Get Updates
Get notified of breaking news, exclusive insights, and must-see stories!

ಕನ್ನಡ ರಾಜ್ಯೋತ್ಸವ ಪ್ರಶಸ್ತಿ‌ಗೆ ಆಯ್ಕೆ ಸಮಿತಿ ರಚನೆ, ಅರ್ಜಿ ಸಲ್ಲಿಕೆ ಹೇಗೆ?

ಬೆಂಗಳೂರು, ಅಕ್ಟೋಬರ್ 01: ಕರ್ನಾಟಕ ಸರ್ಕಾರ 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾಧಕರನ್ನು ಆಯ್ಕೆ ಮಾಡಲು ಸಮಿತಿ ರಚನೆ ಮಾಡಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕಲು ಆನ್‌ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲು ಸಮಿತಿ ರಚಿಸಲಾಗಿದೆ. 38 ಸದಸ್ಯರನ್ನೊಳಗೊಂಡ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯು ಅರ್ಹರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ.

Kannada Rajyotsava Award 2023 How To File Applications

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯುವ ಸಮಿತಿಯ ಸಭೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್ 1ರಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಆನ್‌ಲೈನ್ ಮೂಲಕ ಅರ್ಜಿ ಹಾಕಿ; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ. 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಶಿಫಾರಸ್ಸು ಮಾಡಲು ಸಾರ್ವಜನಿಕರಿಂದ ನಾಮನಿರ್ದೇಶನವನ್ನು ಆಹ್ವಾನಿಸಲಾಗಿದೆ.

ನಾಮನಿರ್ದೇಶನದ ಅವಧಿಯು ಅಕ್ಟೋಬರ್ 1 ರಿಂದ 15ರ ವರೆಗೆ ಇದ್ದು, ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‌ https://sevasindhu.karnataka.gov‌.inಮೂಲಕ ಶಿಫಾರಸು ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೇಳಿದೆ.

ಕೆಲವು ವರ್ಷಗಳಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆನ್‌ಲೈನ್ ಮೂಲಕವೇ ಅರ್ಜಿಗಳನ್ನು ಸ್ವೀಕಾರ ಮಾಡುತ್ತದೆ. ಆಫ್‌ಲೈನ್‌ನಲ್ಲಿ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಇಲಾಖೆ ಸ್ಪಷ್ಟವಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಅಥವ ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ವಿವಿಧ ಕ್ಷೇತ್ರಗಳ ಗಣ್ಯರನ್ನು ಆಯ್ಕೆ ಮಾಡಿ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ.

2022ನೇ ಸಾಲಿನಲ್ಲಿ ಒಟ್ಟು 67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿತ್ತು. ಈ ಪ್ರಶಸ್ತಿಯೂ ಪ್ರಶಸ್ತಿ ಫಲಕ, 5 ಲಕ್ಷ ರೂಪಾಯಿ ನಗದನ್ನು ಒಳಗೊಂಡಿದೆ. ಈ ಪ್ರಶಸ್ತಿಗೆ ಸಾಧಕರನ್ನು ಮುಖ್ಯಮಂತ್ರಿಗಳ ನೇತೃತ್ವದ ಸಮಿತಿ ಅಂತಿಮಗೊಳಿಸುತ್ತದೆ.

ಕಳೆದ ವರ್ಷ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ರಾಷ್ಟ್ರಾದ್ಯಂತ ಅಮೃತಮಹೋತ್ಸವವನ್ನು ಆಚರಿಸಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ಸಮಾಜದಲ್ಲಿ ಉತ್ತಮ ಕಾರ್ಯವನ್ನು ನಿರ್ವಹಿಸುತ್ತಿರುವ ಅನೇಕ ಸಂಘ-ಸಂಸ್ಥೆಗಳಿದ್ದು, ಅವುಗಳನ್ನು ಗುರುತಿಸಲು ಇದು ಸದಾವಕಾಶವಾಗಿದೆ ಎಂದು ತಿಳಿಸಲಾಗಿತ್ತು.

ಅದರ ನಿಮಿತ್ತವಾಗಿ 10 ಸಂಸ್ಥೆಗಳಿಗೆ ಅಮೃತ ಮಹೋತ್ಸವದ ರಾಜ್ಯ ಪ್ರಶಸ್ತಿಯನ್ನು ನೀಡಬಹುದೆಂದು ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ನಿರ್ಧರಿಸಲಾಗಿತ್ತು. ಅದರನ್ವಯ ರಾಜ್ಯೋತ್ಸವ ಪ್ರಶಸ್ತಿ ಸಂದರ್ಭದಲ್ಲಿ 10 ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ -2022 ಅನ್ನು ನೀಡಲು ಸರ್ಕಾರವು ನಿರ್ಧರಿಸಿತ್ತು.

ಸರ್ಕಾರದ ಆದೇಶ ದಿನಾಂಕ 30/10/2022ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ರಾಷ್ಟ್ರಾದ್ಯಂತ ಅಮೃತ ಮಹೋತ್ಸವದ ಆಚರಣೆಯ ಸಂಬಂಧ 10 ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ - 2022 ಅನ್ನು ನೀಡಿ ಗೌರವಿಸಲು ಸರ್ಕಾರವು ಹರ್ಷಿಸುತ್ತದೆ ಎಂದು ಹೇಳಿತ್ತು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆ ಕೆಲವು ವರ್ಷ ವಿವಾದ ಹುಟ್ಟು ಹಾಕಿದ್ದು, ಇದೆ. ಸಾಧಕರ ಆಯ್ಕೆ, ಸಮಿತಿ ರಚನೆ ಮುಂತಾದ ವಿಚಾರ ಮುಂದಿಟ್ಟುಕೊಂಡು ಕೆಲವರು ಕೋರ್ಟ್‌ ಮೆಟ್ಟಿಲು ಸಹ ಏರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+