ಜನವರಿ 16ರಿಂದ ಭೈರಪ್ಪನವರ 'ಉತ್ತರ ಕಾಂಡ' ಎಲ್ಲೆಡೆ ಲಭ್ಯ
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ(ಎಸ್ ಎಲ್ ಭೈರಪ್ಪ) ಅವರ ಹೊಚ್ಚ ಹೊಸ ಕಾದಂಬರಿ 'ಉತ್ತರ ಕಾಂಡ' ಲೋಕಾರ್ಪಣೆಗೆ ಸಿದ್ಧವಾಗಿದೆ. ಜನವರಿ 16 ರಿಂದ ಎಲ್ಲಾ ಪ್ರಮುಖ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಲಭ್ಯವಿದೆ
ಬೆಂಗಳೂರು, ಜನವರಿ 10: ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ(ಎಸ್ ಎಲ್ ಭೈರಪ್ಪ) ಅವರ ಹೊಚ್ಚ ಹೊಸ ಕಾದಂಬರಿ 'ಉತ್ತರ ಕಾಂಡ' ಲೋಕಾರ್ಪಣೆಗೆ ಸಿದ್ಧವಾಗಿದೆ. ಜನವರಿ 16 ರಿಂದ ಎಲ್ಲಾ ಪ್ರಮುಖ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಎಸ್ ಎಲ್ ಭೈರಪ್ಪ ಅವರ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ.
ಕಾದಂಬರಿಯ ಬಗ್ಗೆ ಹೀಗೆ ಬರೆಯಲಾಗಿದೆ: ನಲವತ್ತು ವರ್ಷಗಳ ಹಿಂದೆ 'ಪರ್ವ'ದಲ್ಲಿ ದ್ರೌಪದಿ, ಕುಂತಿ, ಗಾಂಧಾರಿಯರನ್ನು ಚಿತ್ರಿಸಿದ ಭೈರಪ್ಪನವರು ಇಲ್ಲಿ ರಾಮಕಥೆ ಯನ್ನು ಸೀತೆಯ ಅನುಭವ ಮತ್ತು ಚಿಂತನೆಯ ಮೂಲಕ ಮೂಡಿಸಿದ್ದಾರೆ. ಮೂಲ ವಾಲ್ಮೀಕಿ ರಾಮಾಯಣದಲ್ಲಿ ಸೀತಾ ಪರಿತ್ಯಾಗವು ಉತ್ತರ ಕಾಂಡದಲ್ಲಿ ಬರುತ್ತದೆ.[ಎಸ್ಎಲ್ ಭೈರಪ್ಪನವರ ವೆಬ್ ತಾಣ]

'ಜೋಡಿ ಹಕ್ಕಿಗಳಲ್ಲಿ ಬೇಡನು ಒಂದನ್ನು ಹೊಡೆದು ಅಗಲಿಸಿದ ನೋವಿನ ಭಾವವನ್ನು ವ್ಯಕ್ತಪಡಿಸಲು ನಾನು ರಾಮ ಸೀತೆಯರ ಜೀವನವನ್ನು ಬಳಸಿಕೊಂಡೆ. ಇದನ್ನಾದರೂ ಸುಖಾಂತ್ಯ ಮಾಡಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಕವಿಯು ಏನನ್ನು ತಾನೆ ಬದಲಿಸಬಲ್ಲ? ಎಂಬ ವೈಫಲ್ಯ ಬಾಧಿಸುತ್ತಿದೆ,' ಎಂದು ವಾಲ್ಮೀಕಿಮಹರ್ಷಿಗಳು ಶೋಕದಲ್ಲಿ ಮುಳುಗುತ್ತಾರೆ.
ಪುಟಗಳು - 336
ಬೆಲೆ - ರೂ.375 (ದಪ್ಪರಟ್ಟು)
ಪ್ರಕಾಶಕರು - ಸಾಹಿತ್ಯ ಭಂಡಾರ
ಜನವರಿ 16 ರಿಂದ ಎಲ್ಲಾ ಪ್ರಮುಖ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಲಭ್ಯವಿದೆ.
ಹೆಚ್ಚಿನ ಮಾಹಿತಿಗೆ ಈ ಪುಟ ನೋಡುತ್ತಿರಿ: http://slbhyrappa.in/kn/uttara-kanda/
ಆನ್ ಲೈನ್ ನಲ್ಲಿ ಖರೀದಿಗಾಗಿ: http://www.navakarnatakaonline.com/uttarakanda-by-s-l-byrappa
(ಒನ್ಇಂಡಿಯಾ ಸುದ್ದಿ)
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications