Kannada Rajyotsava 2022 : ಈ ಬಾರಿ ರಾಜ್ಯೋತ್ಸವ ಗಮ್ಮತ್ತು; ಕೋಟಿ ಜನರಿಂದ ಕನ್ನಡ ಹಾಡು
ಬೆಂಗಳೂರು, ಅ. 12: ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯ ಸರಕಾರ ಭರ್ಜರಿ ತಯಾರಿ ನಡೆಸಿದೆ. ನವೆಂಬರ್ 1ರಂದು ಇರುವ ರಾಜ್ಯೋತ್ಸವದ ಹಬ್ಬದ ಕಾರ್ಯಕ್ರಮಗಳು ಅಕ್ಟೋಬರ್ 28ರಿಂದ ಶುರುವಾಗಲಿವೆ ಎಂದು ಕೇಂದ್ರ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ಈ ಬಾರಿಯ 67ನೇ ಕನ್ನಡ ರಾಜ್ಯೋತ್ಸವದ ವಿಶೇಷತೆ ಎಂದರೆ ಒಂದು ಕೋಟಿ ಜನರು ಏಕಕಾಲದಲ್ಲಿ ಕನ್ನಡ ಹಾಡುಗಳನ್ನು ಹಾಡಲಿದ್ದಾರೆ.
"ಕಳೆದ ವರ್ಷದ ರಾಜ್ಯೋತ್ಸವದಂದು ಒಂದು ಲಕ್ಷ ಜನರು ಹಾಡಿದ್ದರು. ಈ ವರ್ಷ ಒಂದು ಕೋಟಿ ಜನರು ಹಾಡುತ್ತಾರೆ. ಕನ್ನಡ ನಾಡು ನುಡಿಯನ್ನು ಸಂಭ್ರಮಿಸಲು ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು" ಎಂದು ಸಚಿವ ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡ ಹಾಡುಗಳನ್ನು ಹಾಡಲು ವಿವಿಧೆಡೆ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. "ನನ್ನ ನಾಡು ನನ್ನ ಹಾಡು" ಹೆಸರಿನ ಈ ಕಾರ್ಯಕ್ರಮವು ರಾಜ್ಯಾದ್ಯಂತ 10 ಸಾವಿರ ಕಡೆ ನಡೆಯಲಿದೆ. ವಿದೇಶಗಳಲ್ಲೂ ಕಾರ್ಯಕ್ರಮಗಳು ನಡೆಯಲಿವೆ.
ನಾಡಗೀತೆ ಸೇರಿದಂತೆ ಹಲವು ಹಾಡುಗಳನ್ನು ಈ ಕಾರ್ಯಕ್ರಮದಲ್ಲಿ ಜನರು ಆಡಲಿದ್ದಾರೆ. ಸುಮಾರು ಒಂದು ಕೋಟಿಗೂ ಹೆಚ್ಚು ಮಂದಿ ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಾಡುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.
ರಾಜ್ಯಾದ್ಯಂತ ಪ್ರತಿಯೊಂದು ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಈ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಬೀದಿ ಬೀದಿಗಳಲ್ಲಿ ಗಣೇಶೋತ್ಸವ ನಡೆವಂತೆ ಈ ಬಾರಿ ರಾಜ್ಯೋತ್ಸವದ ಗಮ್ಮತ್ತು ಇರಲಿದೆ.
ಮಾತಾಡು ಮಾತಾಡು ಕನ್ನಡ
ಕಳೆದ ವರ್ಷ 2021ರ ಕನ್ನಡ ರಾಜ್ಯೋತ್ಸವದಲ್ಲಿ "ಮಾತಾಡು ಮಾತಾಡು ಕನ್ನಡ" ಎಂಬ ಅಭಿಯಾನ ನಡೆದಿತ್ತು. ಪ್ರತಿಯೊಬ್ಬರೂ ಕೂಡ ಮನೆ ಮತ್ತು ಕಚೇರಿಗಳಲ್ಲಿ ಎಲ್ಲರ ಜೊತೆ ಕನ್ನಡದಲ್ಲಿ ಮಾತನಾಡುವಂತೆ ಪ್ರೇರೇಪಿಸಲಾಗಿತ್ತು. 14 ದೇಶಗಳಲ್ಲಿನ ಕನ್ನಡಿಗರು ಆ ಅಭಿಯಾನದಲ್ಲಿ ಪಾಲ್ಗೊಂಡಿದ್ದು ವಿಶೇಷ. ಅಲ್ಲದೇ ಕಳೆದ ವರ್ಷವೂ ವಿವಿಧ ಕಡೆ ಹಾಡುಗಳ ಕಾರ್ಯಕ್ರಮಗಳನ್ನು ಇಡಲಾಗಿತ್ತು. ಆಗ 1 ಲಕ್ಷ ಜನರು ಹಾಡುಗಳನ್ನು ಹಾಡಿದ್ದರು.
67ನೇ ರಾಜ್ಯೋತ್ಸವ
ಈಗಿರುವ ಕರ್ನಾಟಕದ ಪ್ರದೇಶಗಳು ಸ್ವಾತಂತ್ರ್ಯಪೂರ್ವದಲ್ಲಿ ಬ್ರಿಟಿಷ್ ಆಳ್ವಿಕೆ ವೇಳೆ ಮದ್ರಾಸ್, ಮುಂಬೈ, ಹೈದರಾಬಾದ್ ಪ್ರಾಂತ್ಯಗಳಲ್ಲಿ ಹಂಚಿಹೋಗಿದ್ದವು. ಕನ್ನಡ ಭಾಷಿಕರ ಪ್ರದೇಶಗಳನ್ನು ಒಗ್ಗೂಡಿಸುವ ಕಾರ್ಯ 20ನೇ ಶತಮಾನದ ಆರಂಭದಿಂದಲೇ ನಡೆಯತೊಡಗಿತ್ತು.
ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ 1956 ನವೆಂಬರ್ 1ರಂದು ಭಾಷೆ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಣೆ ಮಾಡಲಾಯಿತು. ಆಗ ಮೈಸೂರು ರಾಜ್ಯದ ಉದಯವಾಯಿತು. 1973ರಲ್ಲಿ ಕರ್ನಾಟಕ ಹೆಸರು ಚಾಲನೆಗೆ ತರಲಾಯಿತು.
1956ರ ನವೆಂಬರ್ 1ರಂದು ರಾಜ್ಯವಾಗಿ ಉದಯವಾದ್ದರಿಂದ ಅಂದಿನಿಂದ ಪ್ರತೀ ವರ್ಷ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಈಗ 67ನೇ ರಾಜ್ಯೋತ್ಸವವಾಗಿದೆ.
(ಒನ್ಇಂಡಿಯಾ ಸುದ್ದಿ)
-
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ











Click it and Unblock the Notifications