ಕನ್ನಡ ರಾಜ್ಯೋತ್ಸವ 15 + ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ!
Karnataka Rajyotsava: ಕನ್ನಡ ಎನೆ ಕುಣಿದಾಡುವುದೆನ್ನೆದೆ ಕನ್ನಡ ಎನೆ ಕಿವಿ ನಿಮಿರುವುದು.. ಕಾಮನ ಬಿಲ್ಲನು ಕಾಣುವ ಕವಿಯೊಳು ತೆಕ್ಕನೆ ಮನ ಮೈ ಮರೆಯುವುದು.. ಕನ್ನಡ ಕನ್ನಡ ಹ ಸವಿಗನ್ನಡ.. ನವೆಂಬರ್ 1 ಕನ್ನಡ ರಾಜ್ಯೋತ್ಸವ. ಪ್ರತಿ ಕನ್ನಡಿಗನಿಗೂ ಇದು ವಿಶೇಷ ಹಬ್ಬ.
ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು.. ಎನ್ನುವ ಸಾಲುಗಳನ್ನು ಕೇಳಿ ರೋಮಾಂಚಿತರಾಗದೆ ಇರುವ ಕನ್ನಡಿಗನೇ ಇಲ್ಲ. ನಿಮಗೆಲ್ಲ ಕನ್ನಡ ರಾಜ್ಯೋತ್ಸವ ಶುಭಾಶಯಗಳು. ಕನ್ನಡಿಗರಿಗೆ ವಾಟ್ಸಾಪ್, ಸಂದೇಶ ಹಾಗೂ ಫೇಸ್ಬುಕ್ ಸ್ಟೇಟಸ್ ಸೇರಿದಂತೆ ಎಲ್ಲಾ ಮಾದರಿಯ ಶುಭಾಶಯ ಸಾಲುಗಳು ಇಲ್ಲಿವೆ.

ಕನ್ನಡಿಗರಿಗೆ ವರ್ಷವೆಲ್ಲವೂ ಕನ್ನಡ ರಾಜ್ಯೋತ್ಸವವೇ. ನವೆಂಬರ್ 1 ಅದರ ಮೂರ್ತರೂಪ. ಈ ದಿನ ಕನ್ನಡಿಗರಿಗೆ ಶುಭಕೋರುವ ಸಂದೇಶಗಳು ಇಲ್ಲಿವೆ. ಕನ್ನಡದ ಪ್ರಖ್ಯಾತ ಕವಿಗಳ ಸಾಲುಗಳು ಸಹ ಇಲ್ಲಿವೆ.
ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು
ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು
- ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು
--------------
ಪ್ರತಿಯೊಬ್ಬ ಕನ್ನಡಿಗನಿಗೂ ವಿಶೇಷ ಹಬ್ಬವಿದು. ಕನ್ನಡ ನಾಡಿನ ಎಲ್ಲರೂ ಸೇರಿ ಆಚರಿಸುವ ನಮ್ಮ ಹೆಮ್ಮೆಯ ಕರುನಾಡ ಜನ್ಮದಿನವಿದು. ಕನ್ನಡ ರಾಜ್ಯೋತ್ಸವದ ಆತ್ಮೀಯ ಶುಭಾಶಯಗಳು
ಬಾಳಿನ ಬೆನ್ನು ಹತ್ತಿ.. ನೂರಾರು ಊರು ಸುತ್ತಿ...
ಏನೇನೋ ಕಂಡ ಮೇಲೂ.. ನಮ್ಮೂರೇ ನಮಗೆ ಮೇಲೂ.
ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು
--------------
ನರಕಕ್ಕಿಳ್ಸಿ ನಾಲ್ಗೆ ಸೀಳ್ಸಿ
ಬಾಯಿ ಒಲಿಸಾಕಿದ್ರೂನೆ
ಮೂಗ್ನಲ್ ಕನ್ನಡ ಪದವಾಡ್ತೀನಿ
ನನ್ ಮನಸ್ನ್ ನೀ ಕಾಣೆ!
--------------
ನವೆಂಬರ್ ಒಂದರಂದು ಮಾತ್ರವಲ್ಲ. ವರ್ಷ ಪೂರ್ತಿ ಕನ್ನಡ ರಾಜ್ಯೋತ್ಸವ ಆಚರಿಸೋಣ, ಕನ್ನಡಿಗರೆಲ್ಲರಿಗೂ ರಾಜ್ಯೋತ್ಸವದ ಶುಭಾಶಯ.
--------------
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ಒಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು
- ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ನಲ್ಮೆಯ ಶುಭಾಶಯಗಳು
--------------
ನನ್ನ ಕನ್ನಡ ನುಡಿಯೆ ನೀನೆಷ್ಟು ಚಂದ
ಏನು ಗೀಚಿದರು ಆಗುವುದು ಶ್ರೀಗಂಧ
- ಎಲ್ಲಾ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು
--------------
ಕನ್ನಡದಲ್ಲಿ ನಾವಿದ್ರೆ ಸಾಕಾಗೊಲ್ಲ
ಕನ್ನಡ ನಮ್ಮೊಳಗೆ ಇದ್ದಾಗ ಮಾತ್ರವೇ ಜೀವನ
ಸಾರ್ಥಕವೆನ್ನಿಸೋದು...
--------------

ನೀ ಮೆಟ್ಟುವ ನೆಲ - ಅದೆ ಕರ್ನಾಟಕ;
ನೀನೇರುವ ಮಲೆ - ಸಹ್ಯಾದ್ರಿ.
ನೀ ಮುಟ್ಟುವ ಮರ - ಶ್ರೀಗಂಧದ ಮರ;
ನೀ ಕುಡಿಯುವ ನೀರ್ - ಕಾವೇರಿ.
ಪುಣ್ಯ ಭೂಮಿಯಲ್ಲಿ ಜನಿಸಿದ ನಾವೇ ಧನ್ಯರು. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು..
--------------
ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು
ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು
ಬದುಕಿದು ಜಟಕ ಬಂಡಿ,
ಇದು ವಿಧಿ ಓಡಿಸುವ ಬಂಡಿ
--------------
ಕರುನಾಡಿಗೆ ಬಂದು ಕನ್ನಡ ಭಾಷೆಯನ್ನು ಗೌರವಿಸುವವರು, ಕನ್ನಡ ಕಲಿತವರೂ ನಮ್ಮವರೇ..
ಕರುನಾಡಿಗೆ ಋಣಿಯಾಗಿರುವ ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ನಲ್ಮೆಯ ಶುಭಾಶಯಗಳು
--------------
ಭವ್ಯ ಇತಿಹಾಸ, ಪರಂಪರೆ ಕರುನಾಡಿಗಿದೆ. ವಿಶ್ವ ಲಿಪಿಗಳ ರಾಣಿ ಕನ್ನಡ
ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು
--------------
ಹಸಿರಾಗಲಿ ಕರ್ನಾಟಕ
ಉಸಿರಾಗಲಿ ಕನ್ನಡ
ಕನ್ನಡ ರಾಜ್ಯೋತ್ಸವದ ಸಂಭ್ರಮ ಇಂದು
--------------
ಗಗನ ಗಾಳಿಯಲಿ ಜಿಗಿದು ಜೀವಿಸಲಿ ಚೆಲುವ ಕನ್ನಡದ ಬಾವುಟ!
ಕನ್ನಡ ರಾಜ್ಯೋತ್ಸವದ ಶುಭಾಶಯ
--------------
ನಮ್ಮ ನುಡಿ ಕನ್ನಡ
ಸಿರಿನಾಡನು ಕಟ್ಟಲಿಕ್ಕೆ
ಬರ್ರಿ ನಮ್ಮ ಸಂಗಡ
ಕನ್ನಡ ಕನ್ನಡ ಬರ್ರಿ ನಮ್ಮ ಸಂಗಡ
--------------
ಸಾಧುಂಗೆ ಸಾಧು
ಮಾಧುರ್ಯಂಗೆ ಮಾಧುರ್ಯನ್
ಬಾಧಿಪ್ಪ ಕಲಿಗೆ ಕಲಿಯುಗ ವಿಪರೀತನ್
ಮಾಧವನೀತನ್ ಪೆರನಲ್ಲ...
ಎಲ್ಲಾ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು
--------------
ಕಲಿಯೋಕೆ ಕೋಟಿ ಭಾಷೆ, ಆಡೂಕೇ ಒಂದೇ ಭಾಷೆ, ಕನ್ನಡ.. ಕನ್ನಡ.. ಕಸ್ತೂರಿ ಕನ್ನಡ ಎಲ್ಲರಿಗೂ ಕೂಡ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications