Get Updates
Get notified of breaking news, exclusive insights, and must-see stories!

ಕನ್ನಡ, ತಮಿಳು, ತೆಲುಗು, ಮಲಯಾಳಂ ಈಗ ಒಂದಾಗಿ ನಿಲ್ಲಬೇಕು: ಕಮಲ್‌ ಹೇಳಿಕೆಗೆ ಕರವೇ ಮಹತ್ವದ ಟ್ವೀಟ್‌

ತಮಿಳಿನಿಂದಲೇ ಕನ್ನಡ ಹುಟ್ಟಿದ್ದು ಎನ್ನುವ ನಟ ಕಮಲ್‌ ಹಾಸನ್‌ ಅವರ ಹೇಳಿಕೆಗೆ ಕರ್ನಾಟಕದಾದ್ಯಂತ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಈ ವಿಚಾರವಾಗಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಪ್ರತಿಕ್ರಿಯಿಸಿದ್ದಾರೆ. ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರು ಕನ್ನಡ ಭಾಷೆಯು ತಮಿಳಿನಿಂದ ಉಗಮವಾಯಿತು ಎಂದು ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು, ದುರುದ್ದೇಶಪೂರಿತ ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಹದ್ದಾಗಿದೆ. ಈ ಹೇಳಿಕೆ ಅವರ ಅಜ್ಞಾನವನ್ನು ಬಯಲುಗೊಳಿಸುತ್ತದೆ. ಕನ್ನಡ ಮತ್ತು ತಮಿಳು ಭಾಷೆಗಳು ದ್ರಾವಿಡ ಭಾಷಾ ಕುಟುಂಬಕ್ಕೆ ಸೇರಿದ್ದರೂ, ಇವು ತಮ್ಮದೇ ಆದ ಸ್ವತಂತ್ರ ಇತಿಹಾಸ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಹೊಂದಿವೆ ಎಂದಿದ್ದಾರೆ.

ಕನ್ನಡ ಭಾಷೆಗೆ ಸುಮಾರು 4600-5000 ವರ್ಷಗಳ ಇತಿಹಾಸವಿದೆ. ಭಾಷಾಶಾಸ್ತ್ರೀಯ ಅಧ್ಯಯನಗಳ ಪ್ರಕಾರ, ದ್ರಾವಿಡ ಭಾಷೆಗಳು ಮೂಲ ದ್ರಾವಿಡ ಭಾಷೆಯಿಂದ (ಪ್ರೊಟೊ-ದ್ರಾವಿಡಿಯನ್) ಸುಮಾರು 2500-3000 ಕ್ರಿ.ಪೂ. ಆಸುಪಾಸಿನಲ್ಲಿ ಕವಲೊಡೆದಿವೆ. ಅಶೋಕನ ಕಾಲದ ಪ್ರಾಕೃತ ಶಾಸನಗಳಲ್ಲಿ (ಕ್ರಿ.ಪೂ. 3ನೇ ಶತಮಾನ) ಕರ್ನಾಟಕದಲ್ಲಿ ಕಂಡುಬಂದ ಕೆಲವು ಶಾಸನಗಳು ಕನ್ನಡದ ಆದಿಪದಗಳ ಬಳಕೆಯನ್ನು ಸೂಚಿಸುತ್ತವೆ. ಕನ್ನಡದ ಲಿಖಿತ ರೂಪಕ್ಕೆ 2000 ವರ್ಷಗಳ ಇತಿಹಾಸವಿದ್ದು, ಇದಕ್ಕೂ ಮುಂಚಿನ 2000 ವರ್ಷಗಳ ಭಾಷಿಕ ಇತಿಹಾಸವನ್ನು ಒಳಗೊಂಡಂತೆ, ಕನ್ನಡ ನುಡಿಯ ಒಟ್ಟಾರೆ ಇತಿಹಾಸ 4600 ವರ್ಷಗಳಿಗೂ ಹೆಚ್ಚಿನದಾಗಿದೆ ಎಂದು ಹೇಳಿದ್ದಾರೆ.

Kannada Tamil Telugu Malayalam should stand together now Karave tweets a significant response to Kamal s statement

ತಮಿಳು ಸಾಹಿತ್ಯಕ್ಕೆ ಪ್ರಾಚೀನತೆಯಿದ್ದರೂ, ತಮಿಳು ಭಾಷೆಯು ಕನ್ನಡಕ್ಕಿಂತ ಹಳೆಯದು ಎನ್ನಲು ಯಾವುದೇ ಐತಿಹಾಸಿಕ ಅಥವಾ ಭಾಷಾಶಾಸ್ತ್ರೀಯ ಆಧಾರಗಳಿಲ್ಲ. ಇತ್ತೀಚಿನ ಭಾಷಾಶಾಸ್ತ್ರೀಯ ಸಂಶೋಧನೆಗಳು ತಮಿಳು, ಕನ್ನಡ, ತುಳು, ತೆಲುಗು ಮೊದಲಾದ ದ್ರಾವಿಡ ಭಾಷೆಗಳು ಮೂಲ ದ್ರಾವಿಡ ಭಾಷೆಯಿಂದ ಏಕಕಾಲಕ್ಕೆ ವಿಕಾಸಗೊಂಡಿವೆ ಎಂದು ಸ್ಪಷ್ಟಪಡಿಸಿವೆ. ಹಲ್ಮಿಡಿ ಶಾಸನ (ಕ್ರಿ.ಶ. 450) ಕನ್ನಡದ ಅತ್ಯಂತ ಪ್ರಾಚೀನ ಲಿಖಿತ ದಾಖಲೆಯಾಗಿದ್ದು, ಕನ್ನಡದ ಸ್ವತಂತ್ರ ಅಸ್ತಿತ್ವವನ್ನು ದೃಢಪಡಿಸುತ್ತದೆ. ಇದಕ್ಕಿಂತಲೂ ಹಳೆಯ ಬ್ರಾಹ್ಮೀ ಲಿಪಿಯ ಶಾಸನಗಳು ಕರ್ನಾಟಕದ ಬನವಾಸಿ, ಚಂದ್ರವಳ್ಳಿಯಂತಹ ಕಡೆಗಳಲ್ಲಿ ಕಂಡುಬಂದಿವೆ, ಇದು ಕನ್ನಡ ಭಾಷೆಯು ತಮಿಳಿನಿಂದ ಉಗಮವಾಗಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ.

ಕನ್ನಡ ಸಾಹಿತ್ಯವು ತನ್ನದೇ ಆದ ವಿಶಿಷ್ಟ ವ್ಯಾಕರಣ, ಶಬ್ದಕೋಶ ಮತ್ತು ಶೈಲಿಯನ್ನು ಹೊಂದಿದೆ. ತಮಿಳಿನಿಂದ ಸಂಪೂರ್ಣ ಭಿನ್ನವಾಗಿದೆ. ಪಂಪ, ರನ್ನ, ಬಸವಣ್ಣ, ಕುವೆಂಪು ಮುಂತಾದ ಕವಿಗಳಿಂದ ಮತ್ತು ಎಂಟು ಜ್ಞಾನಪೀಠ ಪ್ರಶಸ್ತಿಗಳಿಂದ ಸಮೃದ್ಧವಾದ ಕನ್ನಡ ಸಾಹಿತ್ಯವು ತನ್ನ ಸ್ವತಂತ್ರ ಗುರುತನ್ನು ಶತಮಾನಗಳಿಂದ ಉಳಿಸಿಕೊಂಡಿದೆ.

ಕಮಲ್ ಹಾಸನ್ ಅವರ ಈ ಹೇಳಿಕೆಯು ದಕ್ಷಿಣ ಭಾರತದ ಜನತೆಯು ಹಿಂದಿ ಹೇರಿಕೆ ಮತ್ತು ಸಾಮ್ರಾಜ್ಯಶಾಹಿಯ ವಿರುದ್ಧ ನಡೆಸುತ್ತಿರುವ ಒಗ್ಗಟ್ಟಿನ ಹೋರಾಟಕ್ಕೆ ಗಂಭೀರ ಹಾನಿಯುಂಟುಮಾಡುತ್ತದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮೊದಲಾದ ದ್ರಾವಿಡ ಭಾಷೆಗಳು ಒಂದಾಗಿ ನಿಲ್ಲಬೇಕಾದ ಈ ಸಂದರ್ಭದಲ್ಲಿ, ಈ ಜವಾಬ್ದಾರಿಯಿಲ್ಲದ ಹೇಳಿಕೆಯು ಭಾಷಿಕ ಸಮುದಾಯಗಳ ನಡುವೆ ಒಡಕು ಮತ್ತು ಭಿನ್ನಾಭಿಪ್ರಾಯವನ್ನು ಉಂಟುಮಾಡುವ ಕೀಳುಮಟ್ಟದ ರಾಜಕೀಯ ತಂತ್ರವಾಗಿದೆ. ಇದು ಕೇವಲ ಕನ್ನಡಿಗರಿಗೆ ಅವಮಾನವಲ್ಲ, ದಕ್ಷಿಣ ಭಾರತದ ಎಲ್ಲ ಭಾಷೆಗಳ ಗೌರವಕ್ಕೆ ಧಕ್ಕೆ ತರುವ ಕೃತ್ಯವಾಗಿದೆ ಅಂತ ಅವರು ಹೇಳಿದ್ದಾರೆ.

ಕಮಲ್ ಹಾಸನ್ ಅವರು ಒಬ್ಬ ಅತ್ಯುತ್ತಮ ಕಲಾವಿದರಾಗಿದ್ದು, ಕನ್ನಡ ಸಿನಿಮಾಗಳಲ್ಲೂ ಕೆಲಸ ಮಾಡಿದ್ದಾರೆ. ಆದರೆ, ಇಂತಹ ಹೇಳಿಕೆಗಳಿಂದ ಕನ್ನಡಿಗರು ಮತ್ತು ತಮಿಳರ ನಡುವೆ ದ್ವೇಷವನ್ನು ಹುಟ್ಟುಹಾಕುವುದು ಸರಿಯಲ್ಲ. ಅವರು ತಕ್ಷಣವೇ ತಮ್ಮ ತಪ್ಪನ್ನು ಸರಿಪಡಿಸಿಕೊಂಡು, ಕನ್ನಡಿಗರ ಭಾವನೆಗಳಿಗೆ ಗೌರವ ತೋರಬೇಕೆಂದು ಒತ್ತಾಯಿಸುತ್ತೇವೆ. ಕನ್ನಡಿಗರೆಲ್ಲರೂ ಈ ರೀತಿಯ ದುರುದ್ದೇಶಪೂರಿತ ಹೇಳಿಕೆಗಳ ವಿರುದ್ಧ ಒಗ್ಗಟ್ಟಾಗಿ ಧ್ವನಿಯೆತ್ತಬೇಕೆಂದು ಕರೆ ನೀಡುತ್ತೇನೆ ಎಂದು ಅವರು ಆಗ್ರಹಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+