ವಾಲ್ಮೀಕಿ ಜಯಂತಿ ಕಾರ್ಯಕ್ರಮ ಬಹಿಷ್ಕರಿಸಿದ ಮಾಧ್ಯಮಗಳು

ಬೆಂಗಳೂರು, ಅಕ್ಟೋಬರ್ 13 : ಕರ್ನಾಟಕ ಸರ್ಕಾರ ಮಾಧ್ಯಮಗಳನ್ನು ಮತ್ತೆ ನಿರ್ಬಂಧಿಸಲು ಮುಂದಾಗಿದೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಮಾಧ್ಯಮಗಳು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದವು.

ಭಾನುವಾರ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ವಿಧಾನಸೌಧದಲ್ಲಿ ಆಯೋಜಿಸಲಾಗಿತ್ತು. ಆದರೆ, ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಕ್ರಮಕ್ಕೆ ಹೋಗದಂತೆ ಪೊಲೀಸರು ತಡೆದರು.

ಆದ್ದರಿಂದ, ಮಾಧ್ಯಮಗಳು ಕಾರ್ಯಕ್ರಮ ಬಹಿಷ್ಕರಿಸಿ ವಿಧಾನಸೌಧ ಮತ್ತು ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಿದರು. ಪ್ರತಿಪಕ್ಷ ಕಾಂಗ್ರೆಸ್ ಸರ್ಕಾರದ ನಡೆಗೆ ವಿರೋಧ ವ್ಯಕ್ತಪಡಿಸಿ ಟ್ವೀಟ್ ಮಾಡಿದೆ.

Kannada Media Boycott Valmiki Jayanti Function

ಅಕ್ಟೋಬರ್ 10 ರಿಂದ ಮೂರು ದಿನಗಳ ಕಾಲ ನಡೆದ ವಿಧಾನಸಭೆ ಅಧಿವೇಶನಕ್ಕೂ ಖಾಸಗಿ ಮಾಧ್ಯಮಗಳನ್ನು ನಿಷೇಧಿಸಲಾಗಿತ್ತು. ಚಂದನ ವಾಹಿನಿ ಮೂಲಕ ಪ್ರಸಾರದ ಲಿಂಕ್ ಪಡೆದುಕೊಳ್ಳಲು ಸೂಚನೆ ನೀಡಲಾಗಿತ್ತು.

ದೃಶ್ಯ ಮಾಧ್ಯಮ ಮಾತ್ರವಲ್ಲ, ಮುದ್ರಣ ಮಾಧ್ಯಮದ ಛಾಯಾಗ್ರಾಹಕರು ಫೋಟೋ ತೆಗೆಯದಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದರು. ಇದನ್ನು ಖಂಡಿಸಿ ಮಾಧ್ಯಮ ಪ್ರತಿನಿಧಿಗಳು ಪ್ರತಿಭಟನೆಯನ್ನು ನಡೆಸಿದ್ದರು.

ಕಾಂಗ್ರೆಸ್ ಟ್ವೀಟ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+