ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆಗೆ ದಿನಾಂಕ ನಿಗದಿ
ಬೆಂಗಳೂರು, ಅಕ್ಟೋಬರ್ 13; ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ನವೆಂಬರ್ 21ರಂದು ಚುನಾವಣೆ ನಡೆಯಲಿದ್ದು, 3,10,109 ಮತದಾರರು ಹಕ್ಕು ಚಲಾವಣೆ ಮಾಡಲಿದ್ದಾರೆ.
ಕರ್ನಾಟಕ ಸರ್ಕಾರ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ, ಗಡಿನಾಡು ಘಟಕಗಳ ಅಧ್ಯಕ್ಷರ ಚುನಾವಣೆ ನಡೆಸಲು ಒಪ್ಪಿಗೆ ನೀಡಿದೆ. ಬುಧವಾರ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ ಮೇ 9ರಂದು ನಡೆಯಬೇಕಿತ್ತು. ನಾಮಪತ್ರ ಪರಿಶೀಲನೆ ಸೇರಿದಂತೆ ವಿವಿಧ ಪ್ರಕ್ರಿಯೆ ಸಹ ಪೂರ್ಣಗೊಂಡಿತ್ತು. ಆದರೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಚುನಾವಣೆ ಮುಂದೂಡಲಾಗಿತ್ತು.

ರಾಜ್ಯಾಧ್ಯಕ್ಷ ಸ್ಥಾನಕ್ಕೆ 21 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಏಪ್ರಿಲ್ 26ರಂದು ಆದೇಶ ಹೊರಡಿಸಿದ್ದ ಸರ್ಕಾರ ಚುನಾವಣಾ ಪ್ರಕ್ರಿಯೆಯನ್ನು ಮುಂದೂಡಿದ ಹಂತದಿಂದಲೇ ಯಥಾವತ್ತಾಗಿ ಮುಂದುವರೆಸಲಾಗುತ್ತದೆ ಎಂದು ಹೇಳಿತ್ತು.
ಬುಧವಾರ ಚುನಾವಣಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದು, ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ. ಸ್ಥಗಿತಗೊಂಡಿದ್ದ ಚುನಾವಣಾ ಪ್ರಕ್ರಿಯೆ ಯಥಾವತ್ತಾಗಿ ನಡೆಸುವುದಾಗಿ ತಿಳಿಸಲಾಗಿದೆ.
ವೇಳಾಪಟ್ಟಿ; ನವೆಂಬರ್ 21ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ರಾಜ್ಯದ ತಾಲೂಕು ಕೇಂದ್ರಗಳು, ಬೆಂಗಳೂರು ನಗರದಲ್ಲಿ 27 ವಿಧಾನಸಭಾ ಕ್ಷೇತ್ರದ ಆಯ್ದ ಸ್ಥಳಗಳಲ್ಲಿ ಮತದಾನ ಮಾಡಲು ಅವಕಾಶವಿದೆ.
ಜಿಲ್ಲಾ ಘಟಕಗಳ ಅಧ್ಯಕ್ಷರ ಚುನಾವಣೆ ಫಲಿತಾಂಶ ನವೆಂಬರ್ 21ರಂದೇ ಘೋಷಣೆಯಾಗಲಿದೆ. ಆದರೆ ರಾಜ್ಯಾಧ್ಯಕ್ಷರ, ಗಡಿನಾಡ ಘಟಕಗಳ ಅಧ್ಯಕ್ಷರ ಚುನಾವಣೆ ಫಲಿತಾಂಶ ನವೆಂಬರ್ 24ರಂದು ಪ್ರಕಟವಾಗಲಿದೆ.
ರಾಜ್ಯ ಘಟಕದ ಅಭ್ಯರ್ಥಿಗಳು; ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ 21 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಯಾರಿಗೆ ಗೆಲುವು ಸಿಗಲಿದೆ ಎಂಬುದು ನವೆಂಬರ್ 24ರಂದು ತಿಳಿಯಲಿದೆ.
ಮಹೇಶ್ ಜೋಶಿ, ರಾಜಶೇಖರ ಮುಲಾಲಿ, ಮ. ಚಿ. ಕೃಷ್ಣ, ವ. ಚ. ಚನ್ನೇಗೌಡ, ಬಸವರಾಜ ಶಿ. ಹಳ್ಳೂರ, ಬಾಡದ ಭದ್ರಿನಾಥ್, ಶಿವರಾಜ ಪಾಟೀಲ, ವೈ. ರೇಣುಕಾ ಸೇರಿದಂತೆ 21 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಕಣದಲ್ಲಿರುವ ಅಭ್ಯರ್ಥಿಗಳು; ರಾಜ್ಯಾಧ್ಯಕ್ಷ ಸ್ಥಾನಕ್ಕೆ 21 ಅಭ್ಯರ್ಥಿಗಳು, 30 ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ 223 ಅಭ್ಯರ್ಥಿಗಳು. ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಗಳಿಗೆ 16 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಚುನಾವಣೆಯಲ್ಲಿ 3,10,109 ಮತದಾರರು ಹಕ್ಕು ಚಲಾವಣೆ ಮಾಡಲಿದ್ದಾರೆ. ರಾಜ್ಯದ ಎಲ್ಲಾ ತಾಲೂಕುಗಳು ಹಾಗೂ ಕೆಲವು ಹೋಬಳಿ ಕೇಂದ್ರಗಳು ಸೇರಿದಂತೆ ಒಟ್ಟು 420 ಮತಗಟ್ಟೆಗಳನ್ನು ತಾಲೂಕು/ ಹೋಬಳಿ ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತದೆ.
ಆದೇಶದಲ್ಲಿ ಏನಿದೆ?; ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ/ ಜಿಲ್ಲಾ/ ಗಡಿನಾಡು ಅಧ್ಯಕ್ಷರ ಚುನಾವಣೆಯನ್ನು ನಡೆಸಲು ಸರ್ಕಾರದ 30/12/2020ರ ಆದೇಶದಂತೆ ಐಎಎಸ್ ಅಧಿಕಾರಿ ಜಿ. ಎಂ. ಗಂಗಾಧರಸ್ವಾಮಿ ಕೇಂದ್ರ ಚುನಾವಣಾಧಿಕಾರಿಗಳಾಗಿ ನೇಮಕಗೊಂಡಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣಾ ಪ್ರಕ್ರಿಯೆಯನ್ನು ಪ್ರಸ್ತುತ ಯಾವ ಹಂತದಲ್ಲಿ ಇರುತ್ತದೆಯೋ ಅಲ್ಲಿಂದ ಮುಂದಿನ ಆದೇಶದವರೆಗೂ ಮುಂದೂಡಿ, ಮುಂದೆ ಇದೇ ಚುನಾವಣೆ ಪ್ರಕ್ರಿಯೆಯನ್ನು ಮುಂದೂಡಿದ ಹಂತದಿಂದ ಯಥಾವತ್ತಾಗಿ ಮುಂದುವರೆಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿತ್ತು.
12/10/2021ರಂದು ಸರ್ಕಾರ ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆಯನ್ನು ನಡೆಸಲು ಅನುಮತಿ ನೀಡಿದೆ. ಸ್ಥಗಿತಗೊಂಡಿದ್ದ ಚುನಾವಣಾ ಪ್ರಕ್ರಿಯೆಯನ್ನು ಯಥಾಸ್ಥಿತಿಯಲ್ಲಿ ಮುಂದಿನಂತೆ ನಿಯಮಾನುಸಾರ ನಡೆಸಲು ಅಗತ್ಯ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ. ನವೆಂಬರ್ 21ರಂದು ಚುನಾವಣೆ ನಡೆಸಲಾಗುತ್ತದೆ.
-
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು?












Click it and Unblock the Notifications