿನಗರದಲ್ಲಿ ಸಿಐಡಿಯಿಂದ ರಾಘವೇಶ್ವರ ಶ್ರೀ ವಿಚಾರಣೆ]

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಸ್ವಾಮೀಜಿ ಪ್ರಕರಣಕ್ಕೆ ಸಂಬಂಧಿಸಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ. ಎರಡು ಪ್ರಕರಣಗಳನ್ನು ಸಿಐಡಿಗೆ ವಹಿಸಲಾಗಿದೆ. ತನಿಖೆಯಲ್ಲಿ ಯಾವ ಲೋಪವನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ರಾಘವೇಶ್ವರ ಸ್ವಾಮೀಜಿ ಮೇಲೆ ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ್ ಕಳೆದ ವರ್ಷ ಅತ್ಯಾಚಾರದ ದೂರು ದಾಖಲಿಸಿದ್ದರೆ, ಯಕ್ಷಗಾನ ಕಲಾವಿದೆಯೊಬ್ಬರು ಗಿರಿನಗರ ಠಾಣೆಯಲ್ಲಿ ಆಗಸ್ಟ್ 29 ರಂದು ಅತ್ಯಾಚಾರದ ದೂರು ದಾಖಲಿಸಿದ್ದರು. ಸ್ವಾಮೀಜಿಯನ್ನು ಬಂಧಿಸುವಂತೆ ಮಹಿಳಾ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಗ್ರಹಿಸಿದ್ದವು.
ನಂತರ ಸಿಐಡಿ ಅಧಿಕಾರಿಗಳು ಸ್ವಾಮೀಜಿಯನ್ನು ಸೆಪ್ಟೆಂಬರ್ 11 ರಂದು ಸುಮಾರು ಎರಡು ಗಂಟೆಗೂ ಅಧಿಕ ಕಾಲ ವಿಚಾರಣೆ ನಡೆಸಿದ್ದರು. ಇದೀಗ ಸಾಹಿತಿಗಳು ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ ಮಾಡಿದ್ದು ಸಿಐಡಿ ಯಾವ ಕ್ರಮ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications