'ಪೊಲೀಸರ ಮೊರೆ ಹೋದ ಮೇಲೂ ಬೆದರಿಕೆ ನಿಂತಿಲ್ಲ'
ಬೆಂಗಳೂರು, ಅಕ್ಟೋಬರ್. 13: ಅಶ್ಲೀಲ ಕಮೆಂಟ್ ಗಳ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲು ಏರಿದ ಮೇಲೆ ಬೆದರಿಕೆ ಹೆಚ್ಚಾಗಿದೆ ಎಂದು ಲೇಖಕಿ, ಬರಹಾರ್ತಿ ಚೇತನಾ ತೀರ್ಥಹಳ್ಳಿ ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ನನ್ನ ವಿರುದ್ಧ ಅಶ್ಲೀಲ ಬರಹ ಹಾಕಿದ್ದು ಗೌರವಕ್ಕೆ ಧಕ್ಕೆ ತಂದಿದ್ದಾನೆ ಎಂದು ಆರೋಪಿಸಿ ಲೇಖಕಿ, ಪತ್ರಕರ್ತೆ ಚೇತನಾ ತೀರ್ಥಹಳ್ಳಿ ಪೊಲೀಸ್ ದೂರು ದಾಖಲಿಸಿದ್ದರು.[ಪೇಜಾವರ ಶ್ರೀಗಳನ್ನು ಚರ್ಚೆಗೆ ಕರೆದಿದ್ದ ದಿನೇಶ್ ಅಮಿನಮಟ್ಟು]

ಮಧುಸೂದನ್ ಗೌಡ ಎಂಬಾತ ಫೇಸ್ಬುಕ್ನಲ್ಲಿ ನನ್ನ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿದ್ದಾನೆ. ಪುರಭವನದ ಎದುರು ನಡೆದ ಗೋ ಮಾಂಸ ಭಕ್ಷಣೆ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಅತ್ಯಾಚಾರದ ಬೆದರಿಕೆ ಹಾಕಲಾಗುತ್ತಿದೆ ಎಂದು ಚೇತನಾ ದೂರಿನಲ್ಲಿ ಆರೋಪಿಸಿ ಬೆಂಗಳೂರಿನ ಹನುಮಂತನಗರ ಠಾಣೆಗೆ ದೂರು ದಾಖಲಿಸಿದ್ದರು.
ತಾವು ಹೊಂದಿರುವ 'Alavikaa La' ಹೆಸರಿನ ಫೇಸ್ಬುಕ್ ಖಾತೆಗೆ ಮಧುಸೂದನ್ ಗೌಡ ಎಂಬಾತನಿಂದ ಮೇಲಿಂದ ಮೇಲೆ ಅಶ್ಲೀಲ ಸಂದೇಶಗಳು ಬರುತ್ತಿವೆ. ನನ್ನ ಹಾಗೂ ನನ್ನ ಕುಟುಂಬ ಸದಸ್ಯರನ್ನು ನಿಂದಿಸುವಂಥ ಬರಹಗಳನ್ನು ಹಾಕುತ್ತಿದ್ದಾನೆ. ನಾನು ಬರೆಯುವ ಹಕ್ಕನ್ನು ಕಿತ್ತುಕೊಳ್ಳುವ ಹುನ್ನಾರ ನಡೆಸಿದ್ದಾನೆ. ಇದರಿಂದ ನನಗೆ ಮಾನಸಿಕ ಹಿಂಸೆಯಾಗುತ್ತಿದ್ದು ಪೊಲೀಸರ ಮೊರೆ ಹೋಗುತ್ತಿದ್ದೇನೆ ಎಂದು ಚೇತನಾ ಹೇಳಿದ್ದಾರೆ. ಅಲ್ಲದೇ ತಾವು ದೂರು ದಾಖಲು ಮಾಡಿರುವ ಬಗ್ಗೆ ಫೇಸ್ ಬುಕ್ ನಲ್ಲಿಯೂ ಬರೆದುಕೊಂಡಿದ್ದರು.[ಗೋಮಾಂಸ ತಿನ್ನಲು ಮುಂದಾದವರಿಗೆ ಜನರ ಪ್ರಶ್ನೆ?]
ಚೇತನಾ ಫೇಸ್ ಬುಕ್ ಖಾತೆ ವೀಕ್ಷಿಸಿ
'ಜಾಗೃತ ಭಾರತ' ಹೆಸರಿನ ಖಾತೆಯಿಂದಲೂ ಅಶ್ಲೀಲ ಸಂದೇಶಗಳು ಬರುತ್ತಿವೆ. ಫೇಸ್ಬುಕ್ನಲ್ಲಿ ಹೀಗೆ ನಕಲಿ ಖಾತೆಗಳನ್ನು ತೆರೆದು, ಅವುಗಳ ಮೂಲಕ ಅವಹೇಳನಕಾರಿ ಬರಹ ಪ್ರಕಟಿಸಿ ಗೌರವಕ್ಕೆ ಧಕ್ಕೆ ತರಲಾಗುತ್ತಿದೆ. ಈ ರೀತಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುತ್ತಿರುವ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚೇತನಾ ಮನವಿ ಮಾಡಿಕೊಂಡಿದ್ದರು.
'ಮಧುಸೂದನ್ ಗೌಡ ಎಂಬ ಹೆಸರಿ ನಲ್ಲಿ ಖಾತೆ ಇದೆ. ಆದರೆ, ಅದು ನಿಜಕ್ಕೂ ಅದೇ ಹೆಸರಿನ ವ್ಯಕ್ತಿಯದ್ದೋ ಅಥವಾ ನಕಲಿ ಖಾತೆಯೋ ಎಂಬುದು ತಿಳಿದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ, ಚೇತನಾ ಅವರೊಂದಿಗೆ ನಟಿ ಪೂಜಾ ಗಾಂಧಿ ಸಹ ದೂರು ಸಲ್ಲಿಕೆ ವೇಳೆ ಇದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications