ಕನ್ನಡ ರಾಜ್ಯೋತ್ಸವ: ಶಿಕ್ಷಣ ಇಲಾಖೆಯಿಂದ ಅ. 28ರಂದು 'ಕೋಟಿ ಕಂಠ ಗಾಯನ'
ಬೆಂಗಳೂರು, ಅಕ್ಟೋಬರ್ 21: ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಮತ್ತು ಕಚೇರಿಗಳಲ್ಲಿ 67ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅಕ್ಟೋಬರ್ 28ರಂದು 'ಕೋಟಿ ಕಂಠ ಗಾಯನ' ಕಾರ್ಯಕ್ರಮ ಹಮ್ಮಿಕೊಂಡಿದೆ. ಅಂದು ಸರ್ಕಾರ ಸೂಚಿಸಿದ ಕನ್ನಡದ ಗೀತೆಗಳು ಮೊಳಗಲಿವೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ನನ್ನ ನಾಡು-ನನ್ನ ಹಾಡು 'ಕೋಟಿ ಕಂಠ ಗಾಯನ' ಸಮೂಹ ಕಾರ್ಯಕ್ರಮ ಆಯೋಜನೆ ಕುರಿತು ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಸಭೆ ನಡೆಸಿ ತಿರ್ಮಾನಿಸಲಾಗಿದೆ. ರಾಜ್ಯೋತ್ಸವ ಅಂಗವಾಗಿ ಸೂಚಿಸಲಾಗದ ಮೂರು ಆಯ್ದ ಗೀತೆಗಳನ್ನು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳು ಹಾಡಲಿದ್ದಾರೆ. ಮಕ್ಕಳ ಜೊತೆಗೆ ಎಲ್ಲ ಕಚೇರಿಗಳಲ್ಲಿ ನಡೆಯಲಿದೆ. ಈ ವೇಳೆ ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು, ಎಸ್ಡಿಎಂಸಿ ಆಡಳಿತ ಸಿಬ್ಬಂದಿ, ಅಧಿಕಾರಿಗಳು ಹಾಗೂ ನೌಕರರನ್ನು ಪಾಲ್ಗೊಳ್ಳುವಂತೆ ತಿಳಿಸಲಾಗಿದೆ.

ಯಾವು ಹಾಡುಗಳು ಮೊಳಗಲಿವೆ?
ಅಕ್ಟೋಬರ್ 28ರಂದು ಬೆಳಗ್ಗೆ 11ಗಂಟೆಗೆ ಕಾರ್ಯಕ್ರಮ ಜರುಗಲಿದ್ದು, ಕನ್ನಡದ ಶ್ರೇಷ್ಠತೆಯನ್ನು ಸಾರಲಾಗುತ್ತದೆ. ರಾಜ್ಯ ಸರ್ಕಾರ ಸಾಮೂಹಿಕ ಹಾಡಿಗೆ ಕೆಲವು ಕನ್ನಡದ ಹಾಡುಗಳನ್ನು ಸೂಚಿಸಿದ್ದು, ಅದರಲ್ಲಿ ಮೂರು ಹಾಡು ಹಾಡಬೇಕಿದೆ. ಮೊದಲು 'ನಾಡಗೀತೆ' ನಂತರ ಹುಯಿಲಗೊಳ ನಾರಾಯಣರಾಯರ 'ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು', ರಾಷ್ಟ್ರಕವಿ ಕುವೆಂಪು ಅವರ 'ಬಾರಿಸು ಕನ್ನಡ ಡಿಂಡಿಮವಾ',ಡಾ.ಡಿ.ಎಸ್. ಕರ್ಕಿ ಅವರ 'ಹೆಚ್ಚೇವು ಕನ್ನಡದ ದೀಪ', ಡಾ.ಚನ್ನವೀರ ಕಣವಿ ಅವರ 'ವಿಶ್ವವಿನೂತನ ವಿದ್ಯಾಚೇತನ' ಹಾಗೂ ಡಾ. ಹಂಸಲೇಖ ಅವರ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಎಂಬ ಹಾಡುಗಳನ್ನು ಹಾಡುವಂತೆ ತಿಳಿಸಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸುವುದು ಹೇಗೆ?
'ಕೋಟಿ ಕಂಠ ಗಾಯನ' ಕಾರ್ಯಕ್ರಮದಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳು ಅವಕಾಶ ನೀಡಲಾಗಿದೆ. ಇಂದಿನಿಂದ ಅಕ್ಟೋಬರ್ 28ರವರೆಗೆ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿಗೆ ಈ ವೆಬ್ಸೈಟ್ ಗೆ ಭೇಟಿ ನೀಡಿ ಕ್ಯೂರ್ ಕೋಡ್ ಸ್ಕ್ಯಾನ್ ಮಾಡಬಹುದು. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಶಾಲಾ ಮುಖ್ಯಸ್ಥರನ್ನು ಭೇಟಿ ಮಾಡಬೇಕು ಎಂದು ಸುತ್ತೋಲೆ ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications