Kannada: ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ
Kannada: ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಶುಕ್ರವಾರ ಮಾರ್ಚ್ 27ರಂದು ವಿಧಾನಸಭೆಯಲ್ಲಿ ಶಾಲಾ ಶಿಕ್ಷಣದಲ್ಲಿ ಕನ್ನಡ ಭಾಷೆಯ ಅಸ್ಮಿತೆ ಮತ್ತು ಕಲಿಕೆಯ ಬಗ್ಗೆ ನನ್ನ ಸ್ಪಷ್ಟ ನಿಲುವನ್ನು ಹಂಚಿಕೊಂಡಿರುವ ಅವರು, ಕನ್ನಡ ಭಾಷೆಯನ್ನು ಇನ್ನೂ ಹೆಚ್ಚು ಆಳವಾಗಿ, ಅರ್ಥಪೂರ್ಣವಾಗಿ ಕಲಿಸುವ ಪ್ರಯತ್ನವನ್ನು ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಮಕ್ಕಳಿಗೆ ಕನ್ನಡವನ್ನು ಇನ್ನಷ್ಟು 'ಚಂದವಾಗಿ', ಅರ್ಥಪೂರ್ಣವಾಗಿ ಹಾಗೂ ಆಳವಾಗಿ ಹೇಗೆ ಒಲಿಸಿಕೊಳ್ಳಬಹುದು ಎಂಬುದರ ಬಗ್ಗೆ ನಮ್ಮ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಇದಕ್ಕಾಗಿ ನಾನು ಖುದ್ದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆ, ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ ಹಾಗೂ ದೇವನೂರ ಮಹಾದೇವ ಅವರಂತಹ ಗಣ್ಯರೊಂದಿಗೆ ಚರ್ಚಿಸಿ ಸೂಕ್ತ ಸಲಹೆಗಳನ್ನು ಪಡೆದಿದ್ದೇನೆ.

ಸುಪ್ರೀಂ ಕೋರ್ಟ್ ಆದೇಶದಂತೆ ಶಿಕ್ಷಣ ಮಾಧ್ಯಮವನ್ನು ಆಯ್ಕೆ ಮಾಡುವ ಹಕ್ಕು ಪೋಷಕರಿಗೆ ಇದೆ. ರಾಜ್ಯದಲ್ಲಿ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡ ಇದೆ. ನಮ್ಮ ರಾಜ್ಯದ ಪ್ರಸ್ತುತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ನನ್ನ ಪೂಜ್ಯ ತಂದೆಯವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಸ್. ಬಂಗಾರಪ್ಪನವರು ಸೇರಿದಂತೆ ಸದನದಲ್ಲಿರುವ ಅನೇಕ ಗಣ್ಯರು ಕನ್ನಡ ಮಾಧ್ಯಮದ ಶಾಲೆಯಲ್ಲೇ ಓದಿ ಉನ್ನತ ಸ್ಥಾನಕ್ಕೇರಿದವರು ಎನ್ನುವುದು ನಮ್ಮೆಲ್ಲರ ಹೆಮ್ಮೆ.
ಕನ್ನಡ ಭಾಷೆಯನ್ನು ನಮ್ಮ ಮಕ್ಕಳಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಕಲಿಸುವ ನಿಟ್ಟಿನಲ್ಲಿ ನಿಮ್ಮ ಉತ್ತಮ ಸಲಹೆಗಳಿಗೆ ಸದಾ ಮುಕ್ತ ಸ್ವಾಗತವಿದೆ. ಬನ್ನಿ, ನಿಮ್ಮ ಸೂಕ್ತ ಸಲಹೆಗಳನ್ನು ನೀಡಿ, ಅವುಗಳನ್ನು ಅನುಷ್ಠಾನಕ್ಕೆ ತರುವ ಜವಾಬ್ದಾರಿ ನನ್ನದು ಎಂದೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.
Kannada: ಸಾರ್ವಜನಿಕರು ಹೇಳಿದ್ದೇನು
ಇನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಡಿಸಿರುವ ವಿಷಯದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಕೆಲವರು ಹಿಂದಿ ಭಾಷೆಯನ್ನು ಪಠ್ಯದಿಂದ ಕೈಬಿಡಿ ಎಂದು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಹಿಂದಿ ಭಾಷೆಯ ವಿಷಯದಿಂದಾಗಿ ಪ್ರತಿ ವರ್ಷ ಸುಮಾರು 1 ಲಕ್ಷ ವಿದ್ಯಾರ್ಥಿಗಳು ತಮ್ಮ ವೃತ್ತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಮೂರನೇ ಭಾಷೆಯ ಬದಲಿಗೆ IT ಕೋರ್ಸ್ನ ಅಡಿಪಾಯವನ್ನು ಪರಿಚಯಿಸಿ, ತ್ರಿಭಾಷಾ ನೀತಿ ಕಿತ್ತು ಬಿಸಾಡಿ. ಹಿಂದಿ ಟೀಚರ್ ಬದಲಿಗೆ ಕಂಪ್ಯೂಟರ್ ಟೀಚರ್ ನೇಮಕ ಮಾಡಿ ಎಂದು ಹಲವರು ಆಗ್ರಹಿಸಿದ್ದಾರೆ.
"ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ!"
— Madhu Bangarappa (@Madhu_Bangarapp) March 25, 2026
ಇಂದು ವಿಧಾನಸಭೆಯಲ್ಲಿ ಶಾಲಾ ಶಿಕ್ಷಣದಲ್ಲಿ ಕನ್ನಡ ಭಾಷೆಯ ಅಸ್ಮಿತೆ ಮತ್ತು ಕಲಿಕೆಯ ಬಗ್ಗೆ ನನ್ನ ಸ್ಪಷ್ಟ ನಿಲುವನ್ನು ಹಂಚಿಕೊಂಡೆ.
ಮಕ್ಕಳಿಗೆ ಕನ್ನಡವನ್ನು ಇನ್ನಷ್ಟು 'ಚಂದವಾಗಿ', ಅರ್ಥಪೂರ್ಣವಾಗಿ ಹಾಗೂ ಆಳವಾಗಿ ಹೇಗೆ ಒಲಿಸಿಕೊಳ್ಳಬಹುದು ಎಂಬುದರ ಬಗ್ಗೆ ನಮ್ಮ ಸರ್ಕಾರ… pic.twitter.com/qB64TDWyvI
ಮಹೇಶ ಬಸಾಪುರ ಎನ್ನುವವರು, ನಿಮಗೆ ನಿಜವಾಗಲೂ ಕನ್ನಡ ಕುಲದ ಕಾಳಜಿ ಇದ್ದರೆ, ತಮಿಳುನಾಡಿನ ರೀತಿ ದ್ವಿಭಾಷಾ ನೀತಿ ಜಾರಿ ಮಾಡಿ. ಕನ್ನಡ ಪಠ್ಯದಲ್ಲಿ ಕನ್ನಡ ಸರಳೀಕರಣೆಗೆ ಆಯೋಗ ರಚಿಸಿ, ಈಗಿರುವ ಕನ್ನಡ ಮಾದ್ಯಮ ಪುಸ್ತಕಗಳು ಬೇಡದ ಕ್ಲಿಷ್ಟ ಸಂಸ್ಕೃತ ಪದಗಳಿಂದ ತುಂಬಿವೆ. ಕಾಲೇಜುಗಳಲ್ಲಿ ಒಂದು ಕನ್ನಡ ವಿಷಯ ಕಡ್ಡಾಯ ಮಾಡಿ, ಮಾತಿನಲ್ಲಿ ಮರಳು ಮಾಡುವುದು ಬೇಡ ಎಂದಿದ್ದಾರೆ.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
CBSE 10ನೇ ತರಗತಿ ಫಲಿತಾಂಶ 2026: ನಾಳೆ ಪ್ರಕಟಗೊಳ್ಳಲಿದೆಯೇ ರಿಸಲ್ಟ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Dr Rajkumar: ನಟ ಸಾರ್ವಭೌಮ, ಕನ್ನಡಿಗರ ಕಣ್ಮಣಿ ಡಾ. ರಾಜ್ ಕುಮಾರ್ ಬಗ್ಗೆ ಯಾರು ಏನಂದ್ರು, ಇಲ್ಲಿದೆ ವಿವರ -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ












Click it and Unblock the Notifications