ತಮಿಳುನಾಡಿನಲ್ಲಿ ಕನ್ನಡದ ಧಾನ, ಎರಡು ದಿನಗಳ ಸಮ್ಮೇಳನ
ಮಾರ್ಚ್ 4,5ನೇ ತಾರೀಕು ಚೆನ್ನೈನಲ್ಲಿರುವ ಮದ್ರಾಸ್ ವಿವಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವಿದೆ. ಅಧ್ಯಕ್ಷರಾಗಿ ಸಾಹಿತಿ ಪ್ರೊ ದೊಡ್ಡರಂಗೇಗೌಡ ಆಯ್ಕೆಯಾಗಿದ್ದಾರೆ. ಸಮ್ಮೇಳನದ ಜತೆಗೆ ಹಾಸ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯಲಿವೆ
ಬೆಂಗಳೂರು, ಫೆಬ್ರವರಿ 24: ಕನ್ನಡ ಸಾಹಿತ್ಯ ಪರಿಷತ್ ನ ತಮಿಳುನಾಡು ಘಟಕ ಹಾಗೂ ಮದ್ರಾಸ್ ವಿವಿ ಕನ್ನಡ ಸಾಹಿತ್ಯ ವಿಭಾಗದಿಂದ ಮಾರ್ಚ್ 4, 5ರಂದು ತಮಿಳುನಾಡು ಕನ್ನಡಿಗರ ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಸಾಂಸ್ಕೃತಿಕ ಸಮಾವೇಶ ನಡೆಯಲಿದೆ.
ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ಪ್ರೊ.ದೊಡ್ಡರಂಗೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಮದ್ರಾಸ್ ವಿವಿಯ ಪ್ಲಾಟಿನಂ ಜ್ಯೂಬಿಲಿ ಸಭಾ ಭವನ ಮರೀನಾ ಆವರಣದಲ್ಲಿ ಸಮ್ಮೇಳನ ನಡೆಯಲಿದೆ. ಮಾರ್ಚ್ 4ರ ಬೆಳಗ್ಗೆ 8.30ಕ್ಕೆ ಅಯನಾವರಂಅನಲ್ಲಿರುವ ಸರ್ವಜ್ಞನ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಮೆರವಣಿಗೆ ಮೂಲಕ ಸಮಾವೇಶಕ್ಕೆ ಚಾಲನೆ ದೊರೆಯಲಿದೆ.[ದುರ್ಯೋಧನನ ಹೆಸರು ಕೇಳುತ್ತಿದ್ದಂತೆ ಆತನ ಕಣ್ಣಲ್ಲಿ ನೀರು ಬಂದಿದ್ದೇಕೆ?]

ಉದ್ಘಾಟನಾ ಸಮಾರಂಭ ಅಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. ವಿಶೇಷ ಅತಿಥಿಗಳಾಗಿ ಕವಿ ಪೇರರಸು ವೈರಮುತ್ತು ಅವರು ಭಾಗವಹಿಸಲಿದ್ದಾರೆ. ಅದೇ ದಿನ ಸ್ಮರಣ ಸಂಚಿಕೆ "ಸಾಮರಸ್ಯ' ಬಿಡುಗಡೆಯಾಗಲಿದೆ. ಕನ್ನಡ, ತೆಲುಗು ಹಾಗೂ ತಮಿಳು ಕವಿಗೋಷ್ಠಿ ನಡೆಯಲಿದ್ದು, ಜರಗನಹಳ್ಳಿ ಶಿವಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾರ್ಚ್ 5ರಂದು ಬೆಳಗ್ಗೆ 10ಕ್ಕೆ ಹಾಸ್ಯ ಕಾರ್ಯಕ್ರಮ, ಅಂದು ಸಮಾರೋಪ ಸಮಾರಂಭ ನಡೆಯಲಿದೆ.[ಎಸ್ ಎಲ್ ಭೈರಪ್ಪ ಹೊಸ ಕಾದಂಬರಿ ಉತ್ತರ ಕಾಂಡ ವಿಮರ್ಶೆ]
ಎರಡು ದಿನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದ್ದು, ರುಕ್ಮೋಜಿ ಅವರು ರಾಜಕುಮಾರ್ ಅವರ ಬಗ್ಗೆ ಬರೆದಿರುವ ಪುಸ್ತಕವನ್ನು ನಟ 'ಸಂಚಾರಿ' ವಿಜಯ್ ಮತ್ತೊಮ್ಮೆ ಲೋಕಾರ್ಪಣೆ ಮಾಡುತ್ತಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications