ಕನ್ನಡ ನಾಮಫಲಕ ಆಂದೋಲನ ಜಿಲ್ಲೆಗಳಿಗೆ ವಿಸ್ತರಣೆ; ನಾರಾಯಣ ಗೌಡ
ಬೆಂಗಳೂರು, ಡಿಸೆಂಬರ್ 27; ಬೆಂಗಳೂರು ಮಹಾನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕನ್ನಡ ನಾಮಫಲಕ ಜಾಗೃತಿ ಆಂದೋಲನ ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಹೇಳಿದೆ.
ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ. ಎ. ನಾರಾಯಣ ಗೌಡ ಈ ಕುರಿತು ಟ್ವೀಟ್ ಮಾಡಿದ್ದಾರೆ. ಇಂದು ಬೆಂಗಳೂರು ಮಹಾನಗರದಲ್ಲಿ ಹಮ್ಮಿಕೊಂಡಿದ್ದ ಕನ್ನಡ ನಾಮಫಲಕ ಜಾಗೃತಿ ಆಂದೋಲನ ಅಭೂತಪೂರ್ವ ಯಶಸ್ಸು ಕಂಡಿದೆ. ಇದಕ್ಕಾಗಿ ನನ್ನೆಲ್ಲ ಸಮರ ಸೇನಾನಿ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಪೊಲೀಸ್ ಇಲಾಖೆ ಇವತ್ತಿನ ಹೋರಾಟದ ಹಿನ್ನೆಲೆಯಲ್ಲಿ ನಮ್ಮ ಕಾರ್ಯಕರ್ತರ ವಿರುದ್ಧ ಸುಳ್ಳು ಮೊಕದ್ದಮೆ ಹೂಡುವುದು, ಕಿರುಕುಳ ನೀಡುವುದನ್ನು ಮಾಡಕೂಡದು. ಅಂಥದ್ದೇನಾದರೂ ನಡೆದರೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಬೇಕಾಗುತ್ತದೆ ಎಂದು ನಾರಾಯಣ ಗೌಡರು ಎಚ್ಚರಿಕೆ ಕೊಟ್ಟಿದ್ದಾರೆ.
ಜಿಲ್ಲೆಗಳಲ್ಲೂ ಅಭಿಯಾನ; ಬುಧವಾರ ಬೆಂಗಳೂರು ನಗರದಲ್ಲಿ ನಡೆದ ಕನ್ನಡ ನಾಮಫಲಕ ಜಾಗೃತಿ ಆಂದೋಲನವನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವಿಸ್ತರಿಸಲು ನಿರ್ಧರಿಸಿದ್ದು, ಎಲ್ಲ ಜಿಲ್ಲಾ, ತಾಲ್ಲೂಕು ಕೇಂದ್ರಗಳಿಗೆ ದೊಡ್ಡ ಮಟ್ಟದ 'ಕನ್ನಡ ಯಾತ್ರೆ'ಯನ್ನು ನಡೆಸಲಿದ್ದೇನೆ. ರಾಜ್ಯದ ಪ್ರತಿಯೊಂದು ನಾಮಫಲಕವೂ ಕನ್ನಡೀಕರಣಗೊಳ್ಳುವವರೆಗೆ ನಮ್ಮ ಆಂದೋಲನ ಮುಂದುವರೆಯಲಿದೆ ಎಂದು ನಾರಾಯಣ ಗೌಡ ಹೇಳಿದ್ದಾರೆ.
ನಾರಾಯಣ ಗೌಡರು ತಮ್ಮ ಟ್ವೀಟ್ನಲ್ಲಿ ರಾಜ್ಯ ಸರ್ಕಾರ ಫೆಬ್ರವರಿ 28ರೊಳಗೆ ನಾಮಫಲಕಗಳನ್ನು ಕನ್ನಡೀಕರಿಸಲು ಆದೇಶಿಸಿದೆ. ಹೀಗಾಗಿ ನಾವು ಕಾಯುತ್ತೇವೆ. ಆಗಲೂ ಈ ನೆಲದ ಕಾನೂನಿಗೆ, ಈ ನೆಲದ ಭಾಷೆಗೆ ಗೌರವ ನೀಡದವರ ವಿರುದ್ಧ ನಾವು ಇನ್ನೂ ದೊಡ್ಡ ಪ್ರಮಾಣದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇವತ್ತಿನ ಚಳವಳಿಯ ಸಂದರ್ಭದಲ್ಲಿ ಬೆಂಗಳೂರಿನ ನಾಗರಿಕರಿಗೆ ಆಗಿರಬಹುದಾದ ಸಣ್ಣಪುಟ್ಟ ತೊಂದರೆಗಳಿಗೆ ನಮಗೆ ಬೇಸರವಿದೆ. ಆದರೆ ಬೆಂಗಳೂರಿನಲ್ಲಿ ಕನ್ನಡವನ್ನು, ಕನ್ನಡಿಗರನ್ನು ಉಳಿಸಿಕೊಳ್ಳಲು ಇಂಥ ದೊಡ್ಡ ಪ್ರಮಾಣದ ಚಳವಳಿ ಅಗತ್ಯವಿತ್ತು ಎಂಬುದನ್ನು ಅವರು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಭಾವಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆಯ ಸಹಸ್ರಾರು ಕಾರ್ಯಕರ್ತರು ರಾಜ್ಯದ ಮೂಲೆಮೂಲೆಯಿಂದ ಹರಿದು ಬಂದು ಕನ್ನಡಿಗರ ಶಕ್ತಿಯನ್ನು ತೋರಿಸಿದ್ದಾರೆ. ಸಾವಿರಾರು ಕನ್ನಡೇತರ ನಾಮಫಲಕಗಳನ್ನು ಕಿತ್ತುಹಾಕಿದ್ದಾರೆ. ನಮ್ಮ ಪ್ರತಿಭಟನೆ ಶಾಂತಿಯುತವಾಗಿಯೇ ನಡೆದಿದೆ. ಕಾರ್ಯಕರ್ತರ ಗುರಿ ಕೇವಲ ಕನ್ನಡೇತರ ನಾಮಫಲಕಗಳೇ ಆಗಿದ್ದವೇ ವಿನಃ ವ್ಯಕ್ತಿಗಳು, ಸಂಸ್ಥೆಗಳು ಆಗಿರಲಿಲ್ಲ. ಹೀಗಾಗಿ ಯಾವುದೇ ರೀತಿಯ ಹಿಂಸಾತ್ಮಕ ಚಳವಳಿ ನಾವು ನಡೆಸಿರುವುದಿಲ್ಲ ಎಂದು ನಾರಾಯಣ ಗೌಡರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಕನ್ನಡವನ್ನು, ಕನ್ನಡಿಗರನ್ನು ತಿರಸ್ಕಾರದಿಂದ ನೋಡುತ್ತಿದ್ದವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ಪಷ್ಟ ಸಂದೇಶ ನೀಡಿದೆ. ಕನ್ನಡಿಗರ ತಾಳ್ಮೆಯನ್ನು ಕೆಣಕಿದರೆ ಏನಾಗುತ್ತದೆ ಎಂಬುದಕ್ಕೆ ಇವತ್ತಿನ ಪ್ರತಿಭಟನೆ ಉದಾಹರಣೆ. ಕರ್ನಾಟಕ ರಕ್ಷಣಾ ವೇದಿಕೆ ಇಂದು ಬೆಂಗಳೂರು ಮಹಾನಗರದಲ್ಲಿ ಹಮ್ಮಿಕೊಂಡಿದ್ದ ಕನ್ನಡ ನಾಮಫಲಕ ಜಾಗೃತಿ ಆಂದೋಲನ ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.
ಕನ್ನಡಿಗರ ಮೇಲೆ ಹಿಂದಿ ನುಡಿಯನ್ನು ಹೇರುವುದು ಕ್ರೌರ್ಯ. ಇದು ಮೋಸದಿಂದ ಕನ್ನಡ ಜನಾಂಗದ ಮೇಲೆ ಹೂಡಲಾಗಿರುವ ಪರೋಕ್ಷ ಯುದ್ಧ. ದೇಶ ಯಾವತ್ತಿಗೂ ಒಂದಾಗಿರಬೇಕೆಂದು ಬಯಸುವುದಾದರೆ ಹಿಂದಿ ಹೇರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಹಿಂದಿಹೇರಿಕೆ ದೇಶದ ಐಕ್ಯತೆಗೆ ಮಾರಕ ಎಂದು ತಿಳಿಸಿದ್ದಾರೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
Prem: ಸರ್ಸೆ ಸೆರಗ ಹಾಡನ್ನ ಎಲ್ರೂ ತಪ್ಪಾಗಿ ಅರ್ಥ ಮಾಡ್ಕೊಂಡಿದ್ದಾರೆ, ನನ್ನ ಉದ್ದೇಶ ಅದಾಗಿರಲಿಲ್ಲ: ಪ್ರೇಮ್ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications