ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಲ್ಮೀಕಿ ಜಯಂತಿ ಕಾರ್ಯಕ್ರಮ ಬಹಿಷ್ಕರಿಸಿದ ಮಾಧ್ಯಮಗಳು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 13 : ಕರ್ನಾಟಕ ಸರ್ಕಾರ ಮಾಧ್ಯಮಗಳನ್ನು ಮತ್ತೆ ನಿರ್ಬಂಧಿಸಲು ಮುಂದಾಗಿದೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಮಾಧ್ಯಮಗಳು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದವು.

ಭಾನುವಾರ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ವಿಧಾನಸೌಧದಲ್ಲಿ ಆಯೋಜಿಸಲಾಗಿತ್ತು. ಆದರೆ, ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಕ್ರಮಕ್ಕೆ ಹೋಗದಂತೆ ಪೊಲೀಸರು ತಡೆದರು.

ಸುದ್ದಿಗೋಷ್ಠಿಗೆ ಕರೆದ ಡಿಸಿಎಂ, ಕ್ಯಾಮೆರಾ ಆನ್ ಮಾಡದೇ ಪ್ರತಿಭಟಿಸಿದ ಪತ್ರಕರ್ತರುಸುದ್ದಿಗೋಷ್ಠಿಗೆ ಕರೆದ ಡಿಸಿಎಂ, ಕ್ಯಾಮೆರಾ ಆನ್ ಮಾಡದೇ ಪ್ರತಿಭಟಿಸಿದ ಪತ್ರಕರ್ತರು

ಆದ್ದರಿಂದ, ಮಾಧ್ಯಮಗಳು ಕಾರ್ಯಕ್ರಮ ಬಹಿಷ್ಕರಿಸಿ ವಿಧಾನಸೌಧ ಮತ್ತು ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಿದರು. ಪ್ರತಿಪಕ್ಷ ಕಾಂಗ್ರೆಸ್ ಸರ್ಕಾರದ ನಡೆಗೆ ವಿರೋಧ ವ್ಯಕ್ತಪಡಿಸಿ ಟ್ವೀಟ್ ಮಾಡಿದೆ.

ಅಧಿವೇಶನಕ್ಕೆ ಮಾಧ್ಯಮ ನಿಷೇಧ; ಆದೇಶದಲ್ಲಿ ಏನಿದೆ?ಅಧಿವೇಶನಕ್ಕೆ ಮಾಧ್ಯಮ ನಿಷೇಧ; ಆದೇಶದಲ್ಲಿ ಏನಿದೆ?

Kannada Media Boycott Valmiki Jayanti Function

ಅಕ್ಟೋಬರ್ 10 ರಿಂದ ಮೂರು ದಿನಗಳ ಕಾಲ ನಡೆದ ವಿಧಾನಸಭೆ ಅಧಿವೇಶನಕ್ಕೂ ಖಾಸಗಿ ಮಾಧ್ಯಮಗಳನ್ನು ನಿಷೇಧಿಸಲಾಗಿತ್ತು. ಚಂದನ ವಾಹಿನಿ ಮೂಲಕ ಪ್ರಸಾರದ ಲಿಂಕ್ ಪಡೆದುಕೊಳ್ಳಲು ಸೂಚನೆ ನೀಡಲಾಗಿತ್ತು.

ಮಾಧ್ಯಮದವರಿಗೆ ಹೋಳಿಗೆ ಊಟ ಹಾಕಿಸುತ್ತೇನೆ ಎಂದ ದೇವೇಗೌಡರುಮಾಧ್ಯಮದವರಿಗೆ ಹೋಳಿಗೆ ಊಟ ಹಾಕಿಸುತ್ತೇನೆ ಎಂದ ದೇವೇಗೌಡರು

ದೃಶ್ಯ ಮಾಧ್ಯಮ ಮಾತ್ರವಲ್ಲ, ಮುದ್ರಣ ಮಾಧ್ಯಮದ ಛಾಯಾಗ್ರಾಹಕರು ಫೋಟೋ ತೆಗೆಯದಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದರು. ಇದನ್ನು ಖಂಡಿಸಿ ಮಾಧ್ಯಮ ಪ್ರತಿನಿಧಿಗಳು ಪ್ರತಿಭಟನೆಯನ್ನು ನಡೆಸಿದ್ದರು.

ಕಾಂಗ್ರೆಸ್ ಟ್ವೀಟ್

English summary
Police not allowed Kannada media to cover Valmiki Jayanti function at Vidhana Soudha, Bengaluru. Media boycott the function and stage the protest at statue of Mahatma Gandhi between Vidhana Soudha and Vikasa Soudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X